ಕಲಬುರಗಿ: ಬಂಡಾಯ ಸಾಹಿತಿ ಹೋರಾಟಗಾರ ಸಮಾಜ ಚಿಂತಕ ಡಾ. ಚನ್ನಣ್ಣ ವಾಲಿಕಾರ ಅವರ ಜನ್ಮದಿನೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧಕರಿಗೆ ’ವೋಮಾವ್ಯೋಮ’ ಪ್ರಶಸ್ತಿ ನೀಡಿ ಸತ್ಕರಿಸಬೇಕೆಂದು ಸಭೆಯಲ್ಲಿ ನಿರ್ಣಯಿಸಲಾಯಿತು.
ಹಿರಿಯರು ಎ.ಕೆ. ರಾಮೇಶ್ವರರು ಆಯ್ಕೆ ಸಮಿತಿ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಸಮಿತಿಯಲ್ಲಿ ಡಾ. ಕೆ.ಎಸ್. ಬಂಧು ಸಿದ್ದೇಶ್ವರ, ಸಿದ್ಧಮ್ಮ ವಾಲೀಕಾರ, ಬಸವರಾಜ ಸುಣಗಾರ, ಅಯ್ಯಣ್ಣ ವಾಲೀಕಾರ, ಅರವಿಂದಕುಮಾರ ವಾಲೀಕಾರ, ಮನೋಹರ ಮರಗುತ್ತಿ ಅವರು ಪಾಲ್ಗೊಂಡಿದ್ದರು.
ಈ ಸಮಿತಿಯಲ್ಲಿ ಜನಪದ ತಜ್ಞರೆಂದು ಡಾ. ಸ್ವಾಮಿರಾವ ಕುಲಕರ್ಣಿ ಅವರನ್ನು ಡಾ. ಸರಸ್ವತಿ ಚಿಮ್ಮಲಗಿ ಅವರನ್ನು ಹೋರಾಟಗಾರ್ತಿ ಎಂದು ಡಾ. ಟಿ.ವಿ. ಶಿವಾನಂದ ಪತ್ರಕರ್ತರೆಂದು ಮತ್ತು ಡಾ. ಎಚ್.ಟಿ. ಪೋತೆ ಅವರನ್ನು ಸಮಗ್ರ ಸಾಹಿತ್ಯವನ್ನು ಪರಿಗಣಿಸಿ ಪ್ರಶಸ್ತಿ ನೀಡಲು ನಿರ್ಧರಿಸಲಾಯಿತು. ಅದರಂತೆ, ಜಾನಪದ ಗಾಯಕ ರೆಂದು ಶಂಭುಲಿಂಗ ವಾಲದೊಡ್ಡಿಯವರನ್ನು ರಾಜ್ಯಮಟ್ಟದ ’ವೋಮಾವ್ಯೋಮ’ ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆಮಾಡಲಾಯಿತು.
ಈ ’ವೋಮಾವ್ಯೋಮ’ ಪ್ರಶಸ್ತಿಯನ್ನು ಡಾ. ಚನ್ನಣ್ಣ ವಾಲೀಕರ ಅವರ ಜನ್ಮದಿನೋತ್ಸದ ಅಂಗವಾಗಿ ಏಪ್ರಿಲ್ ೬ ರಂದು ಜರುಗುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದೆಂದು ಮಕ್ಕಳ ಸಾಹಿತಿಗಳಾದ ಎ.ಕೆ. ರಾಮೇಶ್ವರ, ಸಿದ್ದಮ್ಮ ವಾಲೀಕಾರ, ಡಾ. ಕೆ.ಎಸ್.ಬಂಧು ಸಿದ್ದೇಶ್ವರ ಅವರು ಜಂಟಿಯಾಗಿ ಪ್ರತಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…