ಗ್ರಾಮದಲ್ಲಿ ವಿಶ್ವ ಜಲ ದಿನಾಚರಣೆ

ಕಲಬುರಗಿ: ತಾಲೂಕಿನ ಬಬಲಾದ ಐಕೆ ಗ್ರಾಮ ಪಂಚಾಯತ್‌ನಲ್ಲಿ ವಿಶ್ವ ಜಲ ದಿನಾಚರಣೆ ಅಂಗವಾಗಿ ಸಮುದಾಯ ವಂತಿಕೆ ಸಂಗ್ರಹಣಾ ಅಭಿಯಾನ ಹಾಗೂ ಉದ್ಯೋಗ ಖಾತ್ರಿ ಯೋಜನೆಯಡಿ ದುಡಿಯೋಣ ಬಾ ಕಾರ್ಯಕ್ರಮ ಆಯೋಜಿಸಲಾಗಿತು.

ಈ ಸಂದರ್ಭದಲ್ಲಿ ಜಲ ಜೀವನ ಮಿಷನ್ ಜಿಲ್ಲಾ ಯೋಜನಾ ವವ್ಯಸ್ಥಾಪಕರಾದ ಡಾ.ರಾಜು ಕಂಬಾಳಿಮಠ ಮಾತನಾಡಿ ನೀರು ಅತ್ಯಮೂಲ್ಯವಾದ್ದದು ಜಾಗತಿಕ ತಾಪ ಮಾನದಿಂದ ನೀರಿನ ಮೂಲ ಬರಿದಾಗುತ್ತಿದ್ದು, ಹಾಗೂ ಬೇಸಿಗೆ ಕಾಲದಲ್ಲಿ ಹಿತವಾಗಿ-ಮಿತವಾಗಿ ನೀರನ್ನು ಬಳಸಬೇಕೆಂದರು.

ಸಾಹಿತ್ಯ ಸಿಂಧು ಪ್ರಶಸ್ತಿ ಪ್ರದಾನ

ಬಬಲಾದ ಗ್ರಾಮದಲ್ಲಿ ಈಗಾಗಲೇ ಟೆಂಡರ್ ಕರೆದಿದ್ದು, ಗ್ರಾಮಗಳಲ್ಲಿ ಕಾರ್ಯಾತ್ಮಕ ಮನೆ ನಳ ಸಂಪರ್ಕ ನೀಡುವುದಕ್ಕೆ ಸಮುದಾಯ ಮಾಲಿಕತ್ವ ವಹಿಸುವ ಹಾಗೂ ಭಾಗೀದಾರರಾಗಲು ಶೇ.೧೦ ರಷ್ಟು ಸಮುದಾಯ ವಂತಿಕೆಯನ್ನು ಯೋಜನೆಯ ಸದುಪಯೋಗ ಪಡೆದು ಕೊಳ್ಳುವ ಫಲಾನುಭವಿಗಳಿಂದ ಸಂಗ್ರಹಿಸುತ್ತಿದ್ದು, ಇನ್ನುಳಿದ ಶೇಕಡಾ ೯೦% ಅನುದಾನವನ್ನು ಸರಕಾರ ನೀಡುತ್ತಿದೆ ಯೋಜನೆಯಡಿ ವೈಯಕ್ತಿಕ ಶೌಚಾಲಯ, ಹಾಗೂ ಉದ್ಯೋಗ ಖಾತ್ರಿ ಯೋಜನೆ ಅಡಿ ಬಚ್ಚಲು ಗುಂಡಿ, ಕೃಷಿ ಹೊಂಡ , ಕೃಷಿ ಬದು, ಪುಷ್ಕರಣಿಗಳ ಪುನರುಜೀವನ ಕಾರ್ಯಕ್ರಮವಿದ್ದು, ಅದರ ಸದುಪಯೋಗ ಪಡದು ಕೊಳ್ಳುವಂತೆ ಗ್ರಾಮಸ್ಥರಿಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಸುಜಾತ  ಅವರಾಧಿಕಾರಿ ಮಾತನಾಡಿ ಗ್ರಾಮಸ್ಥರು ಸರಕಾರದ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ ಅಧ್ಯಕ್ಷರಾದ ಸಂದೀಪ್ ಬಬಲಾದ ವಹಿಸಿಕೊಂಡು ಗ್ರಾಮ ಪಂಚಾಯತ್ ವತಿಯಿಂದ ಸರಕಾರದ ಎಲ್ಲ ಯೋಜನೆಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ರೂಡಾ ಸಂಸ್ಥೆಯ ತಂಡದ ನಾಯಕರಾದ ಸಂತೋಷ ಮೂಲಗೆ ಯೋಜನೆಯ ತಾಂತ್ರಿಕ ವಿಷಯದ ಕುರಿತು ತಿಳಿಸಿದರು.

ಮಾಜಿ ಸೈನಿಕನ ಮೇಲಿನ ಹಲ್ಲೆಗೆ ಸಿಡಿದೆದ್ದ ಸೈನಿಕರು

ಕಾರ್ಯಕ್ರಮದ ವೇದಿಕೆ ಮೇಲೆ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಸುಶೀಲಾ ಬಾಯಿ ಶರಣು  ಹಾಗೂ  ಗ್ರಾಮ ಪಂಚಾಯತ ಸದಸ್ಯರಾದ ಸಿದ್ಧರಾಮ ಸಿರಶಾಪೂರು , ಜಗದೇವಿ ಜಗನ್ನಾಥ ಪೂಜಾರಿ , ಶಿವ ಕುಮಾರ ಉಪಸ್ಥಿರತರಿದ್ದರು ಇದೇ ಕಾರ್ಯಕ್ರಮದಲ್ಲಿ ಸಂದೀಪ್ ಬಬಲಾದ , ಮಹಾದೇವಿ ಬಸವರಾಜ , ಜಗನ್ನಾಥ ದೇವಿಂದ್ರಪ್ಪ , ಪುತಳಾಬಾಯಿ ಯಶವಂತಪ್ಪ , ಶರಣಪ್ಪ ದಸ್ತಾಪೂರು, ಇಂದುಬಾಯಿ ಬಾಬುರಾವ , ಶಿವಕುಮಾರ ಮಲ್ಲೇಶಪ್ಪ ರವರು ಒಟ್ಟು ರೂ.೧೧೦೦೦/-ಸಮುದಾಯವ ವಂತಿಕೆ ನೀಡಿದರು., ರೂಡಾ ಸಂಸ್ಥೆಯ  ಶ್ರವಣಕುಮಾರ ಅಕ್ಕಿಮನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

2 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

2 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

3 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

3 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420