ಬಿಸಿ ಬಿಸಿ ಸುದ್ದಿ

ಸಚಿವ ಪ್ರಭು ಚವ್ಹಾಣ್ ವಿರುದ್ಧ ಕ್ರಮಕೈ ಆಗ್ರಹ

ಶಹಾಬಾದ: ಕ್ಷೌರಿಕ ಸಮಾಜದವರ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ ಸಚಿವ ಪ್ರಭು ಚವ್ಹಾಣ್ ವಿರುದ್ಧ ಕ್ರಮಕೈಗೊಳ್ಳಬೇಕು.ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಶನಿವಾರ ನಗರದ ಸವಿತಾ ಸಮಾಜ ಸಂಘದಿಂದ ಉಪತಹಸೀಲ್ದಾರ ಮಲ್ಲಿಕಾರ್ಜುನ ರೆಡ್ಡಿ ಮುಖಾಂತರ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಪತ್ರ ಸಲ್ಲಿಸಿದರು.

ನಂತರ ಮಾತನಾಡಿದ ಪ್ರತಿಭಟನಾಕಾರರು, ಬಸವ ಕಲ್ಯಾಣ ಉಪಚುನಾವಣೆ ಪ್ರಚಾರ ಸಭೆಯಲ್ಲಿ ಪಶು ಸಂಗೋಪನೆ ಸಚಿವ ಮತ್ತು ಔರಾದ ಕ್ಷೇತ್ರದ ಶಾಸಕ ಪ್ರಭು ಚವ್ಹಾಣ ಅವರು ಕ್ಷೌರ ವೃತ್ತಿಯ ಬಗ್ಗೆ ಆಡಿದರೆನ್ನಲಾದ ಅವಹೇಳನಕಾರಿ ಪದಪ್ರಯೋಗಕ್ಕೆ ಕ್ಷಮೆ ಯಾಚಿಸಬೇಕು. ಸಚಿವರು ಕ್ಷಮೆ ಕೇಳುವವರೆಗೂ ಪ್ರತಿಭಟನೆಯೂ ನಿಲ್ಲುವುದಿಲ್ಲ.

ನಳೀನ್ ಕುಮಾರ ಕಟೀಲ್ ಹೇಳಿಕೆಗೆ ಆಕ್ರೋಶ

ಒಂದು ಸಮಾಜದ ಬಗ್ಗೆ ಈ ರೀತಿ ಇಲ್ಲಸಲ್ಲದ ಮಾತುಗಳನ್ನಾಡುವುದು ಶೋಭೆ ತರುವುದಿಲ್ಲ. ಇಂತ ವ್ಯಕ್ತಿಗೆ ಒಂದು ಸಚಿವಗಿರಿ ಕೊಟ್ಟಿರುವುದು ಕಳಂಕ.ಬಾಯಿಗೆ ಬಂದಂತೆ ಮಾತನಾಡುವುದು ನೋಡಿದರೇ ಮಾನಸಿಕ ಸ್ಥಿತಿ ಕಳೆದುಕೊಂಡಿದ್ದಾರೆ ಎಂದು ಎನಿಸುತ್ತದೆ.ಅವರನ್ನು ಕೂಡಲೇ ಹೆಚ್ಚಿನ ಚಿಕಿತ್ಸೆ ಕೊಡಿಸಿ.ಇಲ್ಲದಿದ್ದರೇ ಮತ್ತೇನು ಅನಾಹುತ ಮಾಡುತ್ತಾರೆ ಗೊತ್ತಿಲ್ಲ. ಮಾನ್ಯ ಮುಖ್ಯಮಂತ್ರಿಗಳು ಪ್ರಭು ಚವ್ಹಾಣ ಅವರ ಸಚಿವ ಸ್ಥಾನವನ್ನು ವಜಾಗೊಳಿಸಬೇಕು. ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವವರೆಗೂ ರಾಜ್ಯಾದ್ಯಂತ ಉಗ್ರ ಪತ್ರಿಭಟನೆ ನಡೆಸಲಾಗುವದು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಸವಿತಾ ಸಮಾಜ ಶಹಬಾದ ತಾಲೂಕ ಅಧ್ಯಕ್ಷ ದಶರಥ.ಎಸ್. ಕೋಟನೂರ, ಪ್ರಧಾನ ಕಾರ್ಯದರ್ಶಿ ವೀರಭದ್ರಪ್ಪಾ ಮೊರೆ, ಉಪಾಧ್ಯಕ್ಷ ನರಸಪ್ಪ ಸತನೂರ, ಖಜಾಂಚಿ ಕಂಟಪ್ಪ.ಬಿ.ಕೋಟನೂರ., ಮಲ್ಲು ಅಲ್ಲಿಪುರ್, ಶಿವು ಗೋರಕುಂಡಾ, ರವಿ ಹುಲಗೊಳ್, ಮುಖಂಡರಾದ ಸಂತೋ?.ಎಸ್.ಕೊಟನೂರ, ರವಿ ಸತನೂರ, ಅಂಜು ಗುರುಜಲ್ ಇತರರು ಇದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

56 mins ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

1 hour ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

2 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

2 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

3 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

3 hours ago