ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಪಕ್ಷಾತೀತ ಹೋರಾಟಕ್ಕೆ ಕೋರ ಕಮಿಟಿ ಸಭೆ

ಕಲಬುರಗಿ: ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿಯವರ ಅಧ್ಯಕ್ಷತೆಯಲ್ಲಿ ಇಂದು ದಿನಾಂಕ : 20.03.2021 ರಂದು ಸಾಯಂಕಾಲ ಹಿಂದಿ ಪ್ರಚಾರ ಸಭಾದ ಸಭಾಂಗಣದಲ್ಲಿ ಸಮಿತಿಯ ಕೋರ್ ಕಮಿಟಿಯ ಸಭೆ ಜರುಗಿತು.

ಈ ಸಭೆಯಲ್ಲಿ ಸಮಿತಿಯ ಮುಖಂಡರುಗಳಾದ ಮನೀಷ್ ಜಾಜು, ಲಿಂಗರಾಜ ಸಿರಗಾಪೂರ, ಸಿದ್ದಾರೆಡ್ಡಿ ಬಲಕಲ್, ಶಿವಲಿಂಗಪ್ಪ ಬಂಡಕ್, ಮಹ್ಮದ ಮಿರಾಜೋದ್ದೀನ್, ಸುನೀಲ್ ಕುಲಕರ್ಣಿ, ಗುರುರಾಜ ಭಂಡಾರಿ, ಇಂದುಧರ ಜಾಧವ, ಆನಂದ ದೇಶಪಾಂಡೆ, ಅಬ್ದುಲ ರಹೀಮ್, ಎಚ್.ಎಂ. ಹಾಜಿ, ಭದ್ರಶೆಟ್ಟಿ, ಅಣ್ಣಾರಾವ ಹೆಬ್ಬಾಳ, ಕಲ್ಯಾಣರಾವ ಪಾಟೀಲ್, ಚಂದ್ರಶೇಖರ ಮೇಕಿನ್, ಅಶೋಕ ಗುರುಜಿ, ಅಸ್ಲಂ ಚೌಂಗೆ, ಜ್ಞಾನ ಮಿತ್ರ ಸ್ಯಾಮ್ಯುವೆಲ್, ಸಂಧ್ಯಾರಾಜ್, ವೀರೇಶ ಪುರಾಣಿಕ್, ಬಸವರಾಜ ಚಿಟಗುಪ್ಪಿ, ಡಾ.ಮಾಜಿದ್ ದಾಗಿ, ಮಲ್ಲಿನಾಥ ಸಂಗಶೆಟ್ಟಿ, ಮಖ್ಬೂಲ್ ಪಟೇಲ್, ಪ್ರಭು ಪಾಟೀಲ್, ಗುರುಲಿಂಗಪ್ಪ ಟೆಂಗಳಿ, ಸಾಜಿದ್ ಅಲಿ ರಂಜೋಲಿ, ಶಾಂತಪ್ಪ ಕಾರಭಾಸಗಿ, ಬಾಬಾ ಫಕ್ರೋದ್ದೀನ್ ಮುಂತಾದವರು ಮಾತನಾಡಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಅಭಿವೃದ್ಧಿ ವಿಷಯದಲ್ಲಿ ಆಗುತ್ತಿರುವ ಮಲತಾಯಿ ಧೋರಣೆ ಮತ್ತು ನಿರ್ಲಕ್ಷತನದ ಬಗ್ಗೆ ಎಲ್ಲರೂ ಖಂಡಿಸಿದರು. ಮುಂದಿನ ಹೋರಾಟ ಪಕ್ಷಾತೀತವಾಗಿ ಏಳು ಜಿಲ್ಲೆಗಳಲ್ಲಿ ಸಂಘಟಿತ ಹೋರಾಟ ನಡೆಸಲು ಮುಂದಿನ ರೂಪ ರೇಷೆಗಳನ್ನು ಹಮ್ಮಿಕೊಳ್ಳಲು ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿಯವರಿಗೆ ಸರ್ವಾನುಮತದಿಂದ ಅಧಿಕಾರ ನೀಡಲಾಯಿತು.

ರೈತ ಸಂಘದ ಸುರಪುರ ತಾಲೂಕು ಘಟಕದ ನೂತನ ಪದಾಧಿಕಾರಿಗಳ ನೇಮಕ

ಸಭೆಯ ಅಧ್ಯಕ್ಷತೆ ವಹಿಸಿರುವ ಲಕ್ಷ್ಮಣ ದಸ್ತಿಯವರು ಮಾತನಾಡಿ 1984 ರ ಸರೀನ್ ಕಮಿಟಿ ವರದಿಯ ಶಿಫಾರಸ್ಸಿನಂತೆ ಮಂಜೂರಾದ ಕಲಬುರಗಿ ರೈಲ್ವೆ ವಿಭಾಗೀಯ ಕಚೇರಿ ತಿರಸ್ಕರಿಸಿರುವುದು, ನಂಜುಂಡಪ್ಪ ವರದಿ ಪ್ರಕಾರ ರಾಯಚೂರಿಗೆ ಬರಬೇಕಾದ ಐ.ಐ.ಟಿ. ಹುಬ್ಬಳ್ಳಿ-ಧಾರವಾಡಕ್ಕೆ ಸ್ಥಳಾಂತರ ಮಾಡಿರುವುದು, ನಂಜುಂಡಪ್ಪ ವರದಿಯಂತೆ ಮತ್ತು ಭಾರತ ಸರಕಾರದ 371ನೇ(ಜೆ) ಕಲಂ ಸ್ಥಾನಮಾನ ಪಡೆದಿರುವ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಿಗಬೇಕಾದ ಏಮ್ಸ್ ಹುಬ್ಬಳ್ಳಿ-ಧಾರವಾಡಕ್ಕೆ ಮಂಜೂರು ಮಾಡುತ್ತಿರುವುದು ಕಳೆದ ಅನೇಕ ವರ್ಷಗಳಿಂದ ಕೇಂದ್ರ ಸರಕಾರ ಕಲ್ಯಾಣ ಕರ್ನಾಟಕಕ್ಕೆ ಒಂದೇ ಒಂದು ಉದ್ಯೋಗ ಸೃಷ್ಟಿಯ ಕಾರ್ಖಾನೆ ಹಾಕದೇ ಇರುವುದು ರೈಲ್ವೆ ಕ್ಷೇತ್ರ, ಹೆದ್ದಾರಿ ಕ್ಷೇತ್ರ ಮುಂತಾಗಿ ಕೇಂದ್ರಕ್ಕೆ ಸಂಬಂಧಿಸಿದ ಯಾವುದೇ ಯೋಜನೆಗಳು ಸಹ ಇಲ್ಲಿಗೆ ಬರದೇ ಇರುವುದು ಅದರಂತೆ ರಾಜ್ಯ ಸರಕಾರ ಹೆಸರಿಗೆ ಮಾತ್ರ ನಮ್ಮ ಭಾಗಕ್ಕೆ ಕಲ್ಯಾಣ ಕರ್ನಾಟಕ ನಾಮಕರಣ ಮಾಡಿ ತನ್ನ ಅಧೀನದಲ್ಲಿ ಬರುವ ಪ್ರತ್ಯೇಕ ಮಂತ್ರಾಲಯ ಸ್ಥಾಪನೆ ಸೇರಿದಂತೆ ಕಾಲಮಿತಿಯಲ್ಲಿ ಅಭಿವೃದ್ಧಿ ಯೋಜನೆಗಳು ಪೂರ್ಣ ಗೊಳಿಸದೇ ಇರುವುದು, ರೆಗ್ಯುಲರ್ ಬಜೆಟ್‍ನಲ್ಲಿ ವಿಶೇಷ ಯೋಜನೆಗಳು ಮಂಜೂರು ಮಾಡದೇ ಅದರಂತೆ ಮಂಜೂರಾಗಿರುವ ಯೋಜನೆಗಳು ಅನುಷ್ಠಾನ ಮಾಡದೇ, ಕೆ.ಕೆ.ಆರ್.ಡಿ.ಬಿ.ಯಿಂದ 1500 ಕೋಟಿ ಹಣ ನೀಡಿ ಆದ್ಯತೆ ನೀಡಲಾಗಿದೆ ಎಂಬಂತೆ ಬಿಂಬಿಸುವುದು, ನಮ್ಮ ಮೀಸಲಾತಿಯ ಹಕ್ಕಿನ ಸುಮಾರು ಅಂದರೆ ಕಲ್ಯಾಣ ಕರ್ನಾಟಕದ ಪ್ರದೇಶದ ಮತ್ತು ಕಲ್ಯಾಣ ಕರ್ನಾಟಕೇತರ ಪ್ರದೇಶದ ಒಟ್ಟು ಎಪ್ಪತ್ತು ಸಾವಿರ ಹುದ್ದೆಗಳು ನೇಮಕ ಮಾಡದೇ ಇರುವುದು, ಮಂತ್ರಿ ಮಂಡಲದಲ್ಲಿ ಪ್ರಾತಿನಿಧ್ಯತೆ ಇಲ್ಲದೇ ಇರುವುದು, ಉಸ್ತುವಾರಿ ಸಚಿವರುಗಳು ಮೂರು ತಿಂಗಳಿಗೊಮ್ಮೆಯಾದರೂ ಬರುವದಿಲ್ಲ. ಒಟ್ಟಾರೆ ಹೇಳಬೇಕೆಂದರೆ ಕಲ್ಯಾಣ ಕರ್ನಾಟಕ ಪ್ರದೇಶ ಪ್ರಸ್ತುತ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಘೋರ ಮಲತಾಯಿ ಧೋರಣೆಗೆ ತುತ್ತಾಗಿದೆ.

ಅಂಗನವಾಡಿ ಕೇಂದ್ರ ಆರಂಭಿಸಲು ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಪ್ರಸ್ತುತ ಈಗ ಪಕ್ಷಾತೀತವಾಗಿ ಏಳು ಜಿಲ್ಲೆಗಳಲ್ಲಿ ಸಂಘಟಿತ ಹೋರಾಟ ಅತಿ ಅವಶ್ಯವಾಗಿದೆ. ಇದಕ್ಕೆ ಪೂರಕವಾಗಿ ಸಮಿತಿ ಇಂದಿನ ಸಭೆಯಲ್ಲಿ ತಮಗೆ ನೀಡಿರುವ ಅಧಿಕಾರದಂತೆ ಎಲ್ಲಾ ಪಕ್ಷಗಳ, ಸಂಘ ಸಂಸ್ಥೆಗಳ ಮತ್ತು ಆಯಾ ಕ್ಷೇತ್ರದ ಮುಖಂಡರ ಜೊತೆ ಮತ್ತು ಚಿಂತಕರ, ಬುದ್ಧಿ ಜೀವಿಗಳ ಜೊತೆ ಸಮಾಲೋಚನೆ ನಡೆಸಿ, ಒಂದೆರಡು ದಿನಗಳಲ್ಲಿ ಹೋರಾಟದ ರೂಪರೇಷೆಗಳನ್ನು ಪ್ರಕಟಿಸಲಾಗುವದೆಂದು ಸಭೆಯ ಅಧ್ಯಕ್ಷತೆ ವಹಿಸಿರುವ ಲಕ್ಷ್ಮಣ ದಸ್ತಿಯವರು ತಿಳಿಸಿದರು.

ಕೋರ ಕಮಿಟಿ ಸಭೆಯಲ್ಲಿ ಸಮಿತಿಯ ಇನ್ನೀತರ ಸದಸ್ಯರಾದ ಬಿ.ಬಿ. ಪಾಟೀಲ್, ಅಣ್ಣಾರಾವ ಹೆಬ್ಬಾಳ, ಶಿವರಾಜ ಅಂಡಗಿ, ಬಸವರಾಜ ಕೆ., ಚಂದ್ರಕಾಂತ, ಸುಭಾಸ, ಮಹ್ಮದ ಅಲಿ, ವಿಶಾಲದೇವ, ಶ್ರೀನಿವಾಸ, ಸುನೀಲ್ ಬಿ., ಮೋಹಿಯೊದ್ದೀನ್ ಸೇರಿದಂತೆ ಕೋರ ಕಮಿಟಿಯ ಬಹುತೇಕ ಸದಸ್ಯರು ಹಾಜರಿದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

44 mins ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

54 mins ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

56 mins ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

1 hour ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

1 hour ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420