ಬಿಸಿ ಬಿಸಿ ಸುದ್ದಿ

ಮಳೆಯಿಂದ ಗ್ರಾಮವಾಸ್ತವ್ಯ ಮುಂದೂಡಿದಕ್ಕೆ‌ ಸಚಿವ ಪ್ರಿಯಾಂಕ್ ಖರ್ಗೆ ಕ್ಷಮೆ

ಕಲಬುರಗಿ: ಹೇರೂರು ( ಬಿ) ಗ್ರಾಮದಲ್ಲಿ ನಡೆಯಬೇಕಿದ್ದ ಸಿಎಂ ಗ್ರಾಮ ವಾಸ್ತವ್ಯ ಮಳೆಯಿಂದ ಮೂಂದೂಡಿದ್ದು ಅನಾನುಕೂಲವಾಗಿರುವುದಕ್ಕೆ ಸಾರ್ವಜನಿಕರ ಕ್ಷಮೆಯಾಚಿಸುತ್ತೇನೆ ಮುಂದಿನ ಗ್ರಾಮವಾಸ್ತವ್ಯ ಎಲ್ಲಿ ಎನ್ನುವುದರ ಕುರಿತು ಜುಲೈ ತಿಂಗಳ ಮೊದಲ ವಾರದಲ್ಲಿ ನಿರ್ಧರಿಸಲಾಗುವುದು ಎಂದು ಸಮಾಜಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಅವರು ಮಾತನಾಡುತ್ತಿದ್ದರು.

ಗ್ರಾಮ ವಾಸ್ತವ್ಯದಲ್ಲಿ ಸಲ್ಲಿಸಬೇಕಾಗಿದ್ದ ಜಿಲ್ಲೆಯ 28 ಪ್ರಮುಖ ಬೇಡಿಕೆಗಳನ್ನು ಸರಕಾರದ ‌ಮುಂದಿಡಲಾಗಿತ್ತು. ಇಂದು ನಡೆಯಬೇಕಾಗಿದ್ದ ಸಿಎಂ ಅವರ ಜನತಾ ದರ್ಶನ ಹಾಗೂ ಗ್ರಾಮ ವಾಸ್ತವ್ಯದಲ್ಲಿ ಬಹುತೇಕ ಬೇಡಿಕೆಗಳು ಈಡೇರಿಸುವ ನಿರೀಕ್ಷೆ ಮಾಡಲಾಗಿತ್ತು. ಅದರೆ, ಭಾರೀ ಮಳೆ ಬಿದ್ದ ಪರಿಣಾಮ ಹೇರೂರು ( ಬಿ) ಗ್ರಾಮದಲ್ಲಿ ನಡೆಯಬೇಕಿದ್ದ ಗ್ರಾಮವಾಸ್ತವ್ಯ ಮುಂದೂಡಿದೆ. ಆದರೂ ಮಳೆ ಬಂದಿರುವುದು ಹರ್ಷ ತರುವ ವಿಚಾರವಾಗಿದ್ದು ರೈತರು ಮುಂಗಾರು ಸಾಲಿನ ಕೃಷಿ‌ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಅವರು ಹೇಳಿದರು.

ಸಮಾಜಕಲ್ಯಾಣ ಇಲಾಖೆಯ ವತಿಯಿಂದ ಹೇರೂರು ( ಬಿ ) ಗ್ರಾಮದಲ್ಲಿ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲು ಈಗಾಗಲೇ ರೂ 1.50 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.

ಜಿಲ್ಲೆಯ 28 ಪ್ರಮುಖ ಬೇಡಿಕೆಗಳ ಪಟ್ಟಿ ಸಿಎಂ ಗೆ ಸಲ್ಲಿಕೆ, ಬೇಡಿಕೆ ಈಡೇರಿಸಲು ಸಿಎಂ ಭರವಸೆ- ಪ್ರಿಯಾಂಕ್ ಖರ್ಗೆ.

ಗ್ರಾಮ ಪಂಚಾಯತ ಮಟ್ಟದಲ್ಲಿ ಮಾಡಬೇಕಾಗಿರುವ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸಿಎಂ ಬಂದು ಮಾಡಬೇಕಾಗಿದೆ ಇದು ಆಡಳಿದ ವೈಫಲ್ಯವಲ್ಲವೇ? ಎನ್ನುವ ಪ್ರಶ್ನೆ ಉತ್ತರಿಸಿದ ಸಚಿವರು, ಕೆಲವೊಂದು ಸಂದರ್ಭಗಳಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಜೊತೆಗೆ ಸಮಗ್ರ ಅಭಿವೃದ್ದಿಗೆ ಸಾರ್ವಜನಿಕರ ಸಹಕಾರ ಹಾಗೂ ಬೆಂಬಲವೂ ಕೂಡಾ ಬೇಕು ಎಂದು ಹೇಳಿದರು.

ಮೈತ್ರಿ‌ಸರಕಾರದಲ್ಲಿ ಒಮ್ಮತವಿಲ್ಲ ಅದು ನಿನ್ನೆ ನಡೆದ ಚಂಡ್ರಕಿ ಗ್ರಾಮದ ಸಿಎಂ ಅವರ ಸಭೆಯಲ್ಲಿ ಕಂಡುಬಂದಿತು‌ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು ಪ್ರೋಟೋಕಾಲ್ ಪ್ರಕಾರ ನಡೆಸಬೇಕಿದ್ದ ಸಭೆಯಲ್ಲಿ ಶಾಸಕರ ಪುತ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಇಚ್ಚಿಸುವುದಿಲ್ಲ ಎಂದರು.

371 ( ಜೆ ) ಅನುಷ್ಠಾನ ಸಮಿತಿ‌ ಉಪಸಮಿತಿ ಅಧ್ಯಕ್ಷನಾಗಿ ನಾನು ಜಿಲ್ಲೆಯಲ್ಲಿ ಈಗಾಗಲೇ ಖಾಲಿ ಇರುವ ಪ್ರಮುಖ 70 ಕ್ಕೂ ಅಧಿಕ ಹುದ್ದೆಗಳನ್ನು ಕೂಡಲೇ ತುಂಬಬೇಕು ಜೊತೆಗೆ ಹೈಕ ಭಾಗಕ್ಕೆ ವರ್ಗಾವಣೆಯಾದ ಅಧಿಕಾರಿಗಳು ಕಡ್ಡಾಯವಾಗಿ ಇಂತಿಷ್ಟು ವರ್ಷ ಕಾಲ ಕಾರ್ಯನಿರ್ವಹಿಸುವ ಕಾನೂನು ಜಾರಿಗೆ ತರುವಂತೆ ಸಿಎಂ ಅವರಿಗೆ ಪತ್ರ ಬರೆದಿದ್ದೇನೆ.

ಯಾವುದೇ ಕಾರಣಕ್ಕೆ 371 ( J) ಅಡಿಯಲ್ಲಿ ಒದಗಿಸಲಾಗಿರುವ ಸೌಲಭ್ಯದ ದುರುಪಯೋಗವಾಗಲು ಬಿಡುವುದಿಲ್ಲ ಎಂದ ಸಚಿವರು, ಕೆಲ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು. ಗೋಷ್ಠಿಯ ಮಧ್ಯೆ ಬಂದ ಸಿಎಂ ಅವರ ಕರೆಗೆ ಉತ್ತರಿಸಿದ ಬಂದ ಸಚಿವರು ಹೇರೂರು ( ಬಿ) ಗ್ರಾಮ ಸೇರಿದಂತೆ ಜಿಲ್ಲೆಯ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು ಎಂದು ಹೇಳಿದರು.

ಕಳೆದ ನಾಲ್ಕು ವರ್ಷದಲ್ಲಿ‌ ಸಮಾಜಕಲ್ಯಾಣ ಇಲಾಖೆಯಲ್ಲಿ ನಿಗದಿಪಡಿಸಿದ ಅನುದಾನದಲ್ಲಿ ಶೇ.‌90 ಅನುದಾನ ಬಳಕೆಯಾಗಿದೆ. ಸಿಎಂ ಅವರ ಗ್ರಾಮವಾಸ್ತವ್ಯ ಮಾಡಬೇಕಿದ್ದ ಹೇರೂರು ( ಬಿ ) ಗ್ರಾಮದ ಅಭಿವೃದ್ದಿಗಾಗಿ ಇಲಾಖೆಯ ವತಿಯಿಂದ ಈಗಾಗಲೇ ರೂ 1.50 ಕೋಟಿ ಬಿಡುಗಡೆ ಮಾಡಲಾಗಿದೆ. ಮಹಾರಾಷ್ಟ್ರದಿಂದ ನೀರು ಬಿಡುವ ಒಪ್ಪಂದವಾಗಿದ್ದರೂ ಕೂಡಾ ಅಲ್ಲಿನ ಸರಕಾರ‌ ನೀರು ಬಿಡಲು ನಕಾರ ತೋರಿಸಿದ್ದು, ಈಗಾಗಲೇ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ ಅವರು ಪತ್ರ ಬರೆದಿದ್ದು ಆ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ಎಂ.ವೈ. ಪಾಟೀಲ್, ಅಜಯಸಿಂಗ್,ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಸೇರಿದಂತೆ ಮತ್ತಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420