ಬಿಸಿ ಬಿಸಿ ಸುದ್ದಿ

ಸ್ವಉದ್ಯೋಗದಿಂದ ಸ್ವಾವಲಂಬನೆ ಜೀವನ: ಶಾಸಕ ಸುಭಾಷ್ ಆರ್ ಗುತ್ತೇದಾರ

ಆಳಂದ: ಕೌಶಲ್ಯ ಆಧಾರಿತ ತರಬೇತಿ ಪಡೆದು ಸ್ವಉದ್ಯೋಗ ಪ್ರಾರಂಭಿಸಿ ವ್ಯವಹಾರ ನಡೆಸಿದರೆ ಸ್ವಾವಲಂಬನೆಯ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಅಭಿಪ್ರಾಯಪಟ್ಟರು.

ಇತ್ತೀಚಿಗೆ ಆಳಂದ ಪಟ್ಟಣದ ಆರ್ಯ ಸಮಾಜದಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಸ್ವಯಂ ಉದ್ಯೋಗ ಯೋಜನೆಯ ಅಡಿಯಲ್ಲಿ ಹಮ್ಮಿಕೊಂಡಿದ್ದ ಮಹಿಳೆಯರಿಗಾಗಿ ಒಂದು ದಿನದ ಹೊಲಿಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕ ಪ್ರದೇಶಕ್ಕಾಗಿ ವಿಶೇಷ ಪ್ರಕರಣವೆಂದು ಭಾವಿಸಿ ಸಂಘ ಸ್ಥಾಪಿಸಿ ಅದಕ್ಕೆ ೫೦೦ ಕೋಟಿ ರೂ. ಅನುದಾನ ನೀಡಿದೆ ಈ ಸಂಘವು ಬಸವರಾಜ ಪಾಟೀಲ ಸೇಡಂ ಅವರ ಮಾರ್ಗದರ್ಶನದಲ್ಲಿ ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಸಂಘದ ಲಾಭವನ್ನು ಈ ಭಾಗದ ಜನತೆ ಪಡೆದುಕೊಳ್ಳಬೇಕು ಎಂದು ಹೇಳಿದರು.

ಅಜಿತ್ ಹೆಗಡೆಗೆ ಯುವ ಮೋರ್ಚಾ ಉಪಾಧ್ಯಕ್ಷ ಶಿವ ಅಷ್ಠಗಿ ಸನ್ಮಾನ

ಮಹಿಳೆಯರ ಸಬಲೀಕರಣಕ್ಕಾಗಿ ವಿವಿಧ ಯೋಜನೆಗಳು ಅನುಷ್ಠಾನಗೊಳ್ಳುತ್ತಿವೆ ಇದರಡಿಯಲ್ಲಿ ನೆರವು ಪಡೆದು ಮಹಿಳೆಯರು ಮುಂದೆ ಬರಲು ಪ್ರಯತ್ನಿಸಬೇಕು. ಸ್ತ್ರೀಯರಿಗೆ ಇಂದು ಎಲ್ಲ ರಂಗದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ನುಡಿದರು.

ಈ ಸಮಾರಂಭದಲ್ಲಿ ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ, ಮಂಜುಳಾ ಡೊಳ್ಳೆ, ಸಂತೋಷ ಪಾಟೀಲ ಮಾತನಾಡಿದರು. ಮುಖಂಡ ಮಲ್ಲಣ್ಣ ನಾಗೂರೆ, ಸುಜ್ಞಾನಿ ಪೊದ್ದಾರ, ರಾಜಶೇಖರ ಸಾಹು, ಮಂದಾಕಿನಿ ಧುತ್ತರಗಾಂವ, ನಾಗರಾಜ ಕಾಬಡೆ, ಶ್ರೀಧರ ದೊಡಮನಿ, ರೀಟಾ ಕಲಬುರಗಿ, ಶ್ವೇತಾ, ಗಾಯತ್ರಿ, ಬಸವರಾಜ ಇದ್ದರು.

ಮಲ್ಲಿನಾಥ ಬಿರಾದಾರ ಸ್ವಾಗತಿಸಿದರೆ, ತಿಪ್ಪೇರುದ್ರ ಸ್ವಾಮಿ ವಂದಿಸಿದರು. ಪ್ರಕಾಶ ಗಾಯಕವಾಡ್ ನಿರೂಪಿಸಿದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

1 hour ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

2 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

2 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

3 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

3 hours ago