ಕಲೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಬೆಳೆದ ಉದಯೋನ್ಮುಖ ಕಲಾವಿದೆ ಲಕ್ಷ್ಮೀ ಪೋದ್ದಾರ್: ಪ್ಯಾಟಿ

ಕಲಬುರಗಿ: ಜಿಲ್ಲೆಯ ಆಳಂದ್ ತಾಲ್ಲೂಕಿನ ಮಾಡಿಯಾಳ್ ಗ್ರಾಮದ ಜೆ.ಪಿ. ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿನಿ ಕು. ಲಕ್ಷ್ಮೀ ಆರ್. ಪೋತ್ದಾರ್ ಅವರು ಇತ್ತೀಚೆಗೆ ಎಂ.ಎಫ್. ಹುಸೇನ್ ಶತಮಾನೋತ್ಸವ ರಾಷ್ಟ್ರೀಯ ಪುರಸ್ಕಾರ ಹಾಗೂ ಇಂಡಿಯನ್ ರಾಯಲ್ ಅಕ್ಯಾಡೆಮಿ ಅವಾರ್ಡ್ ಪಡೆಯುವ ಮೂಲಕ ಜಿಲ್ಲೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಕುಂಚದಲ್ಲಿ ದೃಶ್ಯಕಾವ್ಯ ಕಲೆಯಲ್ಲಿ ಸಾಧನೆ ಮಾಡಿದ ಜಿಲ್ಲೆಯ ಮೊದಲ ಯುವ ಕಲಾವಿದೆಯಾಗಿ ಹೊರಹೊಮ್ಮಿದ್ದಾಳೆ ಎಂದು ಶಾಲೆಯ ಸಂಸ್ಥಾಪಕ ಅಧ್ಯಕ್ಷ ಹಾಗೂ ಕಲಬುರ್ಗಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಶಾಮರಾವ್ ಪ್ಯಾಟಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪುರಸ್ಕೃತ ಕಲಾವಿದೆ ಕು. ಲಕ್ಷ್ಮೀ ಪೋದ್ದಾರ್ ಅವರಿಗೆ ಸನ್ಮಾನಿಸಿ ಮಾತನಾಡಿದ ಅವರು, ಇತ್ತೀಚೆಗೆ ಜರುಗಿದ ಅಖಿಲ ಭಾರತ ೮೫ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಿಸಿ ಪುರಸ್ಕರಿಸಿದ್ದು, ಇಡೀ ಜಿಲ್ಲೆಗೆ ಅಷ್ಟೇ ಅಲ್ಲ, ಇಡೀ ನಾಡಿಗೆ ಕೀರ್ತಿ ತಂದ ಶ್ರೇಯಸ್ಸು ಆಗಿದೆ ಎಂದು ಬಣ್ಣಿಸಿದರು.

ಸನ್ಮಯ ರುದ್ರವಾಡಿ ಅಮೋಘ ಶತಕ, ಕಲಬುರಗಿಗೆ ಭರ್ಜರಿ ಗೆಲುವು

ಇಂತಹ ಅದ್ಭುತ ಕಲಾವಿದೆ ನಮ್ಮ ಶಾಲೆಯ ಹಳೆಯ ವಿದ್ಯಾರ್ಥಿನಿಯಾಗಿದ್ದು ನಮಗೆಲ್ಲ ಸಂತೋಷ ತಂದಿದೆ. ನಮ್ಮ ಶಾಲೆಯ ಹೆಸರನ್ನು ಇಡೀ ರಾಷ್ಟ್ರಮಟ್ಟದಲ್ಲಿ ಪರಿಚಯಿಸುವ ಮೂಲಕ ಶಾಲೆಗೆ ತನ್ನದೇ ಆದ ಕೊಡುಗೆಯನ್ನು ಲಕ್ಷ್ಮೀ ಪೋದ್ದಾರ್ ಅವರು ನೀಡಿದ್ದಾರೆ. ಅದೇ ರೀತಿ ನಮ್ಮ ಶಾಲೆಯ ಇನ್ನೋರ್ವ ಹಳೆಯ ವಿದ್ಯಾರ್ಥಿನಿ ಕು. ಜಯಶ್ರೀ ಯಳಸಂಗಿ ಅವರೂ ಸಹ ಇತ್ತೀಚೆಗೆ ಜರುಗಿದ ಗುಲಬರ್ಗಾ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸ್ನಾತಕೋತ್ತರ ಕನ್ನಡ ನಿಕಾಯದಲ್ಲಿ ಸುಮಾರು ೧೧ ಚಿನ್ನದ ಪದಕಗಳನ್ನು ಪಡೆದು ಅದ್ವಿತೀಯ ಸಾಧನೆಯನ್ನು ಮಾಡಿದ್ದಾಳೆ. ಈ ಇಬ್ಬರು ವಿದ್ಯಾರ್ಥಿನಿಯರು ಸಾಧನೆ ಎಲ್ಲರಿಗೂ ಸ್ಪೂರ್ತಿ ಹಾಗೂ ಪ್ರೇರಣೆದಾಯಕವಾಗಿದೆ ಎಂದು ಅವರು ಹೇಳಿದರು.

ಶಾಲೆಯಲ್ಲಿ ಕಲಿತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ವೈದ್ಯರು, ಇಂಜಿನಿಯರರು ಸೇರಿದಂತೆ ಉನ್ನತ ಹುದ್ದೆಗಳಲ್ಲಿದ್ದಾರೆ. ಅನೇಕರು ಹೊರದೇಶಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದ ಅವರು, ಶಾಲೆಯು ಚಿಕ್ಕದಾದರೂ ಸಹ ಕೌಶಲ್ಯಾಭಿವೃದ್ಧಿ ಶಿಕ್ಷಣಕ್ಕೆ ಒತ್ತು ಕೊಟ್ಟಿದ್ದರಿಂದ ಮಹಾನ್ ಪ್ರತಿಭೆಗಳೊಂದಿಗೆ ಉದ್ಯೋಗದಾತರೂ ಆಗುತ್ತಿದ್ದಾರೆ. ಅದಕ್ಕಾಗಿ ಶಾಲೆಯ ಶಿಕ್ಷಕ ಹಾಗೂ ಸಿಬ್ಬಂದಿಗಳ ಕಾರ್ಯವೂ ಸಹ ಶ್ಲಾಘನೀಯ ಎಂದು ಅವರು ತಿಳಿಸಿದರು.

ಮದ್ಯ ಸೇವನೆಗೆ ಹಣ ಕೊಡಲಿಲ್ಲ ಎಂದು ಹೆತ್ತ ತಾಯಿ ಮೇಲೆ ಕಲ್ಲು ಹಾಕಿ ಹತ್ಯೆ

ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ್ ಸ್ವಾಮೀಜಿ ಅವರು ಶಾಲೆಗೆ ಭೇಟಿ ನೀಡಿದಾಗ ಶಾಲೆಯ ಸ್ಥಳವು ಅದ್ಭುತ ಹಾಗೂ ಪವಿತ್ರವಾಗಿರುವುದರಿಂದ ಇಲ್ಲಿ ವ್ಯಾಸಂಗ ಮಾಡುವವರೆಲ್ಲರೂ ಉನ್ನತ ಹುದ್ದೆಗೆ ಹೋಗುತ್ತಾರೆ. ಅಷ್ಟೇ ಅಲ್ಲದೇ ಒಳ್ಳೆಯ ಮನುಷ್ಯರಾಗುತ್ತಾರೆ ಎಂದು ತಮ್ಮ ಪ್ರವಚನದಲ್ಲಿ ಉಲ್ಲೇಖಿಸಿದ್ದನ್ನು ಸ್ಮರಿಸಿದ ಪ್ಯಾಟಿ ಅವರು, ಲಕ್ಷ್ಮೀ ಪೋದ್ದಾರ್ ಅವರು ಕರ್ನಟಕ ಲಲಿತಕಲಾ ಅಕ್ಯಾಡೆಮಿಯ ಶಿಷ್ಯವೇತನ ಸೇರಿದಂತೆ ಅನೇಕ ಪ್ರಶಸ್ತಿ, ಪುರಸ್ಕಾರ, ಕಾರ್ಯಾಗಾರ ಸೇರಿದಂತೆ ಅನೇಕ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ತಮ್ಮ ಕಲಾಪ್ರತಿಭೆ ಮೆರೆದಿದ್ದಾರೆ. ಇನ್ನೂ ವಿಶ್ವ ಮಟ್ಟದಲ್ಲಿ ಪ್ರತಿಭೆ ಹೊರಹೊಮ್ಮಲಿ ಎಂದು ಅವರು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳಾದ ಎಸ್.ವಿ. ಸೊಲ್ಲಾಪುರ, ಪಾಲಕರಾದ ರಘುನಾಥ್ ಪೋದ್ದಾರ್, ಶ್ರೀಮತಿ ಶಕುಂತಲಾ ಪೋದ್ದಾರ್ ಮುಂತಾದವರು ಉಪಸ್ಥಿತರಿದ್ದರು.

emedialine

Recent Posts

ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿ

ಶಹಾಬಾದ: ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದ್ದು, ಖುಷಿಯಿಂದ ಆಟವಾಡಿ ಎಂದು ತಹಸೀಲ್ದಾರ ಜಗದೀಶ ಚೌರ್ ಹೇಳಿದರು. ಅವರು…

5 hours ago

ಪಾಲಿಕೆ ಸದಸ್ಯ ಸಚಿನ್ ಶಿರವಾಳಗೆ ಭೀಮನಗೌಡ ಪರಗೊಂಡ ಸನ್ಮಾನ

ಕಲಬುರಗಿ: ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಮಹಾನಗರದ ವಿದ್ಯಾನಗರ ವಾರ್ಡ್ ದ ಮಹಾನಗರ ಪಾಲಿಕೆಯ ಸದಸ್ಯ ಆಗಿರುವ ಸಚಿನ್ ಶಿರವಾಳ ಅವರು…

6 hours ago

ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ಡಾ. ಶರಣಪ್ಪ ಎಸ್.ಡಿ ನೇಮಕ

ಕಲಬುರಗಿ: 2009 ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಡಾ. ಶರಣಪ್ಪ ಎಸ್.ಡಿ ಅವರು ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ನಿಯೋಕ್ತಗೊಂಡಿದ್ದಾರೆ.…

7 hours ago

ಪ್ರಾಧ್ಯಾಪಕಿ ಡಾ.ಜಯಶ್ರೀ ಅಗರಖೇಡ್ ಗೆ ಪೆÇ್ರ.ಸತೀಶ್ ಧವನ್ ಪ್ರಶಸ್ತಿ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ ಕಾಲೇಜಿನ ಕಂಪ್ಯೂಟರ್ ಸಾಯಿನ್ಸ್ ಇಂಜಿನಿಯರಿಂಗ (ಸಿಎಸ್‍ಇ) ವಿಭಾಗದ…

9 hours ago

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಎರಡು ಪದಕಗೆದ್ದ ಲೋಕೇಶ್ ಪೂಜಾರ್

ಕಲಬುರಗಿ: ರಾಜ್ಯಮಟ್ಟದ ಸರ್ಕಾರಿ ನೌಕರರಕ್ರೀಡಾಕೂಟದಈಜು ಸ್ಪರ್ಧೆಯಲ್ಲಿ ಕಲಬುರಗಿಯ ವಿಭಾಗೀಯಆಹಾರ ಪ್ರಯೋಗಾಲಯದ ಹಿರಿಯಆಹಾರ ವಿಶ್ಲೇಷಣಅಧಿಕಾರಿ ಲೋಕೇಶ್ ಪೂಜಾರ್‍ಅವರುಉತ್ತಮ ಪ್ರದರ್ಶನ ನೀಡಿಒಂದು ಬಂಗಾರ…

9 hours ago

ತೊಗರಿ ಬೆಳೆಯಲ್ಲಿ ಗೊಣ್ಣೆ ಹುಳದ ಭಾದೆ ಹತೋಟಿಗೆ ಡಾ. ಮಲ್ಲಪ್ಪ ಅವರಿಂದ ಸಲಹೆ

ಕಲಬುರಗಿ: ತಾಲೂಕಿನಲ್ಲಿ ತೊಗರಿ ಬೆಳೆಗೆ ಅಲ್ಲಲ್ಲಿ ಗೊಣ್ಣೆ ಹುಳದ ಭಾದೆ ಕಂಡು ಬಂದಿದ್ದು ರೈತಾಪಿ ಜನರು ಹತೋಟಿಗೆ ಕೃಷಿ ವಿಜ್ಞಾನ…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420