ಸ್ತ್ರೀ ವಾದದ ಪ್ರತೀಕ ಮತ್ತು ಪ್ರಥಮ ಮಹಿಳಾ ವಚನಗಾರ್ತಿ ಮಹಾಶಿವಶರಣೆ ಅಕ್ಕಮಹಾದೇವಿ..!

ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು ಶರಣೆ ಅಕ್ಕಮಹಾದೇವಿ…

ಅಲ್ಲದೇ ಮುಖ್ಯವಾಗಿ ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ.

ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರಿವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿಯಾಗಿ ಗುರುತಿಸಬಹುದಾಗಿದೆ.

ಕೂಡ್ಲು ಗ್ರಾಮದಲ್ಲಿ ಬಡವರ ಮನೆ ಕೆಡವಿದ ಜಿಲ್ಲಾಡಳಿತ: ಬೀದಿಗೆ ಬಿದ್ದ ನೂರಾರು ಕುಟುಂಬ

ಚಿಕ್ಕ ವಯಸ್ಸಿನಲ್ಲೇ ಸಕಲ ಸುಖವನ್ನು ತ್ಯಜಿಸಿದ ಅಕ್ಕ, ಆಕೆ ಎದುರಿಸಿದ ಪರೀಕ್ಷೆಗಳು ಬಹಳಷ್ಟು. ಸಾಕ್ಷಾತ್ ಶಿವ ( ಮಲ್ಲಿಕಾರ್ಜುನ)ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ನಡೆದ ಅಕ್ಕ, ಹಲವಾರು ಭಕ್ತರಿಗೆ ಮಾದರಿಯಾಗಿದ್ದಾಳೆ.

ಇವನಾರವ ಇವನಾರವ ಇವನಾರವ ನೆಂದಿನಸದಿರಯ್ಯಾ
ಇವನಮ್ಮವ ಇವನಮ್ಮವ ಇವನಮ್ಮವ ನೆಂದಿನಸಯ್ಯಾ
ಕೂಡಲಸಂಗಮದೇವಾ ನಿಮ್ಮ ಮಹಾಮನೆಯ ಮಗನೆಂದನಿಸಯ್ಯ.

ಸ್ಟಾಂಡ್ ಅಪ್ ಇಂಡಿಯಾ ಯೋಜನೆ ರಾಷ್ಟ್ರೀಯ ಅಭಿವೃದ್ಧಿಗೆ ಪೂರಕ :ಅಂಬಾರಾಯ ಅಷ್ಠಗಿ

ಜನ್ಮಸ್ಥ್ಲಲ ಶರಣೆ ಅಕ್ಕಮಹಾದೇವಿಯವರು ಜನಿಸಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಶಿರಾಳಕೊಪ್ಪದ ನಡುವೆ ಇರುವ ಉಡುತಡಿ ಅಥವಾ ಉಡಗಣಿ ಅಥವಾ ಉಡುಗಣಿ ಎಂದೇ ಪ್ರಸಿದ್ದವಾಗಿರುವ ಪುಟ್ಟ ಗ್ರಾಮದಲ್ಲಿ.

ಇದು ಶಿಕಾರಿಪುರದಿಂದ ಸುಮಾರು 15 ಕಿ.ಮಿ. ಹಾಗೂ ಶಿರಾಳಕೊಪ್ಪದಿಂದ 4 ಕಿ.ಮಿ.ದೂರದಲ್ಲಿದೆ. ಇದೀಗ ಇದು ಪ್ರವಾಸಿ ತಾಣವಾಗಿಯೂ ಪ್ರಸಿದ್ದವಾಗಿದೆ.

ಪರರ ಪಾಲಾಗಿದ್ದ ಇಲ್ಲಿರುವ ಕೌಶಿಕ ಮಹಾರಾಜರ ಕೋಟೆ ಹಾಗೂ ಅಕ್ಕನ ದೇವಸ್ಥಾನ ಇರುವ ಜಮೀನನ್ನು ಉಳಿಸಲು ಪ್ರಯತ್ನಿಸಿ, ಹೋರಾಟ ನಡೆಸಿ, ಯಶಸ್ವಿಯಾಗಿದ್ದು ಸಿರಿಗೆರೆಯ ಶ್ರೀಗಳಾಗಿದ್ದ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಯವರು ಹಾಗೂ ಹಿರೇಜಂಬೂರಿನ ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಶಿವನಗೌಡ ಪಾಟೀಲರು.

ಸಿಯುಕೆಯಲ್ಲಿ ಯಶಸ್ವಿ ಪ್ರದರ್ಶನ ಕಂಡ ‘ಸರ್ವರಿಗೂ ಸಂವಿಧಾನ’ ನಾಟಕ

ಇದನ್ನು ಇವರು ಉಳಿಸಿಕೊಟ್ಟ ನಂತರ ಸರಕಾರ ಇತ್ತ ಗಮನ ಹರಿಸಿ, ಅದರ ಅಭಿವೃದ್ದಿಗೆ ಮುಂದಾಗಿದೆ. ಇಂತಹ ಉಡುತಡಿಯಿಂದ ಎಲ್ಲವನ್ನೂ ತ್ಯಜಿಸಿ ಹೊರಟ ಅಕ್ಕಮಹಾದೇವಿಯವರು ಮುಂದೆ [ಬಸವ ಕಲ್ಯಾಣ]ದ ಅನುಭವ ಮಂಟಪದಲ್ಲಿ ಅಲ್ಲಮಪ್ರಭು, ಬಸವಣ್ಣ, ಚೆನ್ನಬಸವಣ್ಣ, ಸಿದ್ಧರಾಮೇಶ್ವರ ಮೊದಲಾದ ಶರಣರೊಡನೆ ಕಲ್ಯಾಣದ ಕ್ರಾಂತಿಯಲ್ಲಿ ತಮ್ಮನ್ನು ತಾವೂ ತೊಡಗಿಸಿಕೂ೦ಡರಲ್ಲದೇ, “ಚನ್ನಮಲ್ಲಿಕಾರ್ಜುನ” ಎಂಬ ಅಂಕಿತನಾಮದಲ್ಲಿ ವಚನ ಸಾಹಿತ್ಯಕ್ಕೆ (ಶರಣ ಸಾಹಿತ್ಯ) ತಮ್ಮದೇ ಆದ ಸಾಹಿತ್ಯ ಸೇವೆಯನ್ನು ಸಲ್ಲಿಸಿದ್ದಾರೆ.

ಅಕ್ಕನ ಅನುಭಾವಿಕತೆ: -ಅಕ್ಕಮಹಾದೇವಿ ಶರಣ ಚಳುವಳಿಯಲ್ಲಿ , ಎತ್ತರದ ಚೇತನವಾಗಿ ಮೂಡಿ ಬಂದ ವ್ಯಕ್ತಿತ್ವ . ಅವರ ಇಡೀ ಜೀವನ ಕಥನ , ಐತಿಹ್ಯಗಳಿಂದ, ವಿಸ್ಮಯಗಳಿಂದ , ಪ್ರಭಾವಳಿಗಳಿಂದ ತುಂಬಿದ್ದರೂ ಸಹ, ಅವರ ಬಗ್ಗೆ ಅವರ ಸಮಕಾಲೀನ ವಚನಕಾರರೂ; ಅಕ್ಕನ ಕಾಲಕ್ಕೆ ತುಂಬಾ ಹತ್ತಿರದವನಾದ ಹರಿಹರ ಮಹಾಕವಿಯು ರಚಿಸಿರುವ ‘ಮಹಾದೇವಿಯಕ್ಕಗಳ ರಗಳೆ’ಮತ್ತು ಸ್ವತಹ ಅಕ್ಕಮಹಾದೇವಿಯವರೇ ರಚಿಸುವ ವಚನಗಳೂ , ಅವರ ವ್ಯಕ್ತಿತ್ವವನ್ನು ಕಟ್ಟಿ ಕೊಡುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ. ಈ ಎಲ್ಲವನ್ನೂ ಗಮನಿಸಿದಾಗ ಅಕ್ಕಮಹಾದೇವಿಯವರ ಜೀವನ ಅಸಾಮಾನ್ಯವಾದ, ವೈಶಿಷ್ಟ್ಯತೆಯಿಂದ, ವೈಚಾರಿಕವಾದ, ಅನುಭಾವಪೂರ್ಣವಾದ , ನುಡಿ, ನಡೆಗಳೊಂದಾದ ಪರಿಯಲ್ಲಿರುವುದು ಕಂಡು ಬರುತ್ತದೆ.

ಕೋವಿಡ್ ಲಸಿಕೆ ಪಡೆದ ಹೈಕೋರ್ಟ್ ಪೀಠದ ನ್ಯಾಯಾಧೀಶರು

ವಚನ ಚಳುವಳಿಯ ಸಮಯದಲ್ಲಿ, ಸಾಹಿತ್ಯದ ದೃಷ್ಟಿಯಿಂದ ಗಮನಿಸುವುದಾದರೆ, ಅಲ್ಲಮ ಮತ್ತು ಅಕ್ಕ , ಅಂದಿನ ಅತ್ಯಂತ ವಿಶಿಷ್ಟ ಸಂವೇದನೆಯ ವ್ಯಕ್ತಿತ್ವದವರಾಗಿ ಗಮನ ಸೆಳೆಯುತ್ತಾರೆ.

ಅನುಭಾವಿಯೂ, ಕವಿಯೂ ಆಗಿದ್ದ ಅಕ್ಕಮಹಾದೇವಿಯವರ ವಚನಗಳು,ಕನ್ನಡ ಸಾಹಿತ್ಯದ ಮೌಲಿಕ ಬರವಣಿಗೆಗಳಾಗಿವೆ.

ವಚನಕಾರರಲ್ಲಿಯೇ ಅತ್ಯಂತ ಕಿರಿಯ ವಯಸ್ಸಿನ ಪ್ರತಿಭೆಯಾಗಿದ್ದರೂ ಸಹ, ವಿಶಿಷ್ಟ ಜೀವನಾನುಭವವನ್ನು ಹೊಂದಿದ ಕಾರಣದಿಂದ, ಅವರ ಬರಹಗಳು ಗಮನಾರ್ಹವಾಗಿವೆ.

ಉದಾ– ‘ಲೋಕದ ಚೇಷ್ಟೆಗೆ ರವಿ ಬೀಜವಾದಂತೆ, ಕರಣಂಗಳ ಚೇಷ್ಟೆಗೆ ಮನಸ್ಸು ಬೀಜ’, ‘ಬೆಟ್ಟದಾ ಮೇಲೊಂದು ಮನೆಯ ಮಾಡಿ, ಮೃಗಗಳಿಗೆ ಅಂಜಿದೊಡೆಂತಯ್ಯ’, ‘ಹಸಿವಾದರೆ ಭಿಕ್ಷಾನ್ನಗಳುಂಟು, ತೃಷೆಯಾದರೆ ಕೆರೆ ಹಳ್ಳಗಳುಂಟು’ ಮುಂತಾದ ವಚನಗಳು ಅವರ ಲೋಕಾನುಭವ, ಜ್ಝಾನ ಸಂಪನ್ನತೆ, ಅಭಿವ್ಯಕ್ತಿ ಸಾಮರ್ಥ್ಯಕ್ಕೆ ನಿದರ್ಶನಗಳಾಗಿವೆ.

ಶೂನ್ಯ ಸಂಪಾದನೆಕಾರರು ‘ಮಹಾದೇವಿಯಕ್ಕಗಳ ಸಂಪಾದನೆ’ ಎಂಬ ಒಂದು ಅಧ್ಯಾಯವನ್ನೇ ರಚಿಸಿ, ಅವರಿಗೆ ಗೌರವ ತೋರಿದ್ದಾರೆ .

ಹರಿಹರ ಮಹಾಕವಿಯ ಮಹಾದೇವಿಯಕ್ಕಗಳ ರಗಳೆ, ಇಪ್ಪತ್ತನೆಯೆ ಶತಮಾನದ ನವೋದಯ ಕಾಲದ ಸಾಹಿತಿ ಎಚ್. ತಿಪ್ಪೇರುದ್ರಸ್ವಾಮಿಯವರ ‘ಕದಳಿಯ ಕರ್ಪುರ’ ಅಕ್ಕನವರ ವ್ಯಕ್ತಿತ್ವವನ್ನು ಕಟ್ಟಿಕೊಡುವ ಸಮರ್ಥ ಬರಹಗಳಾಗಿವೆ.

ಅಕ್ಕಮಹಾದೇವಿಯವರ ಜೀವನದಲ್ಲಿ ನಿರ್ಣಾಯಕ ಘಟನೆಗಳಲ್ಲಿ, ಪ್ರಮುಖವಾದವುಗಳು ಈ ಎರಡು, ಒಂದನೆಯದು– ಅಧಿಕಾರ, ಸಂಪತ್ತು, ವೈಭವ, ಆಡಂಬರ, ಭೋಗ ಜೀವನಗಳನ್ನು ಸಂಪೂರ್ಣವಾಗಿ ತಿರಸ್ಕರಿಸಿ, ಈ ಎಲ್ಲ ಬಂಧನಗಳಿಂದ ಬಿಡುಗಡೆ ಪಡೆದು, ಸಾಮಾನ್ಯರಲ್ಲಿ ಸಾಮಾನ್ಯಳಂತೆ ಜನ ಜೀವನದಲ್ಲಿ ಬೆರೆತ್ತದ್ದು; ಇದಕ್ಕಾಗಿ ಅರಸೊತ್ತಿಗೆಯನ್ನು ಎದುರು ಹಾಕಿಕೊಳ್ಳಲು ಹಿಂಜರಿಯದಿದ್ದುದು. ಎರಡನೆಯದು– ಶರಣ ಚಳುವಳಿಯಲ್ಲಿ ಭಾಗವಹಿಸಲು ನಿರ್ಣಯಿಸಿ, ಅನುಭವ ಮಂಟಪವನ್ನು ಪ್ರವೇಶ ಮಾಡಿದುದು, ಅಕ್ಕನವರ ಅನುಭವ ಮಂಟಪದ ಪ್ರವೇಶದ ಮೊದಲ ದಿನವನ್ನು ಸ್ಮರಿಸದ ಶರಣ ಸಾಹಿತ್ಯಕಾರನಿಲ್ಲ, ಎನ್ನುವಷ್ಟು ಅಪೂರ್ವ ಸ್ವಾಗತ ಆಕೆಗೆ ಶರಣರಿಂದ ದೊರಕಿತು. ಅಲ್ಲಿ ಅಲ್ಲಮಪ್ರಭು ಮತ್ತು ಅಕ್ಕನವರ ನಡುವೆ ನಡೆಯಿತೆನ್ನಲಾದ ಸಂಭಾಷಣೆಯೆಂಬುದು; ಅನುಭಾವದ ಉತ್ತುಂಗದ ಋಷಿ ವಾಣಿಯ ರೂಪದಲ್ಲಿ ವಚನಗಳಲ್ಲಿ ಸಂಗ್ರಹಿತವಾಗಿದೆ.

ಕನ್ನಡ ಸಾಹಿತ್ಯ ಮೊದಲ ಕವಯತ್ರಿ ಮತ್ತು ವಚನಗಾರ್ತ, ಹಾಗೂ ಮಹಿಳೆಯರ ಪ್ರತಿನಿಧಿಯಾಗಿ ಅಭಿವ್ಯಕ್ತಿಯಲ್ಲಿ ಪುರುಷ ಸಮಾಜವನ್ನು ಪ್ರತಿಭಟಿಸಿದವರು. ಸಾಮಾಜಿಕ ಬದಲಾವಣೆಗೆ ಶ್ರಮಿಸಿದವರು. “ಚನ್ನಮಲ್ಲಿಕಾರ್ಜುನ” ಎಂಬುದು ಈಕೆಯ ವಚನಗಳ ಅಂಕಿತ ನಾಮ. “ಯೋಗಾಂಗತ್ರಿವಿಧಿ” ಅಕ್ಕಮಹಾದೇವಿಯ ಪ್ರಮುಖ ಕೃತಿಯಾಗಿದೆ.

ಇಂತಹ ಮಹಾಶಿವರಣೆ ಮತ್ತು ಪ್ರಮುಖ ವಚನಗಾರ್ತಿ ಅಕ್ಕಮಹಾದೇವಿ ಕೊನೆಗೆ ತನ್ನ ಇಷ್ಟದೈವ ಮಲ್ಲಿಕಾರ್ಜುನನಲ್ಲಿ ಶ್ರಿಶೈಲದ ಕದಳಿವನದಲ್ಲಿ ಐಕ್ಯರಾದರು..!

ಇದ್ಯಾಕೆ ಇಷ್ಟೆಲ್ಲಾ ಇಂದು ಅಕ್ಕನ ಬಗೆಗೆ ನೆನಪಾಯಿತ್ತೆಂದರೆ, ಇಂದು ಅಕ್ಕನ ಜಯಂತಿ. ಅದಕ್ಕೆ ಇಷ್ಟೆಲ್ಲಾ ನೆನಪಾಯಿತು.
ಇಷ್ಟೆಲ್ಲಾ ಹೇಳಿ ಮಹಾಶಿವಶರಣೆ ಇಂತಿಪ್ಪ ಅಕ್ಕಮಹಾದೇವಿಯ ಈ ಲೇಖನವನ್ನು ಮುಗಿಸುತ್ತೇನೆ.

ಕೆ.ಶಿವು.ಲಕ್ಕಣ್ಣವರ

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420