ಗ್ರಾಮದಲ್ಲಿ ವಿಶ್ವ ಜಲ ದಿನಾಚರಣೆ

0
41

ಕಲಬುರಗಿ: ಕಮಲಾಪೂರು ತಾಲೂಕಿನ ನಾಗೂರು ಗ್ರಾಮಪಂಚಾಯತ್‌ನಲ್ಲಿ ವಿಶ್ವ ಜಲ ದಿನಾಚರಣೆ ಅಂಗವಾಗಿ ಜಲ ಜೀವನ ಮಿಷನ್ ಅಡಿಯಲ್ಲಿ ಸಮುದಾಯ ವಂತಿಕೆ ಸಂಗ್ರಹಣಾ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಯಾಧ ಮಾನಪ್ಪ ಕಟ್ಟಿಮನಿ ರವರು ಮುಂದಿನ ದಿನದಲ್ಲಿ ನಾಗೂರು ಗ್ರಾಮದಲ್ಲಿ ಜಲ ಜೀವನ ಮಿಷನ್ ಅಡಿಯಲ್ಲಿ ಮನೆ ಮನೆಗೆ ನಳ ಸಂಪರ್ಕ ನೀಡಲಾಗುತ್ತಿದೆ ಇದರ ಸದುಪಯೋಗವನ್ನು ಎಲ್ಲರು ಪಡೆದುಕೊಳ್ಳಬೆಕೆಂದರು.

Contact Your\'s Advertisement; 9902492681

ಕಲಬುರಗಿಯಲ್ಲಿ ಮಾ.26 ರಂದು ಕ್ಯಾಂಪಸ್ ಸಂದರ್ಶನ

ಬೇಸಿಗೆ ಸಂದರ್ಭದಲ್ಲಿ ನೀರನ್ನು ಮಿತವಾಗಿ ಬಳಸುವಂತೆ ತಿಳಿಸಿದರು. ಜಿಲ್ಲಾ ಯೋಜನಾ ವವ್ಯಸ್ಥಾಪಕರಾದ ಡಾ.ರಾಜು ಕಂಬಾಳಿಮಠ ಮಾತನಾಡಿ ನೀರು ಅತ್ಯಮೂಲ್ಯವಾದ್ದದು ಜಾಗತಿಕ ತಾಪ ದಿನೆ ದಿನೆ ಏರುತ್ತಿರುವುದರಿಂದ ಸಾರ್ವಜನಿಕರು ನೀರನ್ನು ಮಿತವಾಗಿ ಬಳಸುವಂತೆ ಹಾಗೂ ಇಂಗು ಗುಂಡಿಗಳನ್ನು ಅಳವಡಿಸಿಕೊಳ್ಳಬೆಕೆಂದರು. ಮತ್ತು ಯೋಜನೆಗೆ ಸಮುದಾಯ ವಂತಿಕೆ ನೀಡುವಂತೆ ತಿಳಿಸದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಜಗದೇವಿ ಪವಾರ ಮಾತನಾಡಿ ಗ್ರಾಮಸ್ಥರು ಸರಕಾರದ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದರು. ರೂಡಾ ಸಂಸ್ಥೆಯ ತಂಡದ ನಾಯಕರಾದ ಸಂತೋಷ ಮೂಲಗೆ ಯೋಜನೆಯ ತಾಂತ್ರಿಕ ವಿಷಯದ ಕುರಿತು ತಿಳಿಸಿದರು.

ರಟಕಲ್ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ: ಜಯಂತ್ಯೋತ್ಸವ, ರಥೋತ್ಸವ ರದ್ದು

ಬಿಲ್ ಕಲೆಕ್ಟರ್ ಶರಣಪ್ಪ ಸ್ವಾಗತಿಸಿದರು. ಶ್ರವಣಕುಮಾರ ಅಕ್ಕಿಮನಿ ಕಾರ್ಯಕ್ರಮದಲ್ಲಿ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಕರಬಸಪ್ಪ, ಸುನಿಲ್‌ಅಂತಪನಳ್, ಗಣೇಶ ಮುದಗೋಳ್ ,ಶ್ರೀಶೈಲ್ ರಮೇಶ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here