ಶಾಲೆಗಳಲ್ಲೇ ಬಿಸಿಯೂಟ ಸಿದ್ಧಪಡಿಸಿ ಮಕ್ಕಳಿಗೆ ವಿತರಿಸಿ

ಕಲಬುರಗಿ: ಆರನೇ ತರಗತಿಯಿಂದ 10 ನೇ ತರಗತಿಗಳ ವರೆಗೂ ಶಾಲಾ ತರಗತಿಗಳು ಆರಂಭವಾಗಿರುವದರಿಂದ ಹಿಂದಿನಂತೆ ಬಿಸಿಯೂಟ ಶಾಲೆಗಳಲ್ಲೇ ಸಿದ್ಧಪಡಿಸಿ ನೀಡುವಂತೆ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಅವರ ಆಗ್ರಹಕ್ಕೆ ಗುರುವಾರ ಸದನದಲ್ಲಿ ಸ್ಪಂದಿಸಿರುವ ಶಿಕ್ಷಣ ಸಚಿವ ಸುರೇಶ ಕುಮಾರ್ ಕೊರೋನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸ್ಪಷ್ಟ ನಿರ್ದೇಶನ- ಅನುಮತಿ ಕೋರಿ ಕೇಂದ್ರಕ್ಕೆ ಪತ್ರ ಬರೆಯಲಾಗಿದ್ದು ಅಲ್ಲಿಂದ ಅನುಮತಿ ಬಂದ ನಂತರ ಹಿಂದಿನಂತೆಯೇ ಬಿಸಿಯೂಟ ಶಾಲೆಗಳಲ್ಲೇ ಸಿದ್ಧಪಡಿಸಲು ಅಗತ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದ್ದಾರೆ.

ಕೋವಿಡ್ ಮಹಾಮಾರಿಯಿಂದಾಗಿ ಬಿಸಿಟೂಯ ಯೋಜನೆಯ ಸ್ವರೂಪ ಬದಲಯಿಸಲಾಗಿದೆಯೇ ಹೊರತು ಯೋಜನೆ ಸ್ಥಗಿತಗೊಂಡಿಲ್ಲ. ವೇಳಾಪಟ್ಟಿಯಂತೆ ಶೈಕ್ಷಣಿಕ ವರ್ಷ ಆರಂಭಿಸಲಾಗದ ಕಾರಣ ಹಾಗೂ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಪಾಲನೆ ಹಿನ್ನೆಲೆÉಯಲ್ಲಿ   ನಿಗದಿತ ಪ್ರಮಾಣದಲ್ಲಿ ಆಹಾರ ಧಾನ್ಯಗಳನ್ನು ತಯಾರಿಕೆ ವೆಚ್ಚದ ಮೊತ್ತಕ್ಕೆ ಸಮನಾಗಿ ಆಹಾರ ಭದ್ರತಾ ಭತ್ಯೆಯ ರೂಪದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಿ ಮಧ್ಯಾಹ್ನದ ಉಪಹಾರ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ ಎಂದು ಸಚಿವ ಸುರೇಶ ಕುಮಾರ್ ಹೇಳಿದ್ದಾರೆ.

ಉಪಚುನಾವಣೆ; ಕಾಂಗ್ರೆಸ್ ಮುಖಂಡರ ಸಭೆ ಶನಿವಾರ

ಆದಾಗ್ಯೂ ಶಾಲೆಗಳಲ್ಲೇ ಅಡುಗೆ ಸಿದ್ಧಪಡಿಸಿ ಮಕ್ಕಳಿಗೆ ಬಿಸಿಟೂಯ ವ್ಯವಸ್ಥೆ ಮಾಡುವ ಬಗ್ಗೆ ಕೇಂದ್ರದ ನುಮತಿ ಕೋರಲಾಗಿದೆ. ಅನುಮತಿ ಬಂದ ನಂತರ ಕೋವಿಡ್- 19 ತಾಂತ್ರಿಕ ಸಲಹಾ ಸಮೀತಿ ಸಲಹೆ ಪಡೆದು ಪರಿಸ್ತಿತಿ ಅವಲೋಕಿಸಿ ಸುಧಾರಣೆ ಕ್ರಮಗಳೊಂದಿಗೆ ಶಾಳೆಗಳಲ್ಲೇ ಬಿಸಿಯೂಟ ಸಿದ್ಧಪಡಿಸುವದನ್ನು ಆರಂಭಿಸಲಾಗುತ್ತದೆ ಎಂದೂ ಸುರೇಶ ಕುಮಾರ್ ಅವರು ಶಾಸಕ ಡಾ. ಅಜಯ್ ಸಿಂಗ್ ಅವರ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿದ್ದಾರೆ.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420