ಕಲಬುರಗಿ: ನಗರದ ಹೊರವಲಯಗಳಲ್ಲಿ ಭಾರಿ ವಾಹನಗಳು ಓಡಾಡುತ್ತಿದ್ದು, ಇವುಗಳಿಂದ ರಸ್ತೆ ಹಾಳಾಗುತ್ತಿದೆ. ಹೀಗಾಗಿ ಅಂತಹ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಯಿಂಗ್ ಹ್ಯುಮೆನ್ ಸಂಘಟನೆ ಪದಾಧಿಕಾರಿಗಳು ಆರ್ಟಿಒ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಆರ್ಟಿಒ ನಿಯಮಗಳನ್ನು ಉಲ್ಲಂಘಿಸಿ ಸಾಮರ್ಥ್ಯಕಿಂತ ಹೆಚ್ಚು ಭಾರ ಹೇರಿ ಸಾಗಣೆ ಮಾಡುತ್ತಿವೆ. ಈ ಬಗ್ಗೆ ಉಪ ಸಾರಿಗೆ ಇಲಾಖೆ ಅಧಿಕಾರಿಗಳು ಕಂಡು ಕಾಣದಂತೆ ಜಾಣ ಕುರುಡುತನ ಪ್ರದರ್ಶನ ಮಾಡುತ್ತಿದ್ದಾರೆ. ಹೆಚ್ಚು ಭಾರ ಹೇರಿ ಸಾಗಣೆ ಮಾಡುತ್ತಿರುವುದರಿಂದ ರಸ್ತೆಗಳು ಬೇಗ ಹಾಳಾಗುತ್ತಿವೆ. ನಗರದ ಹೊರ ವಲಯದಲ್ಲಿ ಆರ್ಟಿಒ ಅಧಿಕಾರಿಗಳು ಹಣ ವಸೂಲಿ ಮಾಡುತ್ತಿರುವ ಗುಮಾನಿಯೂ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ ಎಂದು ದೂರಿದ್ದಾರೆ.
ಬೋರ್ವೆಲ್ ದುರಸ್ಥಿಗೆ ಪಾಲಿಕೆ ಆಯುಕ್ತರಿಗೆ ಒತ್ತಾಯ
ಕೂಡಲಢ ಈ ಕುರಿತು ಗಮನ ಹರಿಸಿ, ಅಕ್ರಮ ಹಣ ವಸೂಲಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಬೇಕು. ಮತ್ತು ಸಾಮರ್ಥ್ಯಕಿಂತ ಹೆಚ್ಚು ಭಾರ ಹೊತ್ತು ಸಾಗಣೆ ಮಾಡುವ ವಾಹನಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಸಂಬಂಧಿಸಿದ ಅಧಿಕಾರಿಗಳು ಒಂದು ವಾರದಲ್ಲಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹಂತ ಹಂತವಾಗಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಬಿಯಿಂಗ್ ಹ್ಯುಮೆನ್ ಸಂಘಟನೆ ಅಧ್ಯಕ್ಷ ಸಾದಿಕ್ ಅಲಿ ದೇಶಮುಖ್, ಅಬ್ದುಲ್ ಕರೀಮ, ಸೈಯದ್ ಅಹೆಮದ್, ಮಹಮದ್ ರಫೀಕ್, ಆಸಾದ್, ಇರ್ಶಾದ್ ಇದ್ದರು.
ಕಲಬುರಗಿ: ಕಳೆದ 25 ವರ್ಷಗಳಿಂದ ಮಾದಿಗರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದ ವಿವಿಧ ರಾಜಕೀಯ ಆಡಳಿತ ಸರಕಾರಗಳಿಗೆ ಪ್ರತಿಭಟನೆ,ಧರಣಿ, ಸತ್ಯಾಗೃಹ,…
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಪ್ರಾಧ್ಯಾಫಕ ಹಾಗೂ ವಾಣಿಜ್ಯ ನಿಕಾಯದ ಡೀನ್ ಪ್ರೊ. ಎ.…
ಕಲಬುರಗಿ: ಜುಲೈ 1ರ ಸೋಮವಾರ ರಾತ್ರಿ 8 ಗಂಟೆಗೆ ಕಲಬುರಗಿ ನಗರದ ಆರಾಧ್ಯ ದೈವ ಮಹಾದಾಸೋಹಿ ಶ್ರೀ ಶರಣಬಸವೇಶ್ವರ ದೇವಸ್ಥಾನದ…
ಆಳಂದ ; ಮಕ್ಕಳ ಆರೋಗ್ಯ, ಪೌಷ್ಟಿಕ ಆಹಾರದ ಕುರಿತ ವರದಿಯನ್ನು ತಂತ್ರಾಂಶದಲ್ಲಿ ದಾಖಲಿಸುವುದರ ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರ ಕಾರ್ಯಚಟುವಟಿಕೆಗೆ ಅನುಕೂಲ…
ಶಹಾಪುರ ತಾಲೂಕಿನ ಸಗರ ಗ್ರಾಮ ಆಡಳಿತ ಅಧಿಕಾರಿ ರಮೇಶ್ ರಾಠೋಡ್ ಶಹಾಪುರ : ರೈತರು ಬೆಳೆವಿಮೆ, ಪರಿಹಾರ,ಸಾಲ ಮನ್ನಾ,ಇತರೆ ಸೇರಿದಂತೆ…
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…