ಮದ್ಯ ಸೇವನೆಗೆ ಹಣ ಕೊಡಲಿಲ್ಲ ಎಂದು ಹೆತ್ತ ತಾಯಿ ಮೇಲೆ ಕಲ್ಲು ಹಾಕಿ ಹತ್ಯೆ

1
45

ಕಲಬುರಗಿ: ಮದ್ಯ ಸೇವನೆಗೆ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಹೆತ್ತ ತಾಯಿಯ ಮೇಲೆ ಕಲ್ಲು ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಇಂದು ನಸುಕಿನ ಜಾವ ಜೇವರ್ಗಿ ತಾಲೂಕಿನ ಕಲ್ಲೂರ ಕೆ. ಗ್ರಾಮದಲ್ಲಿ ನಡೆದಿದೆ.

ಭೀಮಬಾಯಿ ಪೂಜಾರಿ (75) ಕೊಲೆಯಾದ ತಾಯಿ. ಈಕೆಯ ಕಿರಿಯ ಪುತ್ರ ಯಲ್ಲಪ್ಪ ಪೂಜಾರಿ ಕೊಲೆ ಮಾಡಿದ ಆರೋಪಿ, ಇಂದು ನಸುಕಿನ ಜಾವ ಆರೋಪಿಯ ಹಿರಿಯ ಸಹೋದರ ಶರಣಪ್ಪ ಬಹಿರ್ದೆಸೆಗೆ ಹೋದ ಸಂದರ್ಭದಲ್ಲಿ ಮನೆಯೊಳಗೆ ಕೊಂಡಿ ಹಾಕಿಕೊಂಡು ತಾಯಿ ಬಳಿ ಕುಡಿತಕ್ಕಾಗಿ ಹಣಕ್ಕೆ ಪೀಡಿಸಲು ಪ್ರಾರಂಭಿಸಿದ್ದಾನೆ.

Contact Your\'s Advertisement; 9902492681

ಕೋವಿಡ್ ಹಿನ್ನೆಲೆ: ಡಿ.ಸಿ. ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮುಂದೂಡಿಕೆ

ಹಣ ಕೊಡದೇ ಇದ್ದಾಗ ಪಕ್ಕದಲ್ಲಿದ್ದ ಕಲ್ಲನ್ನು ತಾಯಿಯ ತಲೆ ಮೇಲೆ ಮೂರ್ನಾಲ್ಕು ಬಾರಿ ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ನೆಲೋಗಿ ಪೊಲೀಸ್ ಠಾಣಾಯ  ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here