ಕಲಬುರಗಿ: ಆಳಂದೆ ಸಾಸಿರನಾಡು ಸಾಹಿತ್ಯ, ಸಾಂಸ್ಕೃತಿಕ ವೇದಿಕೆ ಕಲಬುರಗಿ ಹಾಗೂ ಬಸವೇಶ್ವರ ಸಮಾಜ ಸೇವಾ ಬಳಗ ಕಲಬುರಗಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವನಾಥ ಭಕರೆ ರಚಿಸಿದ ‘ಶಿವರುದ್ರಯ್ಯನ ಶಿವತಾಂಡವ’ ಕಥಾ ಸಂಕಲನ ಜನಾರ್ಪಣೆ ಕಾರ್ಯಕ್ರಮ ನಗರದ ಚೇಂಬರ್ ಆಪ್ ಕಾಮರ್ಸ್ ಸಭಾಂಗಣದಲ್ಲಿ ಮಾ. 21ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ವೇದಿಕೆ ಹಾಗೂ ಬಳಗದ ಪದಾಧಿಕಾರಿಗಳಾದ ನರಸಪ್ಪ ಬಿರಾದಾರ, ರಾಜಶೇಖರ ಮರಡಿ, ಗಣೇಶ ಪಾಟೀಲ ಹಾಗೂ ಡಾ. ಸೂರ್ಯಕಾಂತ ಪಾಟೀಲ ತಿಳಿಸಿದ್ದಾರೆ.
ಮಾಜಿ ಶಾಸಕ ಬಿ.ಆರ್. ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ ಡಾ. ಕಾಶಿನಾಥ ಅಂಬಲಗಿ ಕೃತಿ ಜನಾರ್ಪಣೆ ಮಾಡಲಿದ್ದಾರೆ. ಪತ್ರಕರ್ತ ಲೇಖಕ ಡಾ. ಶಿವರಂಜನ್ ಸತ್ಯಂಪೇಟೆ ಕೃತಿ ಕುರಿತು ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಅಪ್ಪಾರಾವ ಅಕ್ಕೋಣಿ, ಬಂಡಾಯ ಸಾಹಿತಿ ಡಾ. ಪ್ರಭು ಖಾನಾಪುರೆ, ಕಲಬುರಗಿ ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಮುಳೇಗಾಂವ, ಪ್ರಕಾಶಕ ಬಸವರಾಜ ಕೊನೇಕ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಚಿಂತಕ ಪ್ರೊ.ಆರ್.ಕೆ. ಹುಡಗಿ ಅಧ್ಯಕ್ಷತೆ ವಹಿಸಲಿದ್ದಾರೆ . ಇದೇ ವೇಳೆಯಲ್ಲಿ 45ಕ್ಕೂ ಹೆಚ್ಚು ಕವಿ, ಸಾಹಿತಿ, ಲೇಖಕರನ್ನು ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…