ರಸಗೊಬ್ಬರ ಬೆಲೆ ಏರಿಕೆ ದೇಶ ವಿನಾಶದ ಕೃತ್ಯ: ಸಿದ್ದರಾಮಯ್ಯ

ಬೆಂಗಳೂರು: ರಸಗೊಬ್ಬರ ಬೆಲೆ ಏರಿಕೆ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ ಪಕ್ಷದ‌ ನಾಯಕ ಸಿದ್ದರಾಮಯ್ಯ ಇದೊಂದು ದೇಶ ವಿನಾಶದ ಕೃತ್ಯ ಎಂದು ಟೀಕಿಸಿದ್ದಾರೆ.

ಈ‌ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ದೇಶ ಇಂದು ಹಲವಾರು ಸಂಕಷ್ಟಗಳಗಳ ಬೆಂಕಿಯಲ್ಲಿ ಬೇಯುತ್ತಿದೆ. ರೈತಾಪಿ ವರ್ಗ ಪ್ರಕೃತಿ ವಿಕೋಪದಂತಹ ಅನಾಹುತಗಳನ್ನು ಎದುರಿಸಲಾಗದೆ ತೀವ್ರ ತೊಂದರೆಯಲ್ಲಿದ್ದಾರೆ. ಎಲ್ಲ ಸ‌ಂಕಷ್ಟಗಳ ಮಧ್ಯೆಯೂ ಕೂಡಾ ರೈತರು ಕಷ್ಟಪಟ್ಟು ದುಡಿದು ದೇಶವನ್ನು ಉಳಿಸಿದ್ದಾರೆ. ರಾಜ್ಯದ ಮಟ್ಟಿಗೆ ಹೇಳುವುದಾದರೆ ಈ ಸಲ ಶೇ 6.4 ರಷ್ಟು ಕೃಷಿ ವಲಯದಲ್ಲಿ ಪ್ರಗತಿ ಕಂಡುಬಂದಿದ್ದು, ದೇಶದಲ್ಲಿ ಶೇ 3.4 ಕ್ಕೂ ಹೆಚ್ಚು ಬೆಳವಣಿಗೆ ಕಂಡಿದೆ. ಪರಿಣಾಮ ದೇಶದ ಜಿಡಿಪಿಗೆ ಕೃಷಿ ವಲಯ ಶೇ 20 ರಷ್ಟು ಕೊಡುಗೆ ‌ನೀಡಿದೆ.

ವಿಜೃಂಭಣೆಯಿಂದ ಅಂಬೇಡ್ಕರ ಜಯಂತಿ ಆಚರಿಸಿ: ಜಿಲ್ಲಾಧಿಕಾರಿ ಡಾ:ರಾಗಪ್ರೀಯ

ಈ ಸಂದರ್ಭದಲ್ಲಿ ರೈತ ವಿರೋಧಿ ಧೋರಣೆ ಅನುಸಿರುತ್ತಿರುವ ಮನೆಹಾಳ ಮೋದಿ ಸರ್ಕಾರ ರಸಗೊಬ್ಬರ ಬೆಲೆಯನ್ನು ಶೇ 60 ರಷ್ಟು ಹೆಚ್ಚಿನ ರೈತರ ಬಾಳಿಗೆ ಮುಳ್ಳಾಗ ಹೊರಟಿದೆ. ಹೊಸ ದರಪಟ್ಟಿ‌ಪ್ರಕಾರ ಡಿಎಪಿ ಗೊಬ್ಬರ ಬೆಲೆ ಏಪ್ರಿಲ್ 1 ರಿಂದ ಪ್ರತಿ ಕ್ವಿಂಟಾಲ್ ಗೆ ರೂ 1,400 ರಷ್ಟು ಹೆಚ್ಚಾಗಿದ್ದು ಇದೂವರೆಗೆ ರೂ 2,400 ಕ್ಕೆ ದೊರಕುತ್ತಿದ್ದ ಗೊಬ್ಬರ ಖರೀದಿಸಲು ರೈತರು ರೂ 3,800 ತೆರಬೇಕಾಗಿದೆ. ಅದೇ ರೀತಿ ಸಾರಜನಕ,ರಂಜಕ ಹಾಗೂ ಪೊಟ್ಯಾಷ್ ಗಳ ಬೆಲೆ ಪ್ರತಿ ಕ್ಷಿಂಟಾಲ್ ಗೆ ರೂ 1,250 ರಷ್ಟು ಹೆಚ್ಚಾಗಿದ್ದು, ರೂ 3,600 ಗೆ ಮುಟ್ಟಿದೆ.

ರಸಗೊಬ್ಬರ ಬೆಲೆ ದಿಢೀರ್ ಹೆಚ್ಚಾಗಲು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಜಾಸ್ತಿಯಾಗಿದೆ ಎಂದು ಸರ್ಕಾರ ಸಬೂಬು ಹೇಳುತ್ತಿದೆ. ಇದು ಅಕ್ಷರಶಃ ಸುಳ್ಳು. ಈ‌ ಬಾರಿಯ ಬಜೆಟ್ ನಲ್ಲಿ 54,417 ಕೋಟಿ ರೂಪಾಯಿಗಳ ಸಬ್ಸಿಡಿಯನ್ನು ಕಡಿಮೆ ಮಾಡಿದೆ. ಕಳೆದ ವರ್ಷ 1,33,947 ಕೋಟಿ ರೂಪಾಯಿಗಳನ್ನು ರಸಗೊಬ್ಬರಕ್ಕಾಗಿ ಸಬ್ಸಿಡಿ ನೀಡಲಾಗಿತ್ತು.

ಕಲಬುರಗಿ: ಅತ್ಯುತ್ತಮ ಡೇಟಾ ಎಂಟ್ರಿ ಆಪರೇಟರ್ ಪ್ರಶಸ್ತಿ ಪ್ರದಾನ

ಈ‌ ವರ್ಷ ಆ ಮೊತ್ತವನ್ನು 79,530 ಕೋಟಿಗೆ ಇಳಿಸಿ ಶೇ 40.62 ರಷ್ಟು ಕಡಿತಗೊಳಿಸಲಾಗಿದೆ. ಈ ಎಲ್ಲದರ ಪರಿಣಾಮ‌ ರಸಗೊಬ್ಬರ ಬೆಲೆ ಏರಿಸಲು ಕಾರಣವಾಗಿದೆ ಎಂದು ಅವರು ಕೇಂದ್ರದ ವಿರುದ್ದ ಹರಿಹಾಯ್ದಿದ್ದಾರೆ.

ಕೇಂದ್ರ ಸರ್ಕಾರದ ದಮನಕಾರ ನೀತಿ ನೋಡಿದರೆ‌ ಇದು ಯಾವ ದೃಷ್ಟಿಯಿಂದಲೂ ಬಡವರ, ರೈತರ, ಹಿಂದುಳಿದವರ, ದಲಿತರ, ಮಹಿಳೆಯರ ಹಾಗೂ ಮಕ್ಕಳ ಪರವಾದ ಸರ್ಕಾರ ಎನಿಸುತ್ತಿಲ್ಲ. ಮೋದಿ ಅವರ ಭಾಷಣಗಳು ಹೂರಣವಿಲ್ಲದ ಹೋಳಿಕೆ ಕಡುಬಿನಂತೆ. ಬರೀ ಸುಳ್ಳುಗಳಿಂದಲೇ ಜನರನ್ನು ಮರುಳು ಮಾಡುತ್ತಿದ್ದು ಮುಗ್ಧ ಜನರು ಕೆಲವೊಮ್ಮೆ ಅವರ ಮಾತನ್ನು ನಂಬಿ ಅಲಂಕಾರಕ್ಕೆ‌ ಬಳಸುವ ಪ್ಲಾಸ್ಟಿಕ್ ಹೂವನ್ನೇ ನಿಜವಾದ ಹೂವು ಎಂದು ನಂಬುತ್ತಿದ್ದಾರೆ. ನನ್ನ ರಾಜಕೀಯ ಜೀವಮಾನದಲ್ಲೇ ಇಂತಹ ಜನದ್ರೋಹಿ ಸರ್ಕಾರವನ್ನು ನೋಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಾರಿಗೆ ನೌಕರರ ಬೇಡಿಕೆ ಈಡೇರಿಸಿ, ವಿದ್ಯಾರ್ಥಿಗಳಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸಲು ಎಸ್ಎಫ್ಐ ಆಗ್ರಹ

ಕೇಂದ್ರದ ವಿರುದ್ದ ಸೊಲ್ಲೆತ್ತದ ಬಿಜೆಪಿ ಸಂಸದರನ್ನು ಕಟುವಾಗಿ‌ ಟೀಕಿಸಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರ ಹಾಗೂ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಬಿಜೆಪಿ ಸಂಸದರು ಗುಲಾಮಿ ಮನಸ್ಥಿತಿಯವರು ಎನ್ನದೇ ವಿಧಿಯಿಲ್ಲ. ಇವರು ರಾಜ್ಯಕಷ್ಟೆ ಅಲ್ಲದೇ ಭೂಮಿಗೆ ಭಾರ. ಈ ದುಷ್ಟ ಬಿಜೆಪಿ ಸರ್ಕಾರವನ್ನು ಮೊದಲು ಕಿತ್ತೆಸೆಯಬೇಕು ಇಲ್ಲದಿದ್ದರೆ ದೇಶದ ಜನರು ಎರಡೊತ್ತಿನ ಊಟಕ್ಕೂ ಪರದಾಡುವಂತೆ ಮಾಡುತ್ತಾರೆ ಎಂದು ಎಚ್ಚರಿಸಿದ್ದಾರೆ.

ದೇಶ ಭೀಕರ ಹತಾಶೆಯಲ್ಲಿದೆ. ದೇಶದ ಎಲ್ಲ ರಂಗಗಳೂ ಮಕಾಡೆ ಮಲಗಿವೆ. ದೇಶದ ಸರ್ಕಾರಿ ಖಜಾನೆ ಖಾಲಿಯಾಗುತ್ತಿದೆ. ಆದರೆ, ಅದಾನಿ, ಅಂಬಾನಿ ಮುಂತಾದವರ ಖಜಾನೆಗಳು ತುಂಬಿ ತುಳುಕುತ್ತಿವೆ. ಕೋವಿಡ್ ಬಿಕ್ಕಟ್ಟಿನಲ್ಲೂ ಅಂತವರ ಸಂಪತ್ತು 12 ಲಕ್ಷ ಕೋಟಿಗೂ ಹೆಚ್ಚು ವೃದ್ಧಿಯಾಗಿದೆ. ಅವರ ಮೇಲೆ ತೆರಿಗೆ ಹಾಕುವ ಬದಲು ಬಡವರ ಅನ್ನದ ತಟ್ಟೆಯ ಮೇಲೆ ಮೋದಿಯರು ಕಣ್ಣು ಹಾಕಿದ್ದಾರೆ.

ಉದ್ಯೋಗ ಖಾತ್ರಿ ಕೆಲಸಗಾರರ ಕನಿಷ್ಠ ದಿನಗೂಲಿ ನೀಡಬೇಕೆಂದು ಪ್ರತಿಭಟನೆ

ದೇಶದ ಪ್ರಜ್ಞಾವಂತರು, ಮಾಧ್ಯಮಗಳು ಇಂಥ ಹೊತ್ತಿನಲ್ಲೂ ಸುಮ್ಮನೆ ಕೂರಬಾರದು. ಹಾಗೆ ಕೂತರೆ ನಮ್ಮ ಮುಂದಿನ ತಲೆಮಾರುಗಳು ನಮ್ಮನ್ನು ಕ್ಷಮಿಸಲಾರವು. ಗ್ಯಾಸ್, ಪೆಟ್ರೋಲ್ ,ಡೀಸೆಲ್ ಎಲ್ಲವುಗಳ ಬೆಲೆ ಗಗನ ಮುಟ್ಟಿದೆ. ಇಂಥ ಸಂದರ್ಭದಲ್ಲಿ ರಸಗೊಬ್ಬರಗಳ ಬೆಲೆ ಹೆಚ್ಚಿಸಲಾಗಿದೆ. ಇದು ರೈತನ ಹೊಟ್ಟೆಯ ಮೇಲೆ ಹಾಕಿದ ಭೀಕರ ಬರೆ. ರಸಗೊಬ್ಬರಗಳ ಬೆಲೆಯೇರಿಕೆಯಂಥ ಜನದ್ರೋಹಿ ನಿರ್ಧಾರವನ್ನು ಈ ಕೂಡಲೇ ವಾಪಸ್ಸು ಹಿಂತೆಗೆದುಕೊಳ್ಳಬೇಕೆಂದು ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

emedialine

Recent Posts

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

2 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

7 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

7 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

9 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

20 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420