ಸೇಡಂ: ಸರಕಾರಿ ಜಿಪಿಎಸ್ ಶಾಲೆಯಲ್ಲಿ ಸ್ನೇಹ ಸಮ್ಮಿಲನ-ಗುರುವಂದನಾ

ಸೇಡಂ: ಇವತ್ತು ವೇದನೆಗೊಳಗಾದರೆ ನಾಳೆ ಸಾಧನೆ ಮಾಡುವುದಕ್ಕೆ ಸಾಧ್ಯ. ವೇದನೆ ಅನುಭವಿಸಿದರೆ ಸಾಧನೆಯ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ, ಸಾಹಿತಿ ಮಹಿಪಾಲರೆಡ್ಡಿ ಮುನ್ನೂರ್ ಹೇಳಿದರು.

ಪಟ್ಟಣದ ಸರಕಾರಿ ಕನ್ಯಾ ಹಿರಿಯ ಪ್ರಾಥಮಿಕ ಶಾಲೆ (ಜಿಪಿಎಸ್) ಯಲ್ಲಿ ಶನಿವಾರ ಬೆಳಿಗ್ಗೆ ಆಯೋಜಿಸಿದ್ದ ೨೦೦೯-೧೦ ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಮತ್ತು ಗುರುವಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇವತ್ತು ಅವಮಾನ, ನಾಳೆ ಸನ್ಮಾನ ಎಂಬುದನ್ನು ಮರೆಯಬಾರದು. ವಿದ್ಯಾರ್ಥಿ ಸಂದರ್ಭದಲ್ಲಿ ಎದೆಗೆ ಅಕ್ಷರದ ಬೀಜ ಬಿತ್ತಿದಕ್ಕಾಗಿಯೇ ಗುರುಗಳನ್ನು ನೆನಪು ಮಾಡಿಕೊಳ್ಳುವುದು. ಕಲಿಸಿದ ಮೇಷ್ಟ್ರುಗಳನ್ನು ಸತ್ಕರಿಸುವ ಮೂಲಕ ಉನ್ನತವಾದ ಸಂಸ್ಕಾರವನ್ನು ಮಾಡಿದ್ದೀರಿ ಎಂದು ಶ್ಲಾಘಿಸಿದರು.

ಕಲಿಸಿದ ಶಾಲಾ ಗುರುಗಳನ್ನು ಎದುರಿಗೆ ಬಂದಾಗ ನೋಡದೇ ಹೋಗುವುದಕ್ಕಿಂತ ಅವರನ್ನು ಗೌರವಿಸುವ ಮೂಲಕ ಮಾದರಿಯಾಗಿದ್ದನ್ನು ಮೆಚ್ಚುಗೆ ವ್ಯಕ್ತಪಡಿಸಿದರು.

ದೃಷ್ಟಿಕೋನ ಬದಲಾವಣೆ ಮಾಡುವುದೇ ಶಿಕ್ಷಣದ ಉದ್ದೇಶ: ಬಡಶೇಷಿ

ಜಿಪಿಎಸ್ ಶಾಲೆಯ ಮುಖ್ಯಗುರು ಶ್ರೀನಿವಾಸರೆಡ್ಡಿ ಶಕಲಾಸಪಲ್ಲಿ ಅಧ್ಯಕ್ಷತೆ ವಹಿಸಿದ್ದರು. ೨೦೦೯-೧೦ ನೇ ಸಾಲಿನಲ್ಲಿ ಜಿಪಿಎಸ್ ಶಾಲೆಯಲ್ಲಿ ಶಿಕ್ಷಕರಾಗಿದ್ದ ಶಿವಪೂಜಮ್ಮ, ತಂಗೆಮ್ಮ, ಸರೋಜಾ ಕುಲಕರ್ಣಿ, ಸುಧಾವತಿ, ಶಾಂತಾಬಾಯಿ, ರಾಜೇಶ್ವರಿ, ಸುಮಂಗಲಾ, ಶಿವಾಜಿ, ಮಹಾದೇವಪ್ಪ, ಈಶ್ವರಮ್ಮ, ಪದ್ಮಾವತಿ, ಮೌನೇಶ, ಮಂಜುಳಾ ಹಾಗೂ ಶಾರೀರಿಕ ಶಿಕ್ಷಕಿ ಸಾಬಮ್ಮ ಅವರಿಗೆ ವಿದ್ಯಾರ್ಥಿಗಳು ಸತ್ಕರಿಸಿದರು.

ಶಿಕ್ಷಕಿ ಶಿವಪೂಜಮ್ಮ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಕರನ್ನು ಮೀರಿಸುವಂತಾಗಬೇಕು. ಉನ್ನತ ಹುದ್ದೆಯಲ್ಲಿ ಕಂಡಾಗ ಆಗುವ ಸಂತೋಷಕ್ಕಿಂತ ಬೇರೊಂದಿಲ್ಲ ಎಂದು ಹೇಳಿ, ತಮ್ಮ ಶಿಷ್ಯ ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆಯಲ್ಲಿ ಕೆಲಸ ಮಾಡುತ್ತಿರುವ ಸಾಗರ್ ಎಂಬಾತನನ್ನು ಸತ್ಕರಿಸಿದರು. ವಿದ್ಯಾರ್ಥಿಗಳಾದ ಪೂಜಾ, ತ್ರಿವಿಕ್ರಮ ಜೋಶಿ, ಪೂಜಾ ನಿಡಗುಂದಾ ಮಾತನಾಡಿ, ಗತಕಾಲದ ನೆನಪುಗಳನ್ನು ಸ್ಮರಿಸಿಕೊಂಡರು. ಪ್ರಾಸ್ತಾವಿಕ ಮಾತನಾಡಿದ ಕಾರ್ಯಕ್ರಮ ಆಯೋಜಕ ಮಹೇಶ ಅಲ್ಲೂರ ಕಾರ್ಯಕ್ರಮ ನಿರೂಪಿಸಿದರು.

ಭವಾನಿ ಪ್ರಾರ್ಥನಾ ಗೀತೆ ಹಾಡಿದರು. ಬಿಸಿಯೂಟದ ಅಡುಗೆ ಮಾಡುವ ಸುಲೋಚನಾ ಅವರನ್ನು ಸನ್ಮಾನಿಸಿದರು. ವಿದ್ಯಾರ್ಥಿಗಳಾದ ಕರಬಸಯ್ಯ, ರಾಹುಲ್, ಬಸ್ಸು, ಉಮೇಶ, ನಾಗರಾಜ್, ಆಕಾಶ್, ಮಲ್ಲು ಪತ್ರಿ, ಶಾಬೋದ್ದಿನ್, ಶ್ರವಣ್, ಶ್ಯಾಮ್, ಮಲ್ಲು, ದೇವು ಪಂಚಾಳ, ದೇವರಾಜ್, ವಸೀಂ ಪಟೇಲ್, ತಮ್ಮಣ್ಣ, ಆಕಾಶ್ ಖಜೂರಿ, ಸಂಜು, ಸುನೀಲ್, ಸಿದ್ದು, ಗಂಗು, ನಾಗರಾಜ ಬೋಳದ, ಶ್ರೀದೇವಿ ಟೆಂಗಳಿ, ಅನ್ನಪೂರ್ಣ, ಪೂಜಾ, ವಾಣಿ, ಸುಜಾತಾ, ಗೀತಾ, ಶೈಲಜಾ, ಶ್ರೀಕಾಂತ ಇತರರಿದ್ದರು. ಇದೇ ಸಂದರ್ಭದಲ್ಲಿ ಎಲ್ಲ ವಿದ್ಯಾರ್ಥಿಗಳು ಜಿಪಿಎಸ್ ಶಾಲೆಗೆ ಅಲ್‌ಮಾರಾವನ್ನು ಕೊಡುಗೆಯಾಗಿ ನೀಡಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

3 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

6 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

6 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

6 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420