ಕೋವಿಡ್ ವ್ಯಾಕ್ಸಿನ್ ಸುರಕ್ಷಿತ, ನಿರ್ಭಯದಿಂದ ಹಾಕಿಸಿಕೊಳ್ಳಿ: ಆರ್.ಜೆ. ಸತೀಶ್ ಸಿಂಗ್

0
42

ಕಲಬುರಗಿ: ಸ್ವದೇಶಿ ನಿರ್ಮಿತ ಕೋವಿಡ್ ವ್ಯಾಕ್ಸಿನ್ ಸುರಕ್ಷತೆಯಿಂದ ಕೂಡಿದ್ದು, ಅರ್ಹರೆಲ್ಲರು ನಿರ್ಭಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಕಲಬುರಗಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಆರ್.ಜೆ ಸತೀಶ್ ಸಿಂಗ್ ಅವರು ಮನವಿ ಮಾಡಿಕೊಂಡರು.

ಶುಕ್ರವಾರ ನಗರದ ಸೇಡಂ ರಸ್ತೆಯಲ್ಲಿರುವ ಇ.ಎಸ್.ಐ.ಸಿ. ಆಸ್ಪತ್ರೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಜಿಲ್ಲಾ ಅರೋಗ್ಯ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಡೆದ ಕೋವಿಡ್-19 ಜಾಗೃತಿ ಹಾಗೂ ಲಸಿಕಾ ಕಾರ್ಯಕ್ರಮದಲ್ಲಿ ಕೋವಿಡ್ ಲಸಿಕೆ ಪಡೆದು ಅವರು ಮಾತನಾಡಿದರು.

Contact Your\'s Advertisement; 9902492681

ಸಚಿವ ಶ್ರೀಮಂತ ಪಾಟೀಲ್ ಜೊತೆ ಶಾಸಕ ಖರ್ಗೆ ಚರ್ಚೆ

ಇಂದು ನಾನು ಕೋವಿಡ್ ಲಸಿಕೆ ಪಡೆದಿದ್ದು, ಉತ್ತಮ ಅನುಭವ ಹೊಂದಿದ್ದೇನೆ. ಯಾವುದೇ ಅಡ್ಡ ಪರಿಣಾಮವಿಲ್ಲ. ಜಿಲ್ಲಾ ನ್ಯಾಯಾಲಯದ ಎಲ್ಲಾ ನ್ಯಾಯಾದೀಶರು ಇಂದು ಲಸಿಕೆ ಪಡೆಯುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ. ಜಿಲ್ಲೆಯ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್ ಲಸಿಕೆ ಪಡೆದುಕೊಂಡು ಕೋವಿಡ್ ಸೋಲಿಸಲು ಪಣ ತೊಡೋಣ ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಆರ್. ಶೆಟ್ಟರ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಶೇಖರ ಮಾಲಿ ಹಾಗೂ ಜಿಲ್ಲಾ ನ್ಯಾಯಾಲಯಗಳ ವಿವಿಧ ಶ್ರೇಣಿಯ ನ್ಯಾಯಾಧೀಶರು ಮತ್ತಿತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here