ಬಿಸಿ ಬಿಸಿ ಸುದ್ದಿ

ಬಿಜೆಪಿ ನೇಕಾರ ಪ್ರಕೋಷ್ಠದ ಕಚೇರಿಯಲ್ಲಿ ಪಕ್ಷದ ಸಂಸ್ಥಾಪನ ದಿನಾಚರಣೆ

ಕಲಬುರಗಿ: ಇಂದು, ಮದ್ಯಾಹ್ನ ಬಿಜೆಪಿ ನೇಕಾರ ಪ್ರಕೋಷ್ಠದ ಕಚೇರಿಯಲ್ಲಿ ನೇಕಾರರು ಸಭೆ ಸೇರಿ ಬಿಜೆಪಿ ಸಂಸ್ಥಾಪನ ದಿನ ಆಚರಿಸಲಾಯಿತು.

ಗ್ರಾಮೀಣ ಜಿಲ್ಲಾ ನೇಕಾರ ಪ್ರಕೋಷ್ಠ ದ ಸಂಚಾಲಕ ಗುರುನಾಥ ಸೊನ್ನದ ರವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿಜೆಪಿ ಪಕ್ಷದಲ್ಲಿ ಮಾತ್ರ ಎಲ್ಲಾ ಸಮುದಾಯಕ್ಕೆ ನ್ಯಾಯ ಸಿಗುತ್ತದೆ ಎಂದು ತಿಳಿಸಿದರು.

ಪಕ್ಶದಲ್ಲಿ 3 ದಶಕ ದಿಂದ ನಿಷ್ಠೆಯಿಂದ ಸೇವೆ ಸಲ್ಲಿಸಿದ ನೇಕಾರ ಸಮುದಾಯ ನಾರಾಯಣ ರವರನ್ನು ರಾಜ್ಯಸಭೆಗೆ ನೇರವಾಗಿ ಆಯ್ಕೆ ಗೊಳಿಸಿದ್ದು, ರಾಜ್ಯದಲ್ಲಿ ಸಹ ಆದ್ಯತೆ ನೀಡಲು ಸಂಘಟಿತರಾಗಿ ಮನವಿ ಮಾಡೋಣ ಎಂದು ಕರೆ ನೀಡಿದರು.

ಕಲಬುರಗಿಯಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಮುಂಬರುವ ಮಹಾನಗರ ಪಾಲಿಕೆಯಲ್ಲಿ ಕನಿಷ್ಠ 3 ನೇಕಾರ ಅಭ್ಯರ್ಥಿಗಳನ್ನು ಕಣದಲ್ಲಿ ನಿಲ್ಲಿಸಿ, ಪಕ್ಷದ ಮಾನ ಮುಚ್ಚುವ ಕೆಲಸ ಮಾಡಲು ಸಿದ್ದರಾಗಿ ಎಂದು ಸಭೆಯಲ್ಲಿ ರೇವಣಸಿದ್ದಪ್ಪ ಗಡ್ಡದ ಅವರು ಕರೆ ನೀಡಿದರು.

ನೂತನವಾಗಿ ಆಯ್ಕೆಯಾದ ಕಲಬುರಗಿ ಮಹಾನಗರದ ಬಿಜೆಪಿಯ ನೇಕಾರ ಪ್ರಕೋಷ್ಠದ ನಗರ ಜಿಲ್ಲಾ ಸಂಚಾಲಕ ಶಿವಲಿಂಗಪ್ಪಾ ಅಷ್ಟಗಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಹ-ಸಂಚಾಲಕ ಜೇನವೆರಿ ವಿನೋದ ಕುಮಾರ ಕಾರ್ಯಕ್ರಮ ನಿರೂಪಿಸಿದರು. ಸತೀಶ್ ಜಮಖಂಡಿ ವಂದಿಸಿದರು. ಸಮುದಾಯದ ಹಿರಿಯರು, ಯುವಕರು ಹಾಗೂ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

2 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

2 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

2 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

3 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

3 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

3 hours ago