ಬಿಸಿ ಬಿಸಿ ಸುದ್ದಿ

ಜಿಪಂ ಕ್ಷೇತ್ರ ವಿಂಗಡಣೆಗೆ ಭಾರಿ ವಿರೋಧ: ಅವಕಾಶ ನೀಡದಿದ್ದರೆ ಕೋರ್ಟ್ ಮೊರೆ

ಆಳಂದ: ಜಿಪಂ ಕ್ಷೇತ್ರ ವಿಂಗಡಣೆಯಲ್ಲಿ ಮಾರ್ಗಸೂಚಿಗಳನ್ನು ಪಾಲನೆ ಮಾಡಿಲ್ಲ, ರಾಜಕೀಯ ಪ್ರಭಾವದಿಂದಾಗಿ ಅವೈಜ್ಞಾನಿಕ ಮತ್ತು ಜನತೆಗೆ ಅನಾನುಕೂಲ ರೀತಿಯಲ್ಲಿ ಕ್ಷೇತ್ರ ರಚನೆಯಾಗಿದೆ. ಸದ್ಯ ಆಕ್ಷೇಪಣೆಯನ್ನು ನೀಡಿ ಸರಿಪಡಿಸಿಕೊಳ್ಳಬೇಕು, ಇಲ್ಲದಿದ್ದರೆ ಹೈಕೋರ್ಟ್ ಮೋರೆ ಹೋಗಲಾಗುವುದು ಎಂದು ಕಾಂಗ್ರೆಸ್ ಮುಖಂಡ ಶ್ರೀಮಂತ ವಗ್ಧರ್ಗಿ ಹೇಳಿದರು.

ನಿಂಬರ್ಗಾ ಜಿಪಂ ಕ್ಷೇತ್ರ ರದ್ದುಗೊಂಡ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಕರೆದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

ಜನಸಂಖ್ಯೆ ಆಧಾರದ ಮೇಲೆ ಜಿಪಂ ಮರು ವಿಂಗಡಣೆ ಮಾಡುತ್ತಿರುವುದು ಸಂಪೂರ್ಣ ಅವೈಜ್ಞಾನಿಕವಾಗಿದೆ. ನಿಂಬರ್ಗಾ ಜಿಪಂ ಕ್ಷೇತ್ರ 1986 ನೇ ಅವಧಿಯಿಂದ ಕೇಂದ್ರ ಸ್ಥಾನವಾಗಿ ಬಂದಿದೆ. ನಿಂಬರ್ಗಾ 17,000 ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಅಲ್ಲದೆ 8,000 ಕ್ಕೂ ಹೆಚ್ಚು ಮತದಾರರನ್ನು ಹೊಂದಿದೆ. ತಾಲ್ಲೂಕಿನ ನಿಂಬರ್ಗಾ ಇತಿಹಾಸವುಳ್ಳ ಪ್ರಸಿದ್ಧ ಧಾರ್ಮಿಕ ಸ್ಥಳವಾಗಿದೆ. ಅಲ್ಲದೆ ಸುತ್ತ-ಮುತ್ತಲಿನ 25 ಗ್ರಾಮಗಳ ಜನರು ನಿಂಬರ್ಗಾ ಗ್ರಾಮವನ್ನು ಅವಲಂಬಿಸಿದ್ದಾರೆ. ನಿಂಬರ್ಗಾ ಜಿಪಂ ಕ್ಷೇತ್ರ ಮುಂದುವರೆಸಬೇಕೆಂದು ಸಾಮಾಜಿಕ ಕಾರ್ಯಕರ್ತರಾದ ಬಸವರಾಜ ಯಳಸಂಗಿ ಒತ್ತಾಯಿಸಿದ್ದಾರೆ.

ಬೆತ್ತಲೆ ವಿಡಿಯೋ ಹರಿಬಿಟ್ಟ ವಿವಿ ಗ್ರಂಥಾಲಯ ಅಧೀಕ್ಷಕ

ಮುಖಂಡ ಅಮೃತ ಬಿಬ್ರಾಣಿ, ಪರಮೇಶ್ವರ್ ಶಿವಗೊಂಡ, ವಿಠ್ಠಲ್ ಕೋಣೆಕರ, ಮೋಹನ್ ನಿರ್ಮಲ್ಕರ್, ಈರಣ್ಣ ನಾಗಶೆಟ್ಟಿ, ಶ್ರೀಶೈಲ ಮಾ.ಪಾಟೀಲ್, ಗುರು ಕಾಮಣಗೊಳ್, ಶಿವಪುತ್ರ ಮಾಳಗಿ, ಮಲ್ಲಿನಾಥ ಒಡೆಯರ್, ಮಹಿಬೂಬ್ ಆಳಂದ, ರವಿಕುಮಾರ್ ಯಳಸಂಗಿ, ಸಾತಣ್ಣ ಮಂಟಗಿ, ರಾಜು ಚವ್ಹಾಣ್,ಮಲ್ಲಿನಾಥ ನಾಟಿಕಾರ, ಸಾಯಬಣ್ಣ ಖರ್ಚನ್,ದತ್ತಾ ದುರ್ಗದ, ರಾಜು ಶಿಂಗೆ, ಚಂದ್ರಕಾಂತ ಮಠಪತಿ,ಶಾಂತಕುಮಾರ ಯಳಸಂಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

1 hour ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

1 hour ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

2 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

2 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

2 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

2 hours ago