ಬಿಸಿ ಬಿಸಿ ಸುದ್ದಿ

ಸರ್ವರ್ ಸಮಸ್ಯೆ ನಿವಾರಿಸಲು ಭ್ರಷ್ಟಾಚಾರ ವಿರೋಧಿ ಸಂಸ್ಥೆ ಮನವಿ

ಸುರಪುರ: ನಗರದ ತಹಸೀಲ್ ಕಚೇರಿಯಲ್ಲಿನ ಸರ್ವರ್ ಸಮಸ್ಯೆಯಿಂದಾಗಿ ತಾಲೂಕಿನ ಜನರು ಕಚೇರಿಗೆ ಅಲೆಯುವ ಮೂಲಕ ಬೇಷತ್ತಿದ್ದಾರೆ ಎಂದು ಮಾನವ ಹಕ್ಕುಗಳು ಹಾಗು ಭ್ರಷ್ಟಾಚಾರ ವಿರೋಧಿ ಸಂಸ್ಥೆ ದೆಹಲಿ ಸಂಘಟನೆಯ ತಾಲೂಕು ಅಧ್ಯಕ್ಷ ದಾವೂದ್ ಇಬ್ರಾಹಿಂ ಪಠಾಣ ಬೇಸರ ವ್ಯಕ್ತಪಡಿಸಿದರು.

ತಹಸೀಲ್ ಕಚೇರಿಯಲ್ಲಿನ ಸರ್ವರ್ ಸಮಸ್ಯೆಯನ್ನು ನಿವಾರಿಸುವಂತೆ ಆಗ್ರಹಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು,ತಾಲೂಕಿನ ಗ್ರಾಮೀಣ ಪ್ರದೇಶದ ಜನರು ಒಂದು ದಿನದ ಕೆಲಸ ಬಿಟ್ಟು ಹಣ ಖರ್ಚು ಮಾಡಿ ವಿವಿಧ ಯೋಜನೆಗಳಾದ ಸಂಧ್ಯಾ ಸುರಕ್ಷಾ ವಿಧವಾ ವೇತನ ವೃಧ್ಯಾಪ ವೇತನ ಆಧಾರ ಕಾರ್ಡ್ ಪಹಣಿ ಆದಾಯ ಜಾತಿ ಪ್ರಮಾಣ ಪತ್ರ ಹೀಗೆ ಅನೇಕ ಪ್ರಮಾಣ ಪತ್ರಗಳನ್ನು ಪಡೆಯಲು ಆಗಮಿಸುತ್ತಾರೆ.

ಸುರಪುರ ತಾಲೂಕಿನಾದ್ಯಂತ ಸರಳವಾಗಿ ಡಾ: ಬಾಬು ಜಗಜೀವನರಾಮ್ ಜಯಂತಿ ಆಚರಣೆ

ಆದರೆ ಇಲ್ಲಿ ಸರ್ವರ್ ಇಲ್ಲ ಎನ್ನುವುದರಿಂದ ಅವರು ತುಂಬಾ ಬೇಸರಗೊಂಡು ಒಂದು ದಿನದ ಕೆಲಸ ಖರ್ಚಾದ ಹಣ ಮತ್ತೆ ಬರುವುದು ಎಲ್ಲದರಿಂದ ಜನರು ರೋಸಿ ಹೋಗುತ್ತಾರೆ.ಸದಾಕಾಲ ಸರ್ವರ್ ಸಮಸ್ಯೆ ಎನ್ನುವ ಸಿದ್ಧ ಉತ್ತರದಿಂದ ಜನತೆ ಹೋರಾಟಕ್ಕೆ ಮುಂದಾಗುವ ಹಾದಿ ಹಿಡಿದಿದ್ದಾರೆ.ಆದ್ದರಿಂದ ಕೂಡಲೇ ಸರ್ವರ್ ಸಮಸ್ಯೆಯನ್ನು ನಿವಾರಿಸಬೇಕು ಇಲ್ಲವಾದಲ್ಲಿ ನಮ್ಮ ಸಂಘಟನೆಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಒತ್ತಾಯಿಸಿದರು.

ನಂತರ ತಹಸೀಲ್ದಾರ ಸುಬ್ಬಣ್ಣ ಜಮಖಂಡಿಯವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕೆ.ಎಮ್.ಸಿ ತಾಲೂಕು ಅಧ್ಯಕ್ಷ ಖಾಜಾ ಅಜ್ಮೀರ್ ಖುರೇಶಿ ಟಿಪ್ಪು ಸುಲ್ತಾನ ಸಂಯುಕ್ತ ರಂಗದ ಜಿಲ್ಲಾಧ್ಯಕ್ಷ ಮಹ್ಮದ ಮೌಲಾ ಸೌದಾಗರ್ ಅಂಬೇಡ್ಕರ್ ಸೇನೆ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ರಮೀಜ್ ರಾಜಾ ಸಗರನಾಡು ಎಲೆಕ್ಟ್ರೀಕಲ್ ಕಾರ್ಮಿಕರ ಸಂಘದ ಅಧ್ಯಕ್ಷ ಅಬ್ದುಲ್ ರೌಫ್ ಕೆ.ಎಮ್.ವಾಯ್.ಸಿ ರಾಜ್ಯ ಉಪಾಧ್ಯಕ್ಷ ಅಬೀದ್ ಹುಸೇನ ಪಗಡಿ ಮಹಿಬೂ ಪಟೇಲ್ ಫಸಲ್ ಉರ್ ರಹಮಾನ್ ನಾಸಿ ವಸೀಂ ರಂಗಂಪೇಟ ಅಮ್ಜಾದ್ ಬೇಗ್ ಪಾಶಾ ಕರಾಟೆ ಇಮ್ರಾನ್ ಬೇಗ್ ಸೇರಿದಂತೆ ಅನೇಕರಿದ್ದರು.

emedialine

Recent Posts

ನಾಡೋಜ ಪಾಟೀಲ್ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರದಾನ: ಜುಲೈ 7ರಂದು

ಬೆಂಗಳೂರು: ಜಗತ್ತಿನ ಪ್ರಚಲಿತ ವಿದ್ಯಮಾನಗಳ ಮಾಹಿತಿ ನೀಡುವ ಪತ್ರಕರ್ತರು ಹಗಲುರಾತ್ರಿ ಎನ್ನದೇ ಕಷ್ಟವಾದರೂ ಇಷ್ಟಪಟ್ಟು ವರದಿ ಮಾಡುವ ಮಾಧ್ಯಮ ಮಿತ್ರರಿಗೆ,…

10 mins ago

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

11 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

11 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

11 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

11 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

12 hours ago