ವಾಡಿಯಲ್ಲಿ 41 ನೇ ಬಿಜೆಪಿ ಸಂಸ್ಥಾಪನ ದಿನಾಚರಣೆ

0
77

ಚಿತ್ತಾಪುರ: ತಾಲ್ಲೂಕಿನ ವಾಡಿ ಪಟ್ಟಣದ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ  ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನ ದಿನಾಚರಣೆ ಆಚರಣೆ ಮಾಡಲಾಯಿತು.

ಈ ಸಂಸ್ಥಾಪನೆ ದಿನಾಚರಣೆಯ  ಅಂಗವಾಗಿ ಕೆಲವು ದಿನಗಳ ಹಿಂದೆ ಹೃದಯಘಾತದಿಂದ ನಿಧನರಾದ ಬಿಜೆಪಿ ಮಾಜಿ ಶಾಸಕ ದಿವಂಗತ ವಾಲ್ಮೀಕಿ ನಾಯಕ್ ಅವರ ಮನೆಯ ಮೇಲೆ ಪಕ್ಷದ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಲಾಯಿತು.

Contact Your\'s Advertisement; 9902492681

ಈ ಸಂದರ್ಭದಲ್ಲಿ ವಾಡಿ ಬಿಜೆಪಿ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ವೀರಣ್ಣ ಯಾರಿ ಮಾತನಾಡಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಜಕೀಯ ಅಂಗವಾಗಿ ಸ್ಥಾಪಿತವಾಗಿದ್ದ ಡಾ.ಶ್ಯಾಮಪ್ರಸಾದ್ ಮುಖರ್ಜಿ ಸ್ಥಾಪಿತ ಭಾರತೀಯ ಜನ ಸಂಘ 1980ರಲ್ಲಿ ಭಾರತೀಯ ಜನತಾ ಪಕ್ಷವಾಗಿ ಮರು ನಾಮಕರಣಗೊಂಡು ಇಂದಿಗೆ 41 ವರ್ಷ ಪೂರೈಸಿದೆ ಎಂದರು.

ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗಿಶ್ವರಗೆ ಶಾಸಕ ಬಸವರಾಜ ಮತ್ತಿಮಡು ಸನ್ಮಾನ

ಹಿಂದುತ್ವ, ರಾಷ್ಟ್ರೀಯತೆ, ರಾಷ್ಟ್ರೀಯ ಸುರಕ್ಷತೆ, ಏಕಾತ್ಮ ಮಾನವತಾವಾದ ಹಾಗೂ  ಬಲಪಂಥೀಯ ಮೌಲ್ಯಗಳನ್ನು ಪ್ರತಿಪಾದಿಸುವ ಪಕ್ಷವಾಗಿ ರೂಪಗೊಂಡು. ಹಿಂದುತ್ವ ಎಂಬುದು ಒಂದು ಮತವನ್ನು ಪ್ರತಿನಿಧಿಸುವುದಿಲ್ಲ, ಬದಲಾಗಿ ರಾಷ್ಟ್ರೀಯತೆಯ ಪ್ರತೀಕ ಎಂಬ ಸಿದ್ದಾಂತ  ಎಂಬುದನ್ನು ಸಾರಿ ಇಂದು ವಿಶ್ವದಲ್ಲೇ ಅತೀ ದೊಡ್ಡ ಪಕ್ಷ ವಾಗಿದ್ದು ನಮ್ಮೆಲ್ಲರಿಗೆ  ಹೆಮ್ಮೆಯ ವಿಷಯ, ನಮ್ಮಂತಹ  ಪ್ರತಿಯೊಬ್ಬ ಕಾರ್ಯಕರ್ತರ ಶ್ರಮದ ಫಲ ಎಂದರು.

ಈ ಸಂದರ್ಭದಲ್ಲಿ ಪುರಸಭೆಯ  ವಿರೋಧ ಪಕ್ಷದ ನಾಯಕರಾದ ಭೀಮಶಾ ಜೀರೋಳ್ಳಿ, ಮುಖಂಡರಾದ ಗಿರಿಮಲ್ಲಪ್ಪ ಕಟ್ಟಿಮನಿ,ರಾಮು ರಾಥೋಡ್, ರವೀಂದ್ರ ನಾಯಕ್,ಕಿಶನ್ ಜಾದವ್, ಅಶೋಕ್ ಪವಾರ್, ಕಾಶಿನಾಥ ಅರಳಗುಂಡಗಿ,ವಿಜಯ ಪವಾರ್,ರವಿ ರಾಠೋಡ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here