ಮಾಜಿ ಶಾಸಕ ವಾಲ್ಮೀಕಿ ನಾಯಕ ನಿಧನ

2
53

ಚಿತ್ತಾಪುರ: ಮೀಸಲು ಮತಕ್ಷೇತ್ರದ ಮಾಜಿ ಶಾಸಕ, ಬಿಜೆಪಿಯ ಹಿರಿಯ ಮುಖಂಡ ವಾಲ್ಮೀಕಿ ನಾಯಕ (72) ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೂರು ಬಾರಿ ಚಿತ್ತಾಪುರ ಮೀಸಲು ಮತಕ್ಷೇತ್ರಕ್ಕೆ ಸ್ಪರ್ಧಿಸಿ ಸೋತರು. ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಲೋಕಸಭೆಗೆ ಆಯ್ಕೆಯಾದ ನಂತರ 2009ರ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ವಿರುದ್ಧ ಗೆಲವು ಸಾಧಿಸಿದರು.

Contact Your\'s Advertisement; 9902492681

ಸಾಹಿತ್ಯ ಮತ್ತು ಸಾಂಸ್ಕೃತಿಕ ದೀಪಮಾಲೆ, ಸಾಹಿತಿ ಮಳಲಿ ವಸಂತಕುಮಾರರೂ..!

1987 ರಲ್ಲಿ ವಾಡಿ ಪಟ್ಟಣ ಪಂಚಾಯತಿಯ ಪ್ರಧಾನರಾಗಿ ಸೇವೆ.ವಾಡಿ ಎಸಿಸಿ ಕಂಪನಿಯಲ್ಲಿ ನೌಕರರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಪತ್ನಿ ಸೋನಾಬಾಯಿ, ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಶನಿವಾರ ಮಧ್ಯಾಹ್ನ 1:00 ಗಂಟೆಗೆ ವಾಡಿ ಪಟ್ಟಣದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here