ಎರಡನೇ ಕೋವಿಡ್ ಡೋಸ್ ಪಡೆದ ಕಲಬುರಗಿ ಡಿಸಿ ವಿ.ವಿ.ಜ್ಯೋತ್ಸ್ನಾ

ಕಲಬುರಗಿ: ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಶುಕ್ರವಾರ ಇಲ್ಲಿನ ಜಿಮ್ಸ್ ಲಸಿಕಾ ಕೇಂದ್ರದಲ್ಲಿ ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್ ಪಡೆದರು.

ನಂತರ ಮಾತನಾಡಿದ ಅವರು ಈ ಹಿಂದೆ ಫೆಬ್ರವರಿ 8 ರಂದು ಮೊದಲ ಡೋಸ್ ಪಡೆದಿದ್ದು, ನಾಲ್ಕು ವಾರದ ನಂತರ ಇಂದು ಎರಡನೇ ಡೋಸ್ ಪಡೆದಿದ್ದೇನೆ ಎಂದರು.

60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ರಿಂದ 59 ವರ್ಷದೊಳಗಿನ ದೀರ್ಘಕಾಯಿಲೆಯಿಂದ ಬಳಲುತ್ತಿರುವವರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದ್ದು, ಅದರಂತೆ ಇಂದು ನಾನು ನನ್ನ ತಂದೆಯವರಿಗೆ ಕೋವಿಡ್ ಲಸಿಕೆ ಕೊಡಿಸಿದ್ದು, ನನಗೆ ಸಂತಸ ತಂದಿದೆ. ನಾನು ಚಿಕ್ಕವಳಿದ್ದಾಗ ನನ್ನ ತಂದೆಯವರು ನನಗೆ ಬಿ.ಸಿ.ಜಿ. ಲಸಿಕೆ ಕೊಡಿಸಿದ್ದನ್ನು ಇದೇ ಸಂದರ್ಭದಲ್ಲಿ ಅವರು ಸ್ಮರಿಸಿದರು.

ಎಸ್.ಡಿ.ಪಿ.ಐಯೊಂದಿಗೆ ಸೇರಿ ಜನಸೇವೆ, ಶೋಷಿತರಿಗಾಗಿ ಹೋರಾಟಕ್ಕೆ ಸಿದ್ಧ: ಬಿ.ಆರ್ ಭಾಸ್ಕರ್ ಪ್ರಸಾದ್

ಕೋವಿಡ್ ಲಸಿಕೆ ಸುರಕ್ಷಿತವಾಗಿದ್ದು, ಯಾವುದೇ ಆತಂಕವಿಲ್ಲದೆ ಲಸಿಕೆ ಪಡೆಯಬಹುದಾಗಿದೆ. ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತವಾಗಿ ಪ್ರತಿಯೊಬ್ಬರು ತಮ್ಮ ತಂದೆ-ತಾಯಿ ಹಾಗೂ ಮನೆಯಲ್ಲಿರುವ ಹಿರಿಯರಿಗೆ ಕೋವಿಡ್ ಲಸಿಕೆ ಕೊಡಿಸಲು ಮುಂದಾಗುವ ಮೂಲಕ ಮಕ್ಕಳು ತಮ್ಮ ಜವಾಬ್ದಾರಿ ಪೂರೈಸಬೇಕು ಎಂದು ವಿ.ವಿ.ಜ್ಯೋತ್ಸ್ನಾ ಅವರು ಕರೆ ನೀಡಿದರು.

ಲಸಿಕೆ ಪಡೆದ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರ ತಂದೆ 72 ವರ್ಷದ ಜೋಷಿ ಅವರು ಮಾತನಾಡಿ ಲಸಿಕೆ ಸುರಕ್ಷಿತವಾಗಿದ್ದು 60 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಪಡೆಯುವ ಅವಶ್ಯತೆ ಇದೆ. ಯಾವುದೇ ಭಯವಿಲ್ಲದೆ ಲಸಿಕೆ ಪಡೆಯಿರಿ ಎಂದರು.

ಲಸಿಕೆ ಪಡೆದ ನಂತರ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ನಾ ಅವರು ತಮ್ಮ ತಂದೆ 72 ವರ್ಷದ ಜೋಷಿ ಅವರೊಂದಿಗೆ ಸಾರ್ವಜನಿಕರೊಂದಿಗೆ ಲಸಿಕಾ ಕೇಂದ್ರದಲ್ಲಿ ಅರ್ಧ ಗಂಟೆಗಳ ಕಾಲ ವೈದ್ಯರ ನಿಗಾದಲ್ಲಿ ಇದ್ದರು.

ಎಸ್.ಡಿ.ಪಿ.ಐಯೊಂದಿಗೆ ಸೇರಿ ಜನಸೇವೆ, ಶೋಷಿತರಿಗಾಗಿ ಹೋರಾಟಕ್ಕೆ ಸಿದ್ಧ: ಬಿ.ಆರ್ ಭಾಸ್ಕರ್ ಪ್ರಸಾದ್

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಶೇಖರ ಮಾಲಿ, ಜಿಮ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ಉಮೇಶ ಸೇರಿದಂತೆ ನರ್ಸಿಂಗ್ ಸಿಬ್ಬಂದಿಗಳು ಇದ್ದರು.

emedialine

Recent Posts

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

2 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

7 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

7 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

9 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

20 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420