ಸಾರಿಗೆ ನೌಕರರ ಬೇಡಿಕೆ ಈಡೇರಿಸಿ, ವಿದ್ಯಾರ್ಥಿಗಳಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸಲು ಎಸ್ಎಫ್ಐ ಆಗ್ರಹ

ಕಲಬುರಗಿ: ರಾಜ್ಯ ರಸ್ತೆ ಸಾರಿಗೆ ನಿಗಮಗಳು ಮತ್ತು ಬೆಂಗಳೂರು ಮಹಾನಗರ ಸಾರಿಗೆ ನಿಗಮ ನೌಕರರು ಏಪ್ರಿಲ್ 7 ರಿಂದ ಬಸ್ಸುಗಳನ್ನು ಬಂದು ಮಾಡುವುದರ ಮೂಲಕ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ ರಾಜ್ಯ ಸಾರಿಗೆ ನೌಕರರ ಬೇಡಿಕೆಗಳ ಕುರಿತು ರಾಜ್ಯ ಸರ್ಕಾರ ಸಹಾನುಭೂತಿಯಿಂದ ಮಾತುಕತೆ ಮೂಲಕ ಪರಿಹಾರೋಪಾಯವನ್ನು ಕಂಡುಕೊಳ್ಳುವ ಮೂಲಕ ನೌಕರರ ಮುಷ್ಕರ ಮುಗಿಸಿ ಶೀಘ್ರವಾಗಿ ವಿದ್ಯಾರ್ಥಿಗಳಿಗೆ ಸಮರ್ಪಕ ಸರ್ಕಾರಿ ಸಾರಿಗೆ ಸೌಲಭ್ಯ ಕಲ್ಪಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಬೇಕು ಎಂದು ಎಸ್ಎಫ್ಐ ರಾಜ್ಯ ಸಮಿತಿ ಆಗ್ರಹಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಘಟನೆಯ ಜಿಲ್ಲಾ ಎಸ್.ಎಫ್.ಐ ಜಿಲ್ಲಾ ಅಧ್ಯಕ್ಷರಾದ ಮೈಲಾರಿ ದೊಡ್ಡಮನಿ ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪ್ರತಿನಿತ್ಯ ತರಗತಿಗಳಿಗೆ ಹೋಗಲು ಬಸ್ ಪಾಸ್ ಖರೀದಿಸಿ ಸರ್ಕಾರಿ ಕೆಎಸ್ಸಾರ್ಟಿಸಿ, ಬಿಎಂಟಿಸಿ ಬಸ್ ಸೌಲಭ್ಯವನ್ನು ನಂಬಿಕೊಂಡಿದ್ದ ಲಕ್ಷಾಂತರ ಕಾಲೇಜು ವಿದ್ಯಾರ್ಥಿಗಳು ಪರೀಕ್ಷೆಗಳು, ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ.

ಉದ್ಯೋಗ ಖಾತ್ರಿ ಕೆಲಸಗಾರರ ಕನಿಷ್ಠ ದಿನಗೂಲಿ ನೀಡಬೇಕೆಂದು ಪ್ರತಿಭಟನೆ

ಬಡ ವಿದ್ಯಾರ್ಥಿಗಳು ಬಸ್ ಪಾಸ್ ಹೊಂದಿದ್ದರು ಸರ್ಕಾರಿ ಬಸ್ ಸೌಲಭ್ಯ ಇಲ್ಲದಿರುವುದರಿಂದ  ಖಾಸಗಿ ಬಸ್ ಗಳಲ್ಲಿ ಮನಸೋಇಚ್ಛೆ ವಸೂಲಿ ಮಾಡುತ್ತಿರುವ ಟಿಕೆಟ್ ದರ ಕೊಟ್ಟು ಪ್ರಯಾಣಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸಾರಿಗೆ ನೌಕರರ ಮುಷ್ಕರದ ನೆಪದಲ್ಲಿ ಅಕ್ರಮವಾಗಿ , ಇನ್ಸೂರೆನ್ಸ್ ಹಾಗೂ ಲೈಸೆನ್ಸ್ ಇಲ್ಲದ, ಖಾಸಗಿ ಬಸ್ ಗಳು ಓಡಾಟ ನಡೆಸುತ್ತಿವೆ. ಇವುಗಳಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ, ನಾಗರೀಕರ ಜೀವಕೆ ಯಾವುದೇ ಭದ್ರತೆ ಇಲ್ಲವಾಗಿದೆ. ಆದ್ದರಿಂದ ಸರ್ಕಾರಿ ಸಾರಿಗೆ ಸಂಸ್ಥೆಯನ್ನು ಯಾವುದೇ ಕಾರಣಕ್ಕೂ ಸರ್ಕಾರ ಖಾಸಗೀಕರಣಗೊಳಿಸುವ ಜನವಿರೋಧಿ ನೀತಿಗಳನ್ನು ಕೈಬಿಟ್ಟು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳದಿದ್ದರೆ, ರಾಜ್ಯಾದ್ಯಂತ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳನ್ನು ಬೀದಿಗಿಳಿಸಿ ಹೋರಾಟ ನಡೆಸಬೇಕಾಗುತ್ತದೆ ಎಂದು ಸಮಿತಿಯ ಜಿಲ್ಲಾ ಕಾರ್ಯದರ್ಶಿ ಸಿದ್ದಲಿಂಗ ಪಾಳಾ ಎಚ್ಚರಿಕೆ ನೀಡಿದ್ದಾರೆ.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

3 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

6 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

10 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

11 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

13 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420