ರಮಣಾದೇವಿ ಭವಾನಿ ಜಾತ್ರೆ ರದ್ದು

0
49

ಶಹಾಬಾದ: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರ ಸುರೇಶ ವರ್ಮಾ ಅವರು ಕೈಗೊಂಡ ನಿರ್ಧಾರಕ್ಕೆ ಬದ್ಧರಾಗಿ, ಎಪ್ರಿಲ್ 13, 14, 15 ರಂದು ನಡೆಯಬೇಕಾದ ರಮಣಾದೇವಿ ಭವಾನಿ ಜಾತ್ರಾ ಮಹೋತ್ಸವವನ್ನು ರದ್ದುಪಡಿಸಲಾಗಿದೆ ಎಂದು ಸಾರ್ವಜನಿಕರಲ್ಲಿ ತಿಳಿಯಬಯಸುತ್ತೆನೆ ಎಂದು ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಕಿಶನ್ ನಾಯಕ ಮತ್ತು ಪ್ರಧಾನ ಕಾರ್ಯದರ್ಶಿ ಸುರೇಶ.ಎಮ್.ರಾಠೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ಟ್ರಸ್ಟ್‍ನ ಸದಸ್ಯರೊಂದಿಗೆ ಸಭೆ ನಡೆಸಲಾಗಿದ್ದು, ಸರ್ಕಾರ ಹೊರಡಿಸಿದ ಕೋವಿಡ್-19ನ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ.ಅಲ್ಲದೇ ಸಮಾಜದ ಸ್ವಾಸ್ಥ್ಯ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ.ಇದನ್ನು ಗಮನದಲ್ಲಿಟ್ಟಕೊಂಡು ಜಾತ್ರೆಯ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಸಾರ್ವಜನಿಕರು ಭಕ್ತಾಧಿಗಳು ದೇವಸ್ಥಾನಕ್ಕೆ ಬರಕೂಡದು ಎಂದು ಮನವಿ ಮಾಡಿಕೊಳ್ಳುತ್ತೆವೆ.ಅಲ್ಲದೇ ಭಕ್ತಾಧಿಗಳು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here