ಬಡಮಕ್ಕಳಿಗೆ ಹಣ್ಣು, ಪ್ಯಾಡ ವಿತರಿಸುವ ಮೂಲಕ ಹುಟ್ಟುಹಬ್ಬ ಆಚರಣೆ

ಭಾಲ್ಕಿ: ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಪೂಜ್ಯ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ದಿವ್ಯಸನ್ನಿಧಾನದಲ್ಲಿ ಹಾಗೂ ಶ್ರೀಮಠದ ಪ್ರಸಾದ ನಿಲಯದ ಮಕ್ಕಳ ಉಪಸ್ಥಿತಿಯಲ್ಲಿ ದೆಹಲಿಯ ಶರಣ ವೈಜಿನಾಥ ಬಿರಾದಾರ ಅವರು ೭೧ ನೆಯ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಸಾನಿಧ್ಯವಹಿಸಿದ ಪೂಜ್ಯರು ಶರಣ ವೈಜಿನಾಥ ಬಿರಾದಾರ ಅವರು ಶ್ರೀಮಠದ ಪ್ರಸಾದ ನಿಲಯದಲ್ಲಿ ಉಳಿದುಕೊಂಡು ವಿದ್ಯಾಭ್ಯಾಸ ಮಾಡಿದವರು.

ಇವರು ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರ ಅಪ್ಪಟ ಶಿಷ್ಯರಾಗಿದ್ದಾರೆ. ಮೊಟ್ಟಮೊದಲಿಗೆ ಪೂಜ್ಯರನ್ನು ದೆಹಲಿಗೆ ಕರೆಯಿಸಿ ಅಂದಿನ ರಾಷ್ಟ್ರಪತಿಗಳಾದ ಗ್ಯಾನಿ ಜೈಲ್‌ಸಿಂಗ್ ಅವರಿಂದ ಸನ್ಮಾನಿಸಿದ ಶ್ರೇಯಸ್ಸು ಇವರು ಸಲ್ಲುತ್ತದೆ. ಇವರು ಬಡತನ ಕುಟುಂಬದಿಂದ ಮೇಲೆ ಬಂದಿದವರು. ಶ್ರೀಮಂತಿಗೆ ಬಂದರೂ ಎಂದೂ ಇವರ ಹತ್ತಿರ ಅಹಂ ಸುಳಿಯಲಿಲ್ಲ. ಕಲ್ಯಾಣ ಕರ್ನಾಟಕದ ಭಾಗದ ಅನೇಕ ನಿರುದ್ಯೋಗಿಗಳಿಗೆ ಉದ್ಯೋಗ ಕೊಡಿಸಿ ಅವರ ಜೀವನಕ್ಕೆ ದಾರಿದೀಪವಾಗಿದ್ದಾರೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಪನ್ಯಾಸಕರು ಪಾಠ ಮಾಡಬೇಕು: ಶಿವಶರಣಪ್ಪ ಮೂಳೆಗಾಂವ

ಇವರು ನಿವೃತ್ತರಾದರೂ ಸದಾ ಉತ್ಸಾಹಿಗಳಾಗಿದ್ದಾರೆ. ಇವರ ಹುಟ್ಟುಹಬ್ಬದ ನಿಮಿತ್ಯವಾಗಿ ಪ್ರಸಾದ ನಿಲಯದ ಮಕ್ಕಳಿಗೆ ಪ್ಯಾಡ್ ಮತ್ತು ಹಣ್ಣುಗಳನ್ನು ವಿತರಿಸಿರುವುದು ಬಡಮಕ್ಕಳ ಮೇಲಿರುವ ಪ್ರೀತಿಯನ್ನು ಎತ್ತಿ ತೋರಿಸುತ್ತದೆ. ಇವರ ಬಸವಗುರುವಿನ ಶ್ರೀರಕ್ಷೆ ಸದಾ ಇದ್ದು, ಅವರಿಗೆ ಆಯುಷ್ಯ ಆರೋಗ್ಯ ನೀಡಿ ಕಾಪಾಡಲೆಂದು ಶುಭ ಹಾರೈಸಿದರು.

ಶ್ರೀಮಠದಿಂದ ಸನ್ಮಾನ ಸ್ವೀಕರಿಸಿ ಆಶೀರ್ವಾದ ಪಡೆದ ಶರಣ ವೈಜಿನಾಥ ಬಿರಾದಾರ ಅವರು ಈ ಸಂದರ್ಭದಲ್ಲಿ ಅತ್ಯಂತ ಭಾವನಾತ್ಮಕವಾದ ಮಾತುಗಳನ್ನು ಆಡಿದರು. ಬಾಲ್ಯದ ನೆನಪುಗಳನ್ನು ನೆನಪಿಸುತ್ತ ಶ್ರೀಗುರುವಿನ ಕೃಪೆಯಿಂದಲೇ ಅಸಾಧ್ಯ ಸಾಧ್ಯವಾಗುತ್ತದೆ ಎನ್ನಲಿಕ್ಕೆ ನನ್ನ ಜೀವನವೇ ಸಾಕ್ಷಿಯಾಗಿದೆ. ಎಲ್ಲ ವಿದ್ಯಾರ್ಥಿಗಳನ್ನು ಗುರುವಿನ ಮೇಲೆ ಅಪಾರವಾದ ನಂಬಿಕೆಯನ್ನು ಇಟ್ಟು ಪ್ರಯತ್ನಶೀಲರಾದರೇ ನೀವು ಬೇಕಾದದ್ದನ್ನು ಸಾಧಿಸಬಹುದು. ನಾವಿರುವ ಸಮಯದಲ್ಲಿ ಶ್ರೀಮಠದಲ್ಲಿ ಅತ್ಯಂತ ಬಡತನವಿತ್ತು.

ಕಲಬುರಗಿ: ಜಿಲ್ಲಾ ಪಂಚಾಯತ್ ಕ್ಷೇತ್ರ ರದ್ದು ಖಂಡಿಸಿ ಪ್ರತಿಭಟನೆ

ಆದರೆ ಪೂಜ್ಯರು ಇಂದು ನಿಮಗೆ ಎಲ್ಲಾ ಸೌಕರ್ಯಗಳನ್ನು ಒದಗಿಸಿಕೊಟ್ಟಿದ್ದಾರೆ. ಅದರ ಸದುಪಯೋಗವನ್ನು ಪಡೆದುಕೊಂಡು ಉನ್ನತ ಮಟ್ಟದ ಗುರಿಯನ್ನು ಸಾಧಿಸುವ ಮೂಲಕ ಹೆತ್ತ ತಂದೆ-ತಾಯಿಗೂ ಹಾಗೂ ಶ್ರೀಮಠಕ್ಕೆ ಕೀರ್ತಿ ತರುವಂತಹರಾಗಬೇಕೆಂದು ಮಕ್ಕಳಿಗೆ ಹಿತನುಡಿಗಳನ್ನು ಹೇಳಿದರು.

ಕಾರ್ಯಕ್ರಮದಲ್ಲಿ ಶಿವಾಜಿ ಕಾಲೇಜಿನ ಪ್ರಾಚಾರ್ಯರಾದ ಶರಣ ಚಂದ್ರಕಾಂತ ಬಿರಾದಾರ ಅವರು ಶರಣ ವೈಜಿನಾಥ ಬಿರಾದಾರ ಅವರ ಕುರಿತು ಮಾತುಗಳನ್ನಾಡಿದರು. ಗಣಪತಿ ಬೋಚರೆ, ಅಶೋಕ ಮೈನ್ನಳ್ಳೆ, ಬಿ.ಎನ್.ಸೊಲಾಪೂರೆ, ಗಿರೀಶ ರಿಕ್ಕೆ, ಕಾಕನಾಳೆ ಹಾಗೂ ಬಿರಾದಾರ ಪರಿವಾರದವರು ಉಪಸ್ಥಿತರಿದ್ದರು. ಬಾಬು ಬೆಲ್ದಾಳ ನಿರೂಪಿಸಿದರು. ಶ್ರೀಮಠದ ಮಕ್ಕಳಿಂದ ವಚನ ಸಂಗೀತ ನಡೆಯಿತು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420