ಸಾಹಿತಿ ವಿಶ್ವನಾಥ ಭಕರೆ ಅವರ ಶಿವರುದ್ರಯ್ಯನ ಶಿವತಾಂಡವ ಕೃತಿ ಜನಾರ್ಪಣೆ 21ರಂದು

0
69

ಕಲಬುರಗಿ: ಆಳಂದೆ ಸಾಸಿರನಾಡು ಸಾಹಿತ್ಯ, ಸಾಂಸ್ಕೃತಿಕ ವೇದಿಕೆ ಕಲಬುರಗಿ ಹಾಗೂ ಬಸವೇಶ್ವರ ಸಮಾಜ ಸೇವಾ ಬಳಗ ಕಲಬುರಗಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವನಾಥ ಭಕರೆ ರಚಿಸಿದ ‘ಶಿವರುದ್ರಯ್ಯನ ಶಿವತಾಂಡವ’ ಕಥಾ ಸಂಕಲನ ಜನಾರ್ಪಣೆ ಕಾರ್ಯಕ್ರಮ ನಗರದ ಚೇಂಬರ್ ಆಪ್ ಕಾಮರ್ಸ್ ಸಭಾಂಗಣದಲ್ಲಿ ಮಾ. 21ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ವೇದಿಕೆ ಹಾಗೂ ಬಳಗದ ಪದಾಧಿಕಾರಿಗಳಾದ ನರಸಪ್ಪ ಬಿರಾದಾರ, ರಾಜಶೇಖರ ಮರಡಿ, ಗಣೇಶ ಪಾಟೀಲ ಹಾಗೂ ಡಾ. ಸೂರ್ಯಕಾಂತ ಪಾಟೀಲ ತಿಳಿಸಿದ್ದಾರೆ.

ಮಾಜಿ ಶಾಸಕ ಬಿ.ಆರ್. ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ ಡಾ. ಕಾಶಿನಾಥ ಅಂಬಲಗಿ ಕೃತಿ ಜನಾರ್ಪಣೆ ಮಾಡಲಿದ್ದಾರೆ. ಪತ್ರಕರ್ತ ಲೇಖಕ ಡಾ. ಶಿವರಂಜನ್ ಸತ್ಯಂಪೇಟೆ ಕೃತಿ ಕುರಿತು ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ಮಾಜಿ ಶಾಸಕ ವಾಲ್ಮೀಕಿ ನಾಯಕ ನಿಧನ

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಅಪ್ಪಾರಾವ ಅಕ್ಕೋಣಿ, ಬಂಡಾಯ ಸಾಹಿತಿ ಡಾ. ಪ್ರಭು ಖಾನಾಪುರೆ, ಕಲಬುರಗಿ ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಮುಳೇಗಾಂವ, ಪ್ರಕಾಶಕ ಬಸವರಾಜ ಕೊನೇಕ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಚಿಂತಕ ಪ್ರೊ.‌ಆರ್.ಕೆ. ಹುಡಗಿ ಅಧ್ಯಕ್ಷತೆ ವಹಿಸಲಿದ್ದಾರೆ . ಇದೇ ವೇಳೆಯಲ್ಲಿ 45ಕ್ಕೂ ಹೆಚ್ಚು ಕವಿ, ಸಾಹಿತಿ, ಲೇಖಕರನ್ನು ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here