ಅಪ್ರೆಂಟಿಸ್‌ಶಿಪ್ ಆಧಾರಿತ ಪದವಿ ಕೋರ್ಸ್‌ಗಳಿಂದ ಶಿಕ್ಷಣ ಕೇತ್ರದಲ್ಲಿ ಬದಲಾವಣೆ ಸಾಧ್ಯ: ಪ್ರೊ. ಗಣೇಶ

ಕಲಬುರಗಿ: ಸ್ನಾತಕೋತ್ತರ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಕೌಶಲ್ಯ ಮತ್ತು ಅಪ್ರೆಂಟಿಸ್‌ಶಿಪ್ ಆಧಾರಿತ ಪದವಿಪೂರ್ವ ಮತ್ತು ಡಿಪ್ಲೊಮಾ ಕೋರ್ಸ್‌ಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಸಾಧ್ಯ. ಪದವಿ ಶಿಕ್ಷಣ ಮತ್ತು ಸ್ನಾತಕೋತ್ತರ ಶಿಕ್ಷಣ ಹಂತದಲ್ಲಿ ವಿದ್ಯಾರ್ಥಿಗಳಿಗೆ ಜ್ಞಾನದ ಜೊತೆಗೆ ವೃತ್ತಿ ಕೌಶಲ್ಯಗಳನ್ನು ಒದಗಿಸುತ್ತವೆ ಎಂದು ಕೌಶಲ್ಯ ಅಭಿವೃದ್ಧಿ ನಿಗಮದ ಸಚಿವಾಲಯದ ಅಧೀನದ ಲಾಜಿಸ್ಟಿಕ್ಸ್ ಸೆಕ್ಟರ್ ಸ್ಕಿಲ್ ಕೌನ್ಸಿಲ್‌ದ ಪ್ರೊ. ಎಸ್ ಗಣೇಶ ಅಭಿಪ್ರಾಯಪಟ್ಟರು.

ನಗರದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಬುಧವಾರ ಬಿಬಿಎ ಲಾಜಿಸ್ಟಿಕ್ಸ್, ಬಿಎಂಎಸ್ ಏವಿಯೇ?ನ್ ??ಸರ್ವೀಸಸ್ ಮತ್ತು ಏರ್ ಕಾರ್ಗೋ ಮತ್ತು ಪಿಜಿ ಡಿಪ್ಲೊಮಾ ಇನ್ ಡಾಟಾ ಸೈನ್ಸ್ ಫಾರ್ ಲಾಜಿಸ್ಟಿಕ್ಸ್ ಕುರಿತು ಆಯೋಜಿಸಿದ್ದ ಸಂವೇದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಕೌಶಲ್ಯ ಪರಿಚಯಿಸಲು ಶಿಕ್ಷಣ ನೀತಿ ಮತ್ತು ಎಂಎಚ್‌ಆರ್‌ಡಿ ಹೊಸ ಪ್ರಯತ್ನ ನಡೆಸಿದೆ. ಪದವಿಪೂರ್ವ ಮತ್ತು ಸ್ನಾತಕೋತ್ತರ ಶಿಕ್ಷಣ ಹಂತದಲ್ಲಿ ಅಪ್ರೆಂಟಿಸ್‌ಶಿಪ್ ಆಧಾರಿತ ಕೋರ್ಸ್‌ಗಳು ವಿದ್ಯಾರ್ಥಿಗಳಿಗೆ ಕೌಶಲ್ಯ ಮತ್ತು ವೃತ್ತಿ ಮನೋಭಾವವನ್ನು ಒದಗಿಸುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಹೊಸ ಆಸಕ್ತಿಯನ್ನು ಸೃಷ್ಟಿಸುತ್ತದೆ. ವಿದ್ಯಾರ್ಥಿಗಳಲ್ಲಿ ಜ್ಞಾನ ಹೆಚ್ಚಿಸಿ, ಉದ್ಯಮದಲ್ಲಿ ಉತ್ತಮ ಕೆಲಸ ಮಾಡುವ ಮನೋಭಾವವನ್ನು ಬಲಗೊಳಿಸುತ್ತದೆ ಎಂದರು.

ಕೋವಿಡ್ – ೧೯: ಸರಳತೆಯಿಂದ ಕೂಡಿದ ಶ್ರೀ ಶರಣಬಸವೇಶ್ವರ ಜಾತ್ರೆ

ಉನ್ನತ ಶಿಕ್ಷಣ ಮತ್ತು ಕಾಲೇಜುಗಳು ಜ್ಞಾನದ ಉತ್ಪನ್ನಗಳನ್ನು ಉತ್ಪಾದಿಸುತ್ತಿವೆ. ವಿದ್ಯಾರ್ಥಿಗಳಲ್ಲಿ ಕೌಶಲ್ಯಾಧರಿತವಾಗಿ ಕೆಲಸ ಮಾಡುವ ಮನೋಭಾವದ ಕೊರತೆಯಿದೆ. ಕೌಶಲ್ಯ ಆಧಾರಿತ ಶಿಕ್ಷಣದ ಕೊರತೆಯಿಂದಾಗಿ, ವಿದ್ಯಾರ್ಥಿಗಳಿಗೆ ಉದ್ಯಮಕ್ಕೆ ಸಿದ್ಧರಾಗಿಸುವ ಮನೋಭಾವದ ಕೊರತೆ ಕಂಡುಬರುತ್ತಿದೆ ಎಂದರು. ಸ್ನಾತಕೋತ್ತರ ಪದವಿ ಮುಗಿದ ನಂತರ ಲಾಭದಾಯಕ ಉದ್ಯೋಗವನ್ನು ಪಡೆಯುವಲ್ಲಿ ವಿದ್ಯಾರ್ಥಿಗಳಲ್ಲಿ ಕೆಲವೊಂದು ಪ್ರಮುಖ ನ್ಯೂನತೆಗಳಿವೆ. ಪ್ರಸ್ತುತ ಸರ್ಕಾರ ಪದವಿ ಮತ್ತು ಸ್ನಾತಕೋತ್ತರ ಶಿಕ್ಷಣ ಮಟ್ಟದಲ್ಲಿ ಕೌಶಲ್ಯ ಮತ್ತು ಅಪ್ರೆಂಟಿಸ್‌ಶಿಪ್ ಆಧಾರಿತ ಕೋರ್ಸ್‌ಗಳನ್ನು ಪರಿಚಯಿಸಲು ನಿರ್ಧರಿಸಿದೆ. ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳಿಂದ ಹೊರಬರುವ ಪದವೀಧರ ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಗಳು ಉದ್ಯೋಗಕ್ಕೆ ಸಿದ್ಧರನ್ನಾಗಿಸಬೇಕು ಎಂದರು.

ಮಹಿಳೆಯರಿಗಾಗಿ ಪ್ರತ್ಯೇಕವಾಗಿ ಬಿಎಂಎಸ್ ಏವಿಯೇ?ನ್ ??ಸರ್ವೀಸಸ್ ಮತ್ತು ಏರ್ ಕಾರ್ಗೋ ಕೋರ್ಸ್‌ಗಳನ್ನು ಪ್ರಪ್ರಥಮ ಬಾರಿಗೆ ಪರಿಚಯಿಸಿದ್ದು, ಈ ಸಂಸ್ಥೆಯಾಗಿದೆ. ಮಹಿಳೆಯರಿಗಾಗಿ ಪದವಿಪೂರ್ವ ಮಟ್ಟದಲ್ಲಿ ಪ್ರತ್ಯೇಕ ಕೋರ್ಸ್ ಪರಿಚಯಿಸಿದ್ದ ಶ್ರೇಯಸ್ಸು ಶರಣಬಸವ ವಿಶ್ವವಿದ್ಯಾಲಯಕ್ಕೆ ಸಲ್ಲುತ್ತದೆ ಎಂದರು. ಶರಣಬಸವ ವಿಶ್ವವಿದ್ಯಾಲಯವನ್ನು ದೇಶದ ಅನೇಕ ಶಿಕ್ಷಣ ಸಂಸ್ಥೆಗಳು ಅನುಕರಿಸಬೇಕು. ವಿಶ್ವವಿದ್ಯಾಲಯವು ಲಾಜಿಸ್ಟಿಕ್ಸ್ ಸೆಕ್ಟರ್ ಸ್ಕಿಲ್ ಕೌನ್ಸಿಲ್ ಮೂರು ಕೋರ್ಸ್‌ಗಳನ್ನು ಮಂಜೂರು ಮಾಡಿದೆ ಎಂದು ಹೇಳಿದರು.

ಕಸಾಪ ಚುನಾವಣೆ: ಇಂದು ತೇಗಲತಿಪ್ಪಿ ನಾಮಪತ್ರ

ಪ್ರೊ. ಗಣೇಶ ಮಾತನಾಡಿ, ಈ ವ? ಪ್ರಾರಂಭಿಸಿದ ಕೌಶಲ್ಯ ಮತ್ತು ಅಪ್ರೆಂಟಿಸ್‌ಶಿಪ್ ಆಧಾರಿತ ಕೋರ್ಸ್‌ಗಳಿಗೆ ಪ್ರತಿಕ್ರಿಯೆ ಅದ್ಭುತವಾಗಿದೆ. ಪ್ರಸ್ತುತ ಸುಮಾರು ೫೦ ವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಕೇಂದ್ರಗಳು ದೇಶಾದ್ಯಂತ ಈ ಕೋರ್ಸ್ ಅನ್ನು ಪರಿಚಯಿಸಿವೆ. ಹೆಚ್ಚಿನ ಸಂಖ್ಯೆಯ ಕಾಲೇಜುಗಳನ್ನು ಈ ಯೋಜನೆಯಲ್ಲಿ ಸೇರಿಸಲಾಗುವುದು ಎಂದು ಹೇಳಿದರು.

ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ್ ವಿ ನಿಷ್ಠಿ, ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಶರಣಬಸವ ವಿಶ್ವವಿದ್ಯಾಲಯವು ಹಿಂದುಳಿದ ಪ್ರದೇಶದಲ್ಲಿ ಮೂರು ಕೌಶಲ್ಯ ಮತ್ತು ಅಪ್ರೆಂಟಿಸ್‌ಶಿಪ್ ಆಧಾರಿತ ಕೋರ್ಸ್‌ಗಳನ್ನು ಪ್ರಾರಂಭಿಸುವುದು ಈ ಭಾಗದ ಜನರ ಸೌಭಾಗ್ಯವಾಗಿದೆ ಎಂದರು. ಈ ಕೋರ್ಸ್‌ಗಳು ವಿದ್ಯಾರ್ಥಿಗಳಿಗೆ ಲಾಭದಾಯಕ ಉದ್ಯೋಗವನ್ನು ಪಡೆಯುವಲ್ಲಿ ಸಹಕಾರಿಯಾಗಿವೆ. ಸರ್ಕಾರದ ಯೋಜನೆಯನ್ನು ಶ್ಲಾಘಿಸಿದ ಅವರು, ವಿದ್ಯಾರ್ಥಿಗಳಲ್ಲಿ ಸಮಯದ ಅಗತ್ಯತೆ ಹಾಗೂ ಉತ್ತಮ ವೃತ್ತಿ ಕೌಶಲ್ಯವನ್ನು ನೀಡುತ್ತದೆ ಎಂದರು.

Prof Gayathri Harish, Head-Skilling in Schools and Academia Linkages, Logistics Sector Skill Council ಕೌಶಲ್ಯ ಮತ್ತು ಅಕಾಡೆಮಿ ಲಿಂಕೇಜ್, ಲಾಜಿಸ್ಟಿಕ್ಸ್ ಸೆಕ್ಟರ್ ಸ್ಕಿಲ್ ಕೌನ್ಸಿಲ್ ಮುಖ್ಯಸ್ಥೆ ಪ್ರೊ. ಗಾಯತ್ರಿ ಹರೀಶ್ ಮಾತನಾಡಿದರು. ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ಅನೀಲಕುಮಾರ ಬಿಡವೆ ಸ್ವಾಗತಿಸಿ, ವಿಶ್ವವಿದ್ಯಾಲಯದಲ್ಲಿ ಈ ಕೋರ್ಸ್‌ಗಳನ್ನು ಪ್ರಾರಂಭಿಸಲು ವಿವಿ ಕುಲಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಮತ್ತು ವಿವಿ ಕುಲಪತಿ ಡಾ.ನಿರಂಜನ್ ವಿ. ನಿಷ್ಠಿ ಅವರು ನೀಡಿದ ಬೆಂಬಲವನ್ನು ನೆನಪಿಸಿಕೊಂಡರು. ವಿವಿ ಸಮಕುಲಪತಿ ಡಾ. ವಿ ಡಿ ಮೈತ್ರಿ, ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ್ ಶಾಸ್ತ್ರಿ, ಡೀನ್, ಡಾ. ಲಕ್ಷ್ಮಿ ಪಾಟೀಲ್ ಮಾಕಾ, ಬಿಸಿನೆಸ್ ಸ್ಟಡೀಸ್ ಡೀನ್, ಡಾ.ಎಸ್. ಎಚ್ ಹೊನ್ನಳ್ಳಿ ಇತರರು ಉಪಸ್ಥಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

11 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

12 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

12 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

12 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420