ಏ.5 ರವರೆಗೆ ಕಾಲುವೆಗೆ ನೀರು ಹರಿಸಲು ಆರ್.ವಿ.ನಾಯಕ ಮನವಿ

ಸುರಪುರ: ರೈತರ ಬೆಳೆಗಳಿಗೆ ಏಪ್ರಿಲ್ 5ರ ವರೆಗೆ ನೀರಿನ ಅವಶ್ಯವಿದೆ,ಆದ್ದರಿಂದ ಈಗ ಹೊರಡಿಸಿರುವ ಆದೇಶವನ್ನು ಪರಿಶೀಲಿಸಿ ಏಪ್ರಿಲ್ 5ರ ವರೆಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಆಲಮಟ್ಟಿ ಹಾಗೂ ನಾರಾಯಣಪೂರ ಜಲಶಾಯಗಳಲ್ಲಿ ನೀರಿನ ಪ್ರಮಾಣ ಇನ್ನೂ ಹೆಚ್ಚಾಗಿ ಲಭ್ಯವಿರುವುದರಿಂದ, ಸದರಿ ನಾರಾಯಣಪೂರ ಜಲಾಶಯದಿಂದ ದಿನಾಂಕ: 31-03-2021ರವರೆಗೆ ಕಾಲುವೆಗಳಿಗೆ ನೀರು ಹರಿಸುವ ಸಲುವಾಗಿ ನಾನು ಈ ಹಿಂದೆ ಬರೆದ ಪತ್ರದಲ್ಲಿ ಒತ್ತಾಯಿಸಿದಂತೆ ತಾವುಗಳು ಕ್ರಮವಹಿಸಿರುವುದು ಸ್ವಾಗತಾರ್ಹವಾಗಿದೆ.

ಪ್ರಸ್ತುತ ನಾರಾಯಣಪುರ ಎಡದಂಡೆ ಕಾಲುವೆ ಕೂನೆಭಾಗದ ರೈತರ ಜಮೀನುಗಳಿಗೆ ನೀರು ತಲುಪದೆ ಹಿಂಗಹಾರು ಹಂಗಾಮಿನ ಬೆಳಗಳು ಕಟಾವಿಗೆ ಬಂದಿರುವುದಿಲ್ಲ. ಇದರಿಂದಾಗಿ ಕಾಲುವೆಯ ಕೂನೆ ಭಾಗದ ರೈತರು ತುಂಬಾ ಸಂಕಷ್ಟಕ್ಕೋಳಗಾಗುತ್ತಿದ್ದಾರೆ. ಕಾರಣ ರೈತರ ಹಿತದೃಷ್ಠಿಯಿಂದ ಕಾಲುವೆಗಳಿಗೆ ಏಪ್ರೀಲ್ 5ರ ರವರೆಗೆ ನೀರು ಹರಿಸಬೇಕು. ಇದರಿಂದಾಗಿ ರೈತರಿಗೆ ಹೆಚ್ಚಿನ ಅನೂಕೂಲ ಕಲ್ಪಿಸಿದಂತಾಗುತ್ತದೆ. ಸದರಿ ವಿಷಯದಲ್ಲಿ ಹಿಂದೆ ನಾನು ಪತ್ರದ ಮುಖಾಂತರ ತಮ್ಮಲ್ಲಿ ಕಾಲುವೆಗಳಿಗೆ ನೀರು ಹರಿಸುವ ಬಗ್ಗೆ ಕೋರಿರುತ್ತೇನೆ.

ಅದರಂತೆ ತಾವುಕೂಡಾ ಸ್ಪಂದಿಸಿ ರೈತರಿಗೆ ಅನುಕೂಲಕಲ್ಪಿಸಿದ್ದೀರಿ ಕೂನೆಭಾಗದ ರೈತರ ಜಮೀನುಗಳಿಗೆ ಇನ್ನು ನೀರಿನ ಅಭಾವ ಇರುವುದರಿಂದ ಅತೀ ಶೀಘ್ರವಾಗಿ ರೈತರ ಹಿತಕಾಯುವ ಕ್ರಮಕೈಗೊಂಡು ರೈತರಿಗೆ ಅನುಕೂಲಮಾಡಿಕೊಡಬೇಕೆಂದು ಈ ಮೂಲಕ ತಮ್ಮಲ್ಲಿ ಕೋರುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

1 hour ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

1 hour ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

2 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420