ಬೆಂಗಳೂರು: ಕೋವಿಡ್ ಸಂಕಷ್ಟ ಕಾಲದಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಬೇಕು ಎಂದು ಖ್ಯಾತ ವೈದ್ಯೆ ಡಾ ಪೂರ್ವಿ ಜಯರಾಜ್ ಹೇಳಿದ್ದಾರೆ.
ನಗರದ ಖಾಸಗಿ ಹೋಟೇಲ್ ನಲ್ಲಿ ಲಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317ಎ ವತಿಯಿಂದ ಆಯೋಜಿಸಲಾಗಿದ್ದ ಪ್ರಾಂತೀಯ ಸಮ್ಮೇಳನವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕೋವಿಡ್ ಸಾಂಕ್ರಾಮಿಕ ರೋಗದ ಕಾರಣವಾಗಿ ಹಲವಾರು ಜನರು ಡಿಪ್ರೆಷನ್ ಹಾಗೂ ಒತ್ತಡಕ್ಕೆ ಒಳಗಾಗುತ್ತಿರುವುದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಿಟ್ಟುಕೊಳ್ಳುವುದು ಬಹಳ ಮುಖ್ಯ ವಿಷಯವಾಗಿದೆ. ಮಾನಸಿಕವಾಗಿ ಆರೋಗ್ಯವನ್ನು ಹತೋಟಿಯಲ್ಲಿ ಇಟ್ಟುಕೊಳ್ಳುವುದರಿಂದ ದೈಹಿಕವಾಗಿಯೂ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.
ಮಾಜಿ ಸೈನಿಕನ ಮೇಲಿನ ಹಲ್ಲೆಗೆ ಸಿಡಿದೆದ್ದ ಸೈನಿಕರು
ಲಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317ಎ ವತಿಯಿಂದ ಆಯೋಜಿಸಲಾಗಿದ್ದ ಪ್ರಾಂತೀಯ ಸಮ್ಮೇಳನದಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ಸ್ಯಾನಿಟರಿ ನ್ಯಾಪ್ಕಿನ್ ವೆಂಡಿಂಗ್ ಮಷಿನ್ ಹಾಗೂ ಶುದ್ದು ಕುಡಿಯುವ ನೀರು ಒದಗಿಸುವ ಆರ್ ಓ ವಾಟರ್ ಪ್ಯೂರಿಫೈರ್ ಗಳನ್ನು ವಿತರಿಸಿ ಮಾತನಾಡಿದ ರೀಜನ್ ಚೇರ್ ಪರ್ಸನ್ ಲಯನ್ ಡಾ. ಸತ್ಯವತಿ ಬಸವರಾಜು, ಲಯನ್ಸ್ ಕ್ಲಬ್ ವತಿಯಿಂದ ಹಲವಾರು ಸಾಮಾಜಿಕ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಾ ಬರುತ್ತಿದ್ದೇವೆ. ಕಳೆದ ಕೆಲವು ತಿಂಗಳ ಹಿಂದೆ ಕನಕಪುರದಲ್ಲಿ ಕಲ್ಯಾಣೀಯನ್ನ ಶುದ್ದೀಕರಿಸಿ ಪುನಶ್ಚೇತನ ಮಾಡಿದ್ದೇವೆ. ನಮ್ಮ ರೀಜನ್ ವತಿಯಿಂದ ಸಮಾಜಮುಖಿಯಾದ ಇನ್ನು ಹೆಚ್ಚಿನ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ನುರಿತ ಸಿಬ್ಬಂಧಿಗಳು ಮಹಾವಿದ್ಯಾಲಯಗಳ ಬೆನ್ನೆಲುಬು: ಡಾ. ಎಸ್ಎಸ್ ಹೆಬ್ಬಾಳ
ಕಾರ್ಯಕ್ರಮದಲ್ಲಿ ಪಿಎಂಜೆಏಫ್ ಡಿಸ್ಟಿಕ್ಟ್ರ ಗವರ್ನರ್ ಲಯನ್ ಡಾ. ಜಿ ಎ ರಮೇಶ್, ಪಿಎಂಜೆಎಫ್ ಲಯನ್ ಡಾ.ಪ್ರಭಾ ಮೂರ್ತಿ, ಎಂಜೆಎಫ್ ಲಯನ್ ಡಾ ಶ್ರೀವಿದ್ಯಾ ಸೇರಿದಂತೆ ಹಲವು ಉಪಸ್ಥಿತರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…