ಶಹಾಪುರ :ಪಠ್ಯಪುಸ್ತಕಗಳ ಕಲಿಕೆಯ ಜೊತೆ ಜೊತೆಗೆ ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದೆ ಎಂದು ಶಾಲೆಯ ಮುಖ್ಯಗುರುಗಳಾದ ಚಿದಾನಂದ ಹಿರೇಮಠ ಹೇಳಿದರು.
ತಾಲ್ಲೂಕಿನ ಹೊಸೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ರಾಂಪೂರ ಗ್ರಾಮದ ಪ್ರಗತಿಪರ ರೈತ ಶರಣಪ್ಪ ಅವರ ಬಾಳೆ ತೋಟದಲ್ಲಿ ಹಮ್ಮಿಕೊಂಡಿರುವ ಇಕೋ ಕ್ಲಬ್ ವತಿಯಿಂದ ಕ್ಷೇತ್ರ ಭೇಟಿ ಮಾಡಿ ಮಾತನಾಡಿದರು.
ಮಾಜಿ ಶಾಸಕ ವಾಲ್ಮೀಕಿ ನಾಯಕ ನಿಧನಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ ಕಂಬನಿ
ಶಾಲೆಗಳಲ್ಲಿ ಇಕೋ ಕ್ಲಬ್ ಏರ್ಪಡಿಸುವುದರಿಂದ ಶಾಲೆಗಳ ಸುತ್ತ ಮುತ್ತಲೂ ಸ್ವಚ್ಚವಾಗಿಡಲು ಹಸಿರಾಗಿಡಲು ಅದೆಷ್ಟು ಕಾಳಜಿ ವಹಿಸುವುದು ಅಲ್ಲದೆ ವಿದ್ಯಾರ್ಥಿ ಜೀವನದಿಂದಲೇ ಪರಿಸರದ ಬಗ್ಗೆ ಅಪಾರ ಕಾಳಜಿ ಹುಟ್ಟುವಂತೆ ಮಾಡುವ ಇಕೋ ಕ್ಲಬಿನ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಗುರು ಅಂಗಡಿ ಮಾತನಾಡಿ ವಿದ್ಯಾರ್ಥಿಗಳಿಗೆ ಆಗಾಗ ಶಾಲೆಗಳಲ್ಲಿ ಪರಿಸರ ಮಾಲಿನ್ಯದ ಕುರಿತಂತೆ ಭಾಷಣ ಸ್ಪರ್ಧೆ ಪ್ರಬಂಧ ಸ್ಪರ್ಧೆ ಇನ್ನಿತರ ಈ ವಿಷಯಕ್ಕೆ ಸಂಬಂಧಪಟ್ಟಂತೆ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮಗಳು ಏರ್ಪಡಿಸುವುದು ಅಗತ್ಯತೆ ಇದೆ ಎಂದು ನುಡಿದರು.
ಶಾಲೆಯ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸಕ್ಕೆ ವಿದ್ಯಾರ್ಥಿಗಳಿಗಾಗಿ ಸರಕಾರ ಹಲವಾರು ಯೋಜನೆಗಳನ್ನು ರೂಪಿಸಿವೆ ಅದರಲ್ಲೂ ಕೂಡ ಇಕೋ ಕ್ಲಬ್ ಕೂಡ ಪ್ರಮುಖವಾಗಿದೆ ಆದರೆ ಈ ಯೋಜನೆಗಳಿಗೆ ಜೀವ ತುಂಬುವ ಕೆಲಸ ಶಿಕ್ಷಕರು ಪ್ರಾಮಾಣಿಕತೆಯಿಂದ ಮಾಡಬೇಕಾಗಿದೆ ಎ೦ದರು.
ಸಾಹಿತಿ ವಿಶ್ವನಾಥ ಭಕರೆ ಅವರ ಶಿವರುದ್ರಯ್ಯನ ಶಿವತಾಂಡವ ಕೃತಿ ಜನಾರ್ಪಣೆ 21ರಂದು
ಈ ಸಮಾರಂಭದಲ್ಲಿ ಸಿ.ಆರ್.ಪಿ ಸೋಮಯ್ಯ ಹಿರೇಮಠ, ಜ್ಯೋತಿರ್ಲಿಂಗ ಹಾಗೂ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಇತರರು ಉಪಸ್ಥಿತರಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…