ಕಲಬುರಗಿ: ಕಳೆದ 2 ವಾರಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ವಿ.ವಿ ಜ್ಯೋತ್ಸ್ನಾ ಅವರು ಕರೆ ನೀಡಿದ್ದಾರೆ.
ಶುಕ್ರವಾರ ನಗರ ಪೆÇಲೀಸ್ ಆಯುಕ್ತ ಎನ್. ಸತೀಶ್ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಶ್ ಸಾಸಿ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ ಅವರೊಂದಿಗೆ ನಗರದ ಜಗತ್ ವೃತ್ತ, ಸೂಪರ್ ಮಾರ್ಕೆಟ್ ಹಾಗೂ ಹಾಗರಗಾ ಕ್ರಾಸ್ ಬಳಿ ಜಿಲ್ಲಾಧಿಕಾರಿಗಳು ಮಾಸ್ಕ್ ಧರಿಸುವುದರ ಕುರಿತು ಜಾಗೃತಿ ಮೂಡಿಸಿ ಮಾತನಾಡಿದರು.
ಎಸ್.ಡಿ.ಪಿ.ಐಯೊಂದಿಗೆ ಸೇರಿ ಜನಸೇವೆ, ಶೋಷಿತರಿಗಾಗಿ ಹೋರಾಟಕ್ಕೆ ಸಿದ್ಧ: ಬಿ.ಆರ್ ಭಾಸ್ಕರ್ ಪ್ರಸಾದ್
ಮಹಾರಾಷ್ಟ್ರ ಗಡಿಗೆ ಅಂಟಿಕೊಂಡಿರುವ ಜಿಲ್ಲೆಯ ಗಾಡಿಯಲ್ಲಿ 5 ಚೆಕ್ ಪೆÇೀಸ್ಟ್ ಗಳನ್ನು ನಿರ್ಮಿಸಲಾಗಿದೆ. ಮಹಾರಾಷ್ಟ್ರದಿಂದ ಜಿಲ್ಲೆಗೆ ಬರುವವರು ಕಡ್ಡಾಯವಾಗಿ 72 ಗಂಟೆಗಳ ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿ ತರಲೇಬೇಕು. ಖಾಸಗಿ ಮತ್ತು ಸರ್ಕಾರಿ ವಾಹನಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ ಹಾಗೂ ಸ್ಯಾನಿಟೈಸರ್ ಮಾಡಲೇಬೇಕು ಎಂದ ಅವರು ಜಿಲ್ಲೆಗೆ ಬರುವ ಯಾವುದೇ ವಾಹನಗಳ ಪ್ರವೇಶ ನಿμÉೀಧಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಇದೇ ಸಂದರ್ಭದಲ್ಲಿ ನಗರ ಪೆÇಲೀಸ್ ಆಯುಕ್ತ ಎನ್. ಸತೀಶ್ ಕುಮಾರ ಅವರು ಮಾತನಾಡಿ, ಕಳೆದ ಕೆಲ ದಿನಗಳಿಂದ ದೇಶದಲ್ಲಿ ಕೋವಿಡ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಆದರಿಂದ ಜನರು ಮಾಸ್ಕ್ ಧರಿಸಬೇಕು, ಇಲ್ಲದಿದ್ದರೆ ದಂಡ ವಿಧಿಸಲಾಗುವುದು. ಜನರು ಜವಾಬ್ದಾರಿಯುತವಾಗಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಅವರು ಮನವಿ ಮಾಡಿಕೊಂಡರು.
ಈಶ್ವರ ಹಿಪ್ಪರಗಿ ಶ್ರೀರಾಮ ಸೇನೆಯ ನೂತನ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನೇಮಕ
ಮಾನವೀಯತೆ ಮೆರೆದ ಜಿಲ್ಲಾಧಿಕಾರಿ: ಮಾಸ್ಕ್ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಜಗತ್ ವೃತ್ತದಲ್ಲಿ ಮಾಸ್ಕ್ ಇಲ್ಲದೆ ಕುಳಿತಿದ್ದ ಬಾಣಂತಿಗೆ ಜಿಲ್ಲಾಧಿಕಾರಿಗಳು ಮಾಸ್ಕ್ ನೀಡಿದರು. ಈ ಸಂದರ್ಭದಲ್ಲಿ ಸ್ವತ: ಜಿಲ್ಲಾಧಿಕಾರಿಗಳೇ ಮಗುವನ್ನು ಎತ್ತಿಕೊಳ್ಳುವ ಮೂಲಕ ಮಾಸ್ಕ್ ಧರಿಸಿಕೊಳ್ಳಲು ತಾಯಿಗೆ ಅನುವಾದರು. ನಂತರ ಸೂಪರ್ ಮಾರ್ಕೆಟ್ನ ಕಪಡೆ ಬಜಾರ್ನಲ್ಲಿ ರಸ್ತೆ ಬದಿಯಲ್ಲಿ ಸಾಗುತ್ತಿದ್ದ, ನಡೆದಾಡಲು ಅಶಕ್ತರಾದ ವಯೋವೃದ್ಧರೋರ್ವರಿಗೆ ಜಿಲ್ಲಾಧಿಕಾರಿಗಳು ಮಾಸ್ಕ್ ತೊಡಿಸಿದರು. ಇನ್ನು ರಸ್ತೆಯಲ್ಲಿ ಸಿಕ್ಕ ಸಿಕ್ಕ ಪುಟ್ಟ ಮಕ್ಕಳಿಗೂ ಖುದ್ದಾಗಿ ಜಿಲ್ಲಾಧಿಕಾರಿಗಳೇ ಮಾಸ್ಕ್ ಹಾಕಿ ಜಾಗೃತಿ ಮೂಡಿಸಿದರು.
ಮಾಮೂ ಮಾಲ್ಪೂರಿ ಸೇವನೆ: ಇದೇವೇಳೆ ಕಲಬುರಗಿಯ ಹಳೆ ಮಾರ್ಕೆಟ್ನಲ್ಲಿರುವ ಪ್ರಸಿದ್ದ ಮಾಮೂ ಸ್ವೀಟ್ ಅಂಗಡಿಯ ಎಲ್ಲಾ ಅಧಿಕಾರಿಗಳೊಂದಿಗೆ ಮಾಲ್ಪೂರಿ ಸೇವಿಸಿ ಆಸ್ವಾದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು 500 ರೂಪಾಯಿ ನೋಟ್ ನೀಡಿದಾಗ ಅಂಗಡಿ ಮಾಲೀಕ ಅಬ್ದುಲ್ ಸಲೀಂ ಪಡೆಯಲು ಒಪ್ಪಲಿಲ್ಲ. ಕೊನೆಗೆ ಅವರನ್ನು ಒಲೈಸಿ ಹಣ ನೀಡಲಾಯಿತು.
ಮಗುವಿಗೆ ಚಪ್ಪಲಿ ಕೊಡಿಸಿದ ಪಾಲಿಕೆ ಆಯುಕ್ತರು: ಸೂಪರ್ ಮಾರ್ಕೆಟನ ಚಪ್ಪಲ್ ಬಜಾರ್ನಲ್ಲಿ ಮಗುವೊಂದು ಮಾಸ್ಕ್ ಧರಿಸಿದ್ದರೂ, ಸುಡು ಬಿಸಿಲಿನಲ್ಲಿ ಬರಿಗಾಲಲ್ಲಿ ಸಾಗುವುದನ್ನು ಕಂಡು ಮರುಗಿದ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಮಗುವಿಗೆ ಅಲ್ಲಿಯೇ ಇದ್ದ ಅಂಗಡಿಯಲ್ಲಿ ಚಪ್ಪಲಿ ಕೊಡಿಸಿದರು. ಈ ವೇಳೆ ಚಪ್ಪಲಿ ಕೊಡಿಸಲು ಕರೆದುಕೊಂಡು ಹೋಗುವಾಗ ಭಯಬೀತವಾಗಿ ಬಿಕ್ಕಿ-ಬಿಕ್ಕಿ ಅಳುತ್ತಿದ್ದ ಪುಟ್ಟ ಹುಡುಗ, ಚಪ್ಪಲಿ ಕೊಡಿಸಿದ ಬಳಿಕ ಖುಷಿಯಿಂದ ತನ್ನ ತಾಯಿಯೊಂದಿಗೆ ಹೆಜ್ಜೆಹಾಕಿ ಹೊರಟ.
ಕಲಬುರಗಿ ಮಹಾನಗರ ಪಾಲಿಕೆ ಸದಸ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ಉಮೇಶ್ ಶೆಟ್ಟಿ ಅವರು ಈ ಸಂದರ್ಭದಲ್ಲಿ ಉಚಿತವಾಗಿ ಮಾಸ್ಕ್ ವಿತರಿಸಿದರು.
ಈ ಸಂದರ್ಭದಲ್ಲಿ ಎಸಿಪಿ ಅನ್ಷುಕುಮಾರ್, ಪಾಲಿಕೆಯ ಪರಿಸರ ಇಂಜಿನಿಯರ್ ಮುನ್ನಾಫ್ ಪಟೇಲ್, ಆರೋಗ್ಯಾಧಿಕಾರಿ ವಿನೋದ್ ಕುಮಾರ್ ಇನ್ನಿತರರು ಇದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…