ವಿಕಲಚೇತನರ ಒಕ್ಕೂಟದ ಅಧ್ಯಕ್ಷರಾಗಿ ಚಂದ್ರಶೇಖರ ನಾಟೇಕರ್ ಆಯ್ಕೆ

0
73

ಶಹಾಪುರ : ಕರ್ನಾಟಕ ವಿಕಲಚೇತನರ ಹಕ್ಕುಗಳ ಒಕ್ಕೂಟದ ಶಹಾಪುರ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಹತ್ತಿಗುಡೂರ ಗ್ರಾಮದ ಚಂದ್ರಶೇಖರ ನಾಟೇಕಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷರಾದ ಬಸವರಾಜ ಬನ್ನೆಟ್ಟಿ ಬೈರಮರಡಿ ಪ್ರಕಟಣೆಗೆ ತಿಳಿಸಿದ್ದಾರೆ.

ವಿಕಲಚೇತನರ ಹಕ್ಕುಗಳ ಹೋರಾಟ ಸಮಿತಿಯ ವಿಭಾಗೀಯ ಅಧ್ಯಕ್ಷರಾದ ಸಂಗನಗೌಡ ಧನರೆಡ್ಡಿ ಅವರ ಮಾರ್ಗದರ್ಶನದಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲು ನೇಮಕಾತಿ ಪತ್ರದಲ್ಲಿ ಆದೇಶಿಸಿದ್ದಾರೆ.ಯಾವುದೇ ಸಂದರ್ಭದಲ್ಲಿ ಯಾರಿಗೂ ಧಕ್ಕೆ ತರದೆ ಜವಾಬ್ದಾರಿಯಿಂದ ಮುತುವರ್ಜಿವಹಿಸಿ ತಾಲ್ಲೂಕು ಘಟಕವನ್ನು ಮುನ್ನಡೆಸಿಕೊಂಡು ಹೋಗಬೇಕು ಎಂದು ತಿಳಿಸಿದರು.

Contact Your\'s Advertisement; 9902492681

ವಿಕಲಚೇತನರ ಹಕ್ಕುಗಳ ಬಗ್ಗೆ, ಸೌಲಭ್ಯಗಳ ಬಗ್ಗೆ,ಜಾಗೃತಿ ಮೂಡಿಸಿ ಹಲವಾರು ಕಾರ್ಯಕ್ರಮ ಹಮ್ಮಿಕೊಳ್ಳುವುದರ ಜೊತೆಗೆ ಹಕ್ಕುಗಳಿಗಾಗಿ ಹೋರಾಟ ನಡೆಸುವುದು ಹಾಗೂ ವಿವಿಧ ಗ್ರಾಮ ಘಟಕಗಳ ಅಧ್ಯಕ್ಷರ ನೇಮಕಾತಿ ಹೊಣೆಯನ್ನು ಅವರಿಗೆ ಸಂಪೂರ್ಣ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here