ಬಿಸಿ ಬಿಸಿ ಸುದ್ದಿ

ಸುರಪುರ ತಾಲೂಕಿನಾದ್ಯಂತ ಸರಳವಾಗಿ ಡಾ: ಬಾಬು ಜಗಜೀವನರಾಮ್ ಜಯಂತಿ ಆಚರಣೆ

ಸುರಪುರ: ತಾಲೂಕಿನಾದ್ಯಂತ ಅನೇಕ ಕಡೆಗಳಲ್ಲಿ ಮಾಜಿ ಉಪ ಪ್ರಧಾನಿ ಡಾ:ಬಾಬು ಜಗಜೀವನರಾಮ್ ಅವರ ೧೧೪ನೇ ಜಯಂತಿಯನ್ನು ಆಚರಿಸಲಾಯಿತು.

ನಗರದ ತಹಸೀಲ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಯಂತಿ ಕಾರ್ಯಕ್ರಮದಲ್ಲಿ ತಹಸೀಲ್ದಾರ ಸುಬ್ಬಣ್ಣ ಜಮಖಂಡಿ ಡಾ: ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ನಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿ,ದೇಶ ಕಂಡ ಮಹಾನ್ ಧೀಮಂತ ರಾಜಕಾರಣಿ ಎಂದರೆ ಡಾ:ಬಾಬು ಜಗಜೀವನರಾಮ್ ಅವರಾಗಿದ್ದಾರೆ.ದೇಶದಲ್ಲಿನ ದೀನ ದಲಿತರ ಶೋಷಿತರ ಏಳಿಗೆಗೆ ಅನೇಕ ಕೊಡುಗೆಳನ್ನು ನೀಡಿದ ಪುಣ್ಯಪುರುಷರಾಗಿದ್ದಾರೆ.ಅಲ್ಲದೆ ಅವರು ಕೃಷಿಗೆ ಹೆಚ್ಚಿನ ಒತ್ತು ನೀಡಿ ನೀರಾವರಿಯ ಕೊಡುಗೆಯನ್ನು ನೀಡಿದ್ದಾರೆ.ಇಂತಹ ಮಹಾನ್ ಪುರುಷನ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಬೇಕಿತ್ತು,ಆದರೆ ಕೊರೊನಾ ಕಾರಣದಿಂದ ಸರಳವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣಾಧಿಕಾರಿ ಸತ್ಯನಾರಾಯಣ ದರಬಾರಿ ಕಂದಾಯ ನಿರೀಕ್ಷಕ ಗುರುಬಸಪ್ಪ ಸಿರಸ್ತೆದಾರ ಕೊಂಡಲ ನಾಯಕ ನ್ಯಾಯವಾದಿ ಯಲ್ಲಪ್ಪ ಹುಲಿಕಲ್ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹಣಮಂತ ಕಟ್ಟಿಮನಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ದುರ್ಗಪ್ಪ ಬಡಿಗೇರ ಸಂಜೀವಪ್ಪ ಕಟ್ಟಿಮನಿ ಬಿಜೆಪಿ ಮುಖಂಡ ನಾಗರಾಜ ಓಕಳಿ ದಾನಪ್ಪ ಲಕ್ಷ್ಮೀಪುರ ಬಸವರಾಜ ಮುಷ್ಠಳ್ಳಿ ನಾಗರಾಜ ವಡಿಗೇರಿ ಸೇರಿದಂತೆ ಅನೇಕರಿದ್ದರು.

ನಗರದ ಪೊಲೀಸ್ ಠಾಣೆ,ನಗರಸಭೆ ಕಾರ್ಯಾಲಯ,ಸಮಾಜ ಕಲ್ಯಾಣ ಇಲಾಖೆ ಕಚೇರಿ ಹಾಗು ಕುಂಬಾರಪೇಟೆ ಪಾಳದಕೇರಿ ದೀವಳಗುಡ್ಡ ಜಾಂಬವ ನಗರ ಕವಡಿಮಟ್ಟಿ ತಿಂಥಣಿ ಮುಷ್ಠಳ್ಳಿ ಬಾಚಿಮಟ್ಟಿ ಪೇಠ ಅಮ್ಮಾಪುರ ಸೇರಿದಂತೆ ಅನೇಕ ಕಡೆಗಳಲ್ಲಿ ಡಾ:ಬಾಬು ಜಗಜೀವನರಾಮ್ ಅವರ ೧೧೪ನೇ ಜಯಂತಿ ಆಚರಿಸಲಾಯಿತು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

5 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

5 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

5 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

5 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

5 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

5 hours ago