ಕಲಬುರಗಿ: ಶ್ರದ್ಧೆ, ಭಕ್ತಿ, ಕಾಳಜಿಯಿಂದ ಮಾಡಲ್ಪಟ್ಟ ಕಾರ್ಯಗಳು ಸೋಲಿನ ಭೀತಿಯಿಂದ ವಿನಾಯತಿ ಪಡೆಯುವದರೊಂದಿಗೆ ಮನುಷ್ಯ ಸಾಧನೆಯ ಶಿಖರವೇರುತ್ತಾನೆ ಎಂದು ರೈತ ವಿಜ್ಞಾನಿ ಶರಣಬಸಪ್ಪಾ ಪಾಟೀಲ ಸುಲ್ತಾನಪೂರ ಹೇಳಿದರು.
ನಿನ್ನೆ ನಗರದ ಶರಣ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಸ್ನೇಹ ಸಂಗಮ ವಿವಿದೊದ್ದೇಶ ಸೇವಾ ಸಂಘವು ಇತ್ತಿಚೆಗೆ ರಾಜ್ಯ ಸರಕಾರದಿಂದ ‘ರೈತ ಸಂಶೋಧಕ ರತ್ನ’ ಪ್ರಶಸ್ತಿ ಪಡೆದ ಶರಣಬಸಪ್ಪಾ ಪಾಟೀಲ ಅವರಿಗೆ ಸನ್ಮಾನ ಸಮಾರಂಭ ಹಮ್ಮಿಕೊಂಡಿದ್ದು ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ ರೈತ ರಾಷ್ಟ್ರದ ಬೆನ್ನೆಲುಬು ರೈತರು ಆಧುನಿಕ ಸಲಕರಣೆಗಳಿಂದ ಕೃಷಿ ಮಾಡಿದರೆ ಆದಾಯ ಹೆಚ್ಚಾಗುತ್ತದೆ. ಕಡಿಮೆ ಭೂಮಿಯಲ್ಲಿ ಹೆಚ್ಚಿನ ಇಳುವರಿಯನ್ನು ಪಡೆಯಬಹುದು. ಕೃಷಿಯಲ್ಲಿ ಏನು ಇಲ್ಲ ಎನ್ನುವವರು ಭಕ್ತಿ ಶೃದ್ಧೆಯಿಂದ ಕಾಯಕ ಮಾಡಿದರೆ ಭೂತಾಯಿ ಕೈ ಬಿಡುವುದಿಲ್ಲ ಎನ್ನುವುದಕ್ಕೆ ನಾನೇ ಸಾಕ್ಷಿಯಾಗಿದ್ದೇನೆ. ವೈಜ್ಞಾನಿಕವಾಗಿ ಕೃಷಿ ಮಾಡಿ ಉತ್ತಮ ರೈತರಾಗಿ ಎಂದು ಯುವಕರಿಗೆ ಕಿವಿಮಾತು ಹೇಳಿದರು.
ಸಂಸದ ಉಮೇಶ ಜಾಧವರಿಂದ ನಿರ್ಲಕ್ಷ್ಯ: ಮಾಜಿ ಶಾಸಕ ಬಿ.ಆರ್. ಪಾಟೀಲ ಪತ್ರ
ಸಂಘದ ಅಧ್ಯಕ್ಷರಾದ ನ್ಯಾಯವಾದಿ ಹಣಮಂತರಾಯ ಅಟ್ಟೂರ ಮಾತನಾಡುತ್ತಾ ಸದ್ದಿಲ್ಲದೆ ಗದ್ದುಗೆ ಏರಿದ ಶರಣಗೌಡರ ಸಾಧನೆ ನಮ್ಮೆಲ್ಲರಿಗೆ ಆದರ್ಶವಾಗಿದೆ. ಇಂದಿನ ಯುವಕರಿಗೆ ಶ್ರೀಯುತರು ಮಾದರಿಯಾಗಿದ್ದಾರೆ. ಇವರು ತಯಾರಿಸಿದ ಕೃಷಿ ಉಪಕರಣಗಳನ್ನು ಹಲವಾರು ಜಿಲ್ಲೆ ಹಾಗೂ ಬೇರೆ ರಾಜ್ಯಗಳ ರೈತರು ಕಡಿಮೆ ಬೆಲೆಯಲ್ಲಿ ಖರಿದೀಸಿ ಹೆಚ್ಚಿನ ಇಳುವರಿ ಪಡೆಯುತ್ತಿದ್ದಾರೆ. ಶ್ರೀಯುತರು ಎಲೆ ಮರೆ ಕಾಯಿಯಂತೆ ಕೃಷಿಯಲ್ಲಿ ಸೇವೆ ಮಾಡಿ ಈ ಭಾಗಕ್ಕೆ ಕೀರ್ತಿ ತಂದಿರುವುದು ಹೆಮ್ಮೆಯ ವಿಷಯ.
ಕಾರ್ಯಕ್ರಮದಲ್ಲಿ ಸಂಘದ ಸಹ ಕಾರ್ಯದರ್ಶಿ ಮಲಕಾರಿ ಪೂಜಾರಿ, ಶರಣಬಸಪ್ಪ ಪಾಟೀಲ ಬೆಳಗುಂಪಿ, ರಘುನಂದನ ಕುಲಕರ್ಣಿ, ಸಂಗೀತ ಕಲಾವಿದರಾದ ಶ್ರವಣಕುಮಾರ ಮಠ, ಸಂಗಮೇಶ ಶಾಸ್ತ್ರೀ ಮಾಶ್ಯಾಳ, ಲಕ್ಷ್ಮಣ ಹೆರೂರ, ಮಹೇಶ ತೇಲಕುಣಿ, ಮಲ್ಲಿನಾಥ ರಾಸೂರಕರ, ಶರಣು ಕಲ್ಮಠ, ನಂದೀಶ ಮಠ, ಜನಪದ ಕಲಾವಿದ ರಾಜು ಹೆಬ್ಬಾಳ, ರವೀಂದ್ರ ಎನ್. ಕಾಗೆ, ಸಾಯಬಣ್ಣ ಕಣ್ಣೂರ ಇದ್ದರು.
ಕಲಬುರಗಿ:ಮಾನವನ ಬದುಕಿಗೆ ಅಧ್ಯಾತ್ಮದ ಜ್ಞಾನವು ಅರಿವು ಮೂಡಿಸುವುದಲ್ಲದೆ,ಬೆಳಕು ನೀಡುತ್ತದೆ ಎಂದು ಪುರಾಣ ಪಂಡಿತ ಮಲ್ಲಿಕಾರ್ಜುನ ಶಾಸ್ತ್ರಿ ಅಭಿಪ್ರಾಯ ಪಟ್ಟಿದ್ದಾರೆ. ಜಯನಗರ…
ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…
ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…
ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…
ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…
ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…