ವಾಡಿಯಲ್ಲಿ ಕೋವಿಡ್ ನಿಯಮ ಕಟ್ಟುನಿಟ್ಟಾಗಿ ಜಾರಿ: ವಿಠ್ಠಲ ಹಾದಿಮನಿ

0
59

ಕಲಬುರಗಿ: ಕೊವೀಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತವತಿಯಿಂದ ಹೂಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು ವಾಡಿ ಪಟ್ಟಣದಲ್ಲಿಯೂ ಕೋವಿಡ್ ನಿಯಮ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ ತಿಳಿಸಿದ್ದಾರೆ.

ಕೊರೊನಾ ಹಾವಳಿ ತಡೆಯಲು ಸಾರ್ವಜನಿಕರು ಸಹಕಾರಿಸಬೇಕು. ಸಾರ್ವಜನಿಕ ಸ್ಥಳದಲ್ಲಿ ತಿರುಗಾಡುವವರು ಹಾಗೂ ಗ್ರಹಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಹಾದಿಮನಿ ಸೂಚಿಸಿದ್ದಾರೆ.

Contact Your\'s Advertisement; 9902492681

ಬೆಂಗಳೂರಿನ ಫೈಟರ್‌ ಮೊಹಮ್ಮದ್‌ ಫರಾದ್‌ ಗೆ ಸನ್ಮಾನ

ಕೋವಿಡ್ ನಿಯಂತ್ರಣಕ್ಕಾಗಿ ಹೋಟೆಲ್, ವಾಣಿಜ್ಯ ಅಂಗಡಿ-ಮುಂಗಟ್ಟು ಸ್ಥಳದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸದಿದ್ದರೆ‌ ಪ್ರವೇಶ‌ ನಿಷೇಧಿಸಿ ಎಂದು ವಾಣಿಜ್ಯ ಅಂಗಡಿಗಳ ಮಾಲೀಕರಿಗೆ ಖಡಕ್ ಸೂಚನೆ‌ ನೀಡಿದ್ದಾರೆ.

ಒಂದು ವೇಳೆ‌ ಮಾಸ್ಕ್ ಇಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಪ್ರವೇಶ ನೀಡಿದಲ್ಲಿ ಅಂತಹ‌ ವಾಣಿಜ್ಯ ಅಂಗಡಿಗಳ‌ ಮಾಲೀಕರಿಗೆ ದಂಡ ಹಾಕಿ‌ ಕಾನೂನು‌ ಕ್ರಮ‌ ಕೈಗೊಳ್ಳಲಾಗುವುದಾಗಿ ಎಂದು ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here