ಶಹಾಬಾದ: ಹಿರಿಯರ ತ್ಯಾಗ,ಬಲಿದಾನದಿಂದ ೧೯೮೦ರಲ್ಲಿ ಉದಯವಾದ ಭಾರತೀಯ ಜನತಾ ಪಾರ್ಟಿ ಇಂದು ದೇಶದಲ್ಲಿಯೇ ದೊಡ್ಡ ಪಕ್ಷವಾಗಲು ಕಾರ್ಯಕರ್ತರ ಪರಿಶ್ರಮ ಅಪಾರವಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ವಾಡಿ-ಶಹಾಬಾದ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ್ ಅವರು ಮಂಗಳವಾರ ನಗರದ ಬಿಜೆಪಿ ಕಛೇರಿಯಲ್ಲಿ ಆಯೋಜಿಸಲಾದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಬಿಜೆಪಿಯು ಎಲ್ಲ ವರ್ಗದವರ ಹಿತ ರಕ್ಷಣೆಗೆ ಬದ್ಧವಿದೆ.ಬಡವರು,ಕಾರ್ಮಿಕರು,ರೈತರು ಹಾಗೂ ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಕಟಿಬದ್ಧವಿದೆ. ಈ ದಿಸೆಯಲ್ಲಿ ದೇಶದ ಅಧಿಕಾರ ಚುಕ್ಕಾಣಿ ಹಿಡಿದ ನರೇಂದ್ರ ಮೋದಿ ಅವರು ಸವಾಂಗೀಣ ವಿಕಾಸಕ್ಕಾಗಿ ಶ್ರಮಿಸುತ್ತಿದ್ದಾರೆ. ಇಡೀ ವಿಶ್ವವೇ ಭಾರತದತ್ತ ಕಾತುರದಿಂದ ನೋಡುತ್ತಿದೆ.ಇದಕ್ಕೆ ಮೋದಿಯವರ ಸಮರ್ಥ ಆಡಳಿತ ಹಾಗೂ ದೂರದೃಷ್ಠಿಯ ನಾಯಕತ್ವವೇ ಕಾರಣವೆಂದು ಹೇಳಿದರು.
ಬಿಜೆಪಿ ಸಂಸ್ಥಾಪನಾ ದಿನದ ಅಂಗವಾಗಿ ಮನೆ ಮೇಲೆ ಧ್ವಜಾರೋಹಣ
ಬಿಜೆಪಿ ಮುಖಂಡ ಬಸವರಾಜ ಬಿರಾದಾರ ಮಾತನಾಡಿ, ೧೯೭೭ರಲ್ಲಿ ಮುರಾರ್ಜಿ ದೇಸಾಯಿ ಸರ್ಕಾರ ಪತನವಾದ ನಂತರ ೧೯೮೦ರಲ್ಲಿ ದೀನ್ ದಯಾಳ ಉಪಧ್ಯಾಯ ಹಾಗೂ ಅಟಲ್ ಬಿಹಾರಿ ವಾಜಪೇಯಿ ಅವರ ಶ್ರಮದ ಫಲವಾಗಿ ಭಾರತೀಯ ಪಕ್ಷ ಉದಯವಾಯಿತೆಂದು ಹೇಳಿದರು.
ಬಿಜೆಪಿ ಉಪಾಧ್ಯಕ್ಷರಾದ ಮಹದೇವ ಗೊಬ್ಬೂರಕರ, ಪ್ರಧಾನ ಕಾರ್ಯದರ್ಶಿ ಸದಾನಂದ ಕುಂಬಾರ, ಕಾರ್ಯದರ್ಶಿ ಶಂಕರ ಭಗಾಡೆ, ಕೋಶಾಧ್ಷರಾದ ಅಣ್ಣಪ್ಪ ದಸ್ತಾಪುರ, ಪ್ರಮುಖರಾದ ಸುಭಾ? ಜಾಪೂರ, ಸಂಜಯ ಕೋರೆ, ವೀರೆಶ ಬಂದಳ್ಳಿ, ನಗರಸಭೆ ಸದಸ್ಯರಾದ ಜಗದೇವ ಸುಬೆದಾರ, ರಾಮು ಕುಸಾಳೆ, ಯಲ್ಲಪ್ಪ ದಂಡಗುಲಕರ, ದತ್ತು ಘಂಟೆ, ಯುವಮೊರ್ಚಾದ ದೀನೆಶ ಗೌಳಿ, ಶ್ರೀನೀವಾಸ ನೆದಲಗಿ, ಶರಣು ಕೌಲಗಿ, ಸತೀಶ ರಾಪನೂರ, ಸಚಿನ ಹಂಚಾಟೆ, ಭೀಮಯ್ಯ ಗುತ್ತೆದಾರ ಇತರರು ಇದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…