ಕಸಾಪ ಚುನಾವಣೆ: ಇಂದು ತೇಗಲತಿಪ್ಪಿ ನಾಮಪತ್ರ

0
257

ಕಲಬುರಗಿ: ನಿತ್ಯ ನೂತನ ನಿರಂತರ ಕಾರ್ಯಕ್ರಮಗಳ ಮೂಲಕ ಜನಪ್ರಿಯತೆಯನ್ನು ಗಳಿಸಿರುವ ಸಾಂಸ್ಕೃತಿಕ ಸಂಘಟಕ-ಸಾಹಿತಿ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನದ ಆಯ್ಕೆ ಬಯಸಿ, ಇಂದು ಗುರುವಾರದಂದು ಬೆಳಗ್ಗೆ ೧೧.೩೦ ಕ್ಕೆ ತಹಾಸೀಲ್ದಾರರೂ ಆದ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕ್ರಿಯಾಶೀಲ ಗೆಳೆಯರ ಬಳಗದ ಸದಸ್ಯರು ತಿಳಿಸಿದ್ದಾರೆ.

ಸುಮಾರು ಎರಡು ದಶಕಗಳಿಂದ ಈ ಭಾಗದಲ್ಲಿ ಸಾಹಿತ್ಯ ಲೋಕದಲ್ಲೇ ತಮ್ಮದೇ ಆದ ಛಾಪು ಮೂಡಿಸಿರುವ ತೇಗಲತಿಪ್ಪಿ ಅವರು ಮೇ ೯ ರಂದು ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಲಿದ್ದು, ಈ ಹಿನ್ನೆಲೆಯಲ್ಲಿ ಪ್ರಸ್ತುತ ಕೊರೊನಾದ ಸಂಕಷ್ಟದ ಸಂದರ್ಭದಲ್ಲಿ ಕೋರೊನಾ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಮಾಸ್ಕ್ ಧರಿಸಿ ಮತ್ತು ಸಾಮಾಜಿಕ ಅಂತರದೊಂದಿಗೆ ನಗರದ ಬಸವೇಶ್ವರ ಪುತ್ಥಳ್ಳಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿ, ನಂತರ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here