ರಾಯಚೂರು ವಿವಿಗೆ ಅನುದಾನ ಬಿಡುಗಡೆಗೆ ಒತ್ತಾಯಿಸಿ ಸಿಎಂಗೆ ಎಸ್ಎಫ್ಐ ಮನವಿ

ರಾಯಚೂರು: ವಿವಿಗೆ ಅನುದಾನ ಬಿಡುಗಡೆ ಮಾಡಿ ವಿವಿ ಬಲಪಡಿಸಬೇಕು, ಬಾಕಿ ಇರುವ ವಿದ್ಯಾರ್ಥಿ ವೇತನ, ಸಂಶೋಧನಾ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಕೊಡಲೇಬೇಕು ಹಾಗೂ ರಾಜ್ಯದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಇದಕ್ಕಾಗಿ ಹಣ ಮೀಸಲಿಡಬೇಕು ಎಂದು ಎಸ್ಎಫ್ಐ ಜಿಲ್ಲಾ ಸಮಿತಿ ಒತ್ತಾಯಿಸಿದರು.

ಇಂದು ಮುದಗಲ್ ಗೆ ಆಗಮಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿ, ೬ ರಿಂದ ೯ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ಮುಚ್ಚಿರುವ ಅವೈಜ್ಞಾನಿಕ ತಿರ್ಮಾನವನ್ನು ಹಿಂಪಡೆದುಕೊಳ್ಳಬೇಕು. 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಪರೀಕ್ಷೆಗಳನ್ನು ನಡೆಸುವುದು ಬೇಡ. ಹಾಗೆಯೇ ಮುಂದಿನ ತರಗತಿಗೆ ಪ್ರಮೋಟ್ ಮಾಡಬೇಕು ಎಂದು ಆಗ್ರಹಿಸಿದರು.

ರಮಣಾದೇವಿ ಭವಾನಿ ಜಾತ್ರೆ ರದ್ದು

ಸಾರಿಗೆ ನೌಕರರ ಮುಷ್ಕರದ ನೆಪದಲ್ಲಿ ಅಕ್ರಮವಾಗಿ , ಇನ್ಸೂರೆನ್ಸ್ ಹಾಗೂ ಲೈಸೆನ್ಸ್ ಇಲ್ಲದ, ಖಾಸಗಿ ಬಸ್ ಗಳು ಓಡಾಟ ನಡೆಸುತ್ತಿವೆ. ಇವುಗಳಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ, ನಾಗರೀಕರ ಜೀವಕೆ ಯಾವುದೇ ಭದ್ರತೆ ಇಲ್ಲವಾಗಿದೆ. ಆದ್ದರಿಂದ ಸರ್ಕಾರಿ ಸಾರಿಗೆ ಸಂಸ್ಥೆಯನ್ನು ಯಾವುದೇ ಕಾರಣಕ್ಕೂ ಸರ್ಕಾರ ಖಾಸಗೀಕರಣಗೊಳಿಸುವ ಜನವಿರೋಧಿ ನೀತಿಗಳನ್ನು ಕೈಬಿಡಬೇಕು ಎಂದು ಈ ಸಂದರ್ಭದಲ್ಲಿ ಸಮಿತಿಯ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಹಾಗೂ ಗ್ರಾಪಂ ಸದಸ್ಯ ರಮೇಶ ವೀರಾಪೂರು, ಎಸ್ಎಫ್ಐ ತಾಲೂಕು ಮುಖಂಡರಾದ ವೀರೇಶ ಎಸ್ ಕುಂಬಾರ್, ಅಮರೇಶ ಈಚನಾಳ, ದೇವರಾಜ್ ಕುಂಬಾರ್, ಶ್ಯಾಮಣ್ಣ, ಡಿವೈಎಫ್ಐ ಮುಖಂಡರಾದ ಶಿವು ಕಪಗಲ್, ಮುತ್ತುರಾಜ್ ಉಪಸ್ಥಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

7 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

7 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

7 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420