ಕೊರೊನಾ 2ನೇ ಅಲೆ: ಗಂಭೀರವಾಗಿ ಪರಿಗಣಿಸಲು ಆಗ್ರಹ

ಕಲಬುರಗಿ : ಕರೊನಾ ಎರಡನೆಯ ಅಲೆ ಆರಂಭವಾಗಿ ತೀವ್ರ ಗತಿಯಿಂದ ದಿನೆ ದಿನೆ ಹೆಚ್ಚಾಗುತ್ತಿದೆ. ಇದರಿಂದ ಸೊಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆಯೂ ಸಹ ಹೆಚ್ಚುತ್ತಿದೆ. ಪ್ರಸ್ತುತ ಸಂದರ್ಭದಲ್ಲಿ ಮಹಾರಾಷ್ಟ್ರ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ಕಲ್ಯಾಣ ಕರ್ನಾಟಕದ ಬೀದರ, ಕಲಬುರಗಿ ಜಿಲ್ಲೆಯ ಜನರು ಎಚ್ಚರ ವಹಿಸಬೇಕಾಗಿದೆ.

ಕಲ್ಯಾಣ ಕರ್ನಾಟಕ ಪ್ರದೇಶದ ಪ್ರಾದೇಶಿಕ ಆಯುಕ್ತರು ಸೇರಿದಂತೆ ಆಯಾ ಜಿಲ್ಲೆಯ ಜಿಲ್ಲಾಡಳಿತ ಕೊರೊನಾ ಎರಡನೆಯ ಅಲೆ ತಡೆಗಟ್ಟುವ ವಿಷಯದಲ್ಲಿ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಕೈಗೊಳ್ಳಬೇಕು ದ್ದಾರೆ.

ಕೊರೊನಾ ಮೊದಲನೇ ಅಲೆಯ ಮಹಾಮಾರಿಯಿಂದ ಬಲಿಯಾಗಿರುವುದು ಇಡೀ ದೇಶ ದಲ್ಲಿಯೇ ಕಲಬುರಗಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ. ಈ ಹಿಂದೆ ಕೊರೊನಾ ಮಹಾಮಾರಿಯ ತಡೆಗಟ್ಟಲು ಆರಂಭದಲ್ಲಿ ಏಕಮಾತ್ರ ಮಾರ್ಗ ಲಾಕ ಡೌನ ಎಂದು ಪರಿಗಣಿಸಿ ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ಮಾಡಲಾಗಿತ್ತು.

ದೇಶದ ಎಲ್ಲಾ ಜನರು ಸಹಕರಿಸಿದರು. 2020-2021ನೇ ಸಾಲಿನ ಒಂದುವರೆ ವರ್ಷದ ಅವಧಿಯಲ್ಲಿ ಕೊರೊನಾ ಹರಡುವಿಕೆ ಮತ್ತು ಇದನ್ನು ತಡೆಗಟ್ಟುವ ವಿಷಯಕ್ಕೆ ಸಂಬಂಧಿಸಿ ಸರಕಾರಕ್ಕೆ ಹಾಗೂ ಆರೋಗ್ಯ ಇಲಾಖೆಗೆ ಅಪಾರ ಪ್ರಮಾಣದ ಅನುಭವವು ಸಹ ಆಗಿದೆ, ಜನರಿಗೂ ಇದರ ಮನವರಿಕೆಯಾಗಿದೆ.

ಈ ಮಧ್ಯೆ ಪ್ರಸ್ತುತ ದಿನಗಳಲ್ಲಿ ಕೊರೊನಾ ತಡೆಗಟ್ಟುವಿಕೆಗೆ ಸರಕಾರ ವೈಜ್ಞಾನಿಕ ಮಾದರಿಯ ಕ್ರಮಗಳನ್ನು ಅನುಸರಿಸುವ ಮುಖಾಂತರ ಜನರ ಜೀವನ ನಡೆಯುವುದರ ಜೊತೆಗೆ ಸಾಮಾಜಿಕ ಅಂತರ ಕಾಪಾಡುವದರ ಬಗ್ಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು ಸಂಘಟನೆಯ ಲಕ್ಷ್ಮಣ ದಸ್ತಿ ಆಗ್ರಹಿಸಿದ್ದಾರೆ.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

2 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

2 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

2 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420