ಬಿಸಿ ಬಿಸಿ ಸುದ್ದಿ

ಹೆಸರಿಗೆ ಸೀಮಿತವಾದ ಕಲ್ಯಾಣ ಕರ್ನಾಟಕ: ಅಟ್ಟೂರ

ಕಲಬುರಗಿ: ಕಲ್ಯಾಣ ಕರ್ನಾಟಕವನ್ನು ಅಭಿವೃದ್ಧಿಗೊಳಿಸಬೇಕೆಂಬ ಉದ್ದೇಶದಿಂದ ಹೈದ್ರಾಬಾದ್-ಕರ್ನಾಟಕ ಎಂಬ ಹೆಸರು ತೆಗೆದು ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ್ದು ಸಂತೋಷದ ವಿಷಯ. ಆದರೆ ಇದು ಕೇವಲ ಹೆಸರಿಗೆ ಮಾತ್ರ ಸೀಮಿತವಾಗಿದೆಯೆಂದು ಅಖಿಲ ಭಾರತ ಯುವಜನ ಒಕ್ಕೂಟ ಜಿಲ್ಲಾಧ್ಯಕ್ಷ ನ್ಯಾಯವಾದಿ ಹಣಮಂತರಾಯ ಎಸ್. ಅಟ್ಟೂರ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರಕಾರದ ಹಲವಾರು ಯೋಜನೆಗಳಾದ ರೈಲ್ವೆ ವಿಭಾಗೀಯ ಕಚೇರಿ, ಏಮ್ಸ್, ಐಐಟಿ, ಸಿಯುಕೆ ಎಕ್ಸಲೆನ್ಸ್ ಸೆಂಟರ್, ಜವಳಿ ಪಾರ್ಕ್, ನಿಮ್ಜ್ ಹೀಗೆ ಹಲವಾರು ಯೋಜನೆಗಳು ನಮ್ಮ ಭಾಗದಿಂದ ಕಸಿದುಕೊಂಡಿರುವುದು ಖಂಡನೀಯ. ಈ ಯೋಜನೆಗಳಿಂದ ಸಾವಿರಾರು ಜನರಿಗೆ ಉದ್ಯೋಗ ದೊರೆಯುತ್ತಿರುವುದಲ್ಲದೆ ಈ ಭಾಗ ಅತೀ ತೀವ್ರವಾಗಿ ಅಭಿವೃದ್ಧಿಯಾಗುತ್ತಿತ್ತು.

ಕಲೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಬೆಳೆದ ಉದಯೋನ್ಮುಖ ಕಲಾವಿದೆ ಲಕ್ಷ್ಮೀ ಪೋದ್ದಾರ್: ಪ್ಯಾಟಿ

ಆದರೆ ಈ ಎಲ್ಲಾ ಯೋಜನೆಗಳನ್ನು ಕೈ ಬಿಟ್ಟು ಮಲತಾಯಿ ಧೋರಣೆ ಮುಂದವರಿಸುತ್ತಿರುವುದು ಯಾವ ನ್ಯಾಯ? ಈ ಭಾಗದ ಜನ ಪ್ರತಿನಿಧಿಗಳು ಮಾತಾನಾಡಬಾರದೇ? ಅಲ್ಲದೆ ಈ ಭಾಗದ ಅಭಿವೃದ್ಧಿಗಾಗಿ ಜಾರಿಗೆ ತಂದಿರುವ ೩೭೧ (ಜೆ) ಸಹಿತ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ರಾಜ್ಯ ಸರಕಾರವು ಕಲ್ಯಾಣ ಕರ್ನಾಟಕವೆಂದು ಹೆಸರು ಬದಲಾವಣೆ ಮಾಡಿದರೆ ಅಭಿವೃದ್ಧಿಯಾಗುವುದಿಲ್ಲ. ಬಂದ ಯೋಜನೆಗಳನ್ನು ಮರಳಿ ಪಡೆಯುವದರೊಂದಿಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಿ ಈ ಭಾಗವನ್ನು ಅಭಿವೃದ್ಧಿಗೊಳಿಸಿದಾಗ ಮಾತ್ರ ಕಲ್ಯಾಣ ಕರ್ನಾಟಕವಾಗುತ್ತದೆ ಇಲ್ಲದಿದ್ದರೆ ಕೇವಲ ನಾಮ್ ಕೆ ವಾಸ್ತೆ ಹೆಸರಾಗುತ್ತದೆ ಎಂದು ಹೇಳಿದರು.

ಕೇಂದ್ರ ಸರಕಾರವು ಕೈಬಿಟ್ಟ ಯೋಜನೆಗಳನ್ನು ಮರಳಿ ಕೊಡದಿದ್ದರೆ ಈ ಭಾಗದ ವಿದ್ಯಾರ್ಥಿ, ಯುವಕರು, ರೈತರು, ಕಾರ್ಮಿಕರು, ನ್ಯಾಯವಾದಿಗಳು, ಹೋರಾಟಗಾರರು ಸೇರಿ ಹೋರಾಟ ಮಾಡುವುದರೊಂದಿಗೆ ಚಳುವಳಿ ರೂಪಿಸಬೇಕಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

emedialine

Recent Posts

ಅನರ್ಹ ಬಿ.ಪಿ.ಎಲ್ ಪಡಿತರ ಚೀಟಿ ಪತ್ತೆ ಹಚ್ಚಿ: ಅಕ್ರಮ‌ ಮದ್ಯ ಮಾರಾಟಕ್ಕೆ ಬ್ರೆಕ್ ಹಾಕಿ| ಡಿ.ಸಿ. ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಉಳ್ಳವರು ಸಹ ಸರ್ಕಾರಿ ಸೌಲಭ್ಯ ಪಡೆಯಲು ಬಿ‌.ಪಿ‌.ಎಲ್ ಪಡಿತರ ಚೀಟಿ ಪಡೆದಿರುವ ಸಾಧ್ಯತೆ ಇದ್ದು, ಕೂಡಲೆ ಇಂತಹ ಅನರ್ಹ…

5 hours ago

ಕುಂಬಾರ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ನೀಡಲು ಒತ್ತಾಯ

ಶಹಾಬಾದ: ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುಂಬಾರ ಸಮಾಜದ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ಅನುದಾನ ನೀಡುವ ಮೂಲಕ ಕಲಬುರಗಿ…

7 hours ago

ಪರಿಸರಸ್ನೇಹಿ ಪರ್ಯಾಯ ಇಂಧನಗಳ ಬಳಕೆ ಅಗತ್ಯ

ಶಹಬಾದ: ಪರಿಸರ ಮಾಲಿನ್ಯ ಉಂಟು ಮಾಡುವ ಇಂಧನಗಳ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸ್ನೇಹಿಯಾಗುವ ಪರ್ಯಾಯ ಇಂಧನಗಳ ಬಳಕೆ ಮಾಡಿದಲ್ಲಿ…

7 hours ago

ಕೊಲುವೆನೆಂಬ ಭಾಷೆ ದೇವನದಾದರೆ ಗೆಲುವೆನೆಂಬ ಭಾಷೆ ಭಕ್ತನದಾಗಬೇಕು

ಬಸವಾದಿ ಶರಣರ ರಚನೆಯ ವಚನ ಎನ್ನುವುದು ಬಹಳ ಮೌಲಿಕವಾದ ನುಡಿ. 'ವ' ಎಂಬ ಸೂತ್ರವನ್ನು ಬಿಡಿಸುವುದಾದರೆ, ವ ಎಂಬ ಮೊದಲ…

7 hours ago

ಮೋಹರಂ ಭಾವೈಕ್ಯತೆಯ ಸಂಕೇತದ ಉತ್ಸವ

ಕಲಬುರಗಿ: ಭಾರತ ಅನೇಕ ಜಾತಿ, ಧರ್ಮಗಳಿಂದ ಕೂಡಿದ್ದ ದೇಶವಾಗಿದ್ದು, ಹಬ್ಬ, ಜಾತ್ರೆ, ಉತ್ಸವಗಳು ಪರಸ್ಪರ ಬೆಸೆಯುತ್ತವೆ. ತ್ಯಾಗ, ಭಾವೈಕ್ಯತೆಯ ಸಂಕೇತವಾಗಿ…

7 hours ago

ತಾಜಸುಲ್ತಾನಪುರ: ಶಾಲಾ ಸಂಸತ್ತು ರಚನೆ

ಕಲಬುರಗಿ: ನಗರ ಹೊರವಲಯದ ತಾಜಸುಲ್ತಾನಪುರ ಗ್ರಾಮದ ಕೆಎಸ್ ಆರ್ ಪಿ ಸರಕಾರ ಪ್ರೌಢ ಶಾಲೆ ಕೆ. ಎಸ್. ಆರ್. ಪಿ…

7 hours ago