ಬಿಸಿ ಬಿಸಿ ಸುದ್ದಿ

30 ಲಕ್ಷ ರೈತರಿಗೆ ಸಾಲ ನೀಡುವ ಗುರಿ: ಸಚಿವ ಸೋಮಶೇಖರ

ಕಲಬುರಗಿ: ವಿವಿಧ ಕಾರಣದಿಂದ ನಿಷ್ಕ್ರೀಯ ಹಂತದಲ್ಲಿದ್ದ ಕಲಬುರಗಿ ಡಿ.ಸಿ.ಸಿ ಬ್ಯಾಂಕಿಗೆ ರಾಜ್ಯ ಸರ್ಕಾರವು ೧೦ ಕೋಟಿ ರೂ. ಶೇರು ಹಣ ನೀಡಿದ್ದು, ಬ್ಯಾಂಕ್ ಪುನಶ್ಚೇತನಕ್ಕೆ ರಾಜ್ಯ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ರವಿವಾರ ಕಲಬುರಗಿ ನಗರದ ಗ್ರ್ಯಾಂಡ್ ಹೋಟೆಲ್‌ನಲ್ಲಿ ಕರೆಯಲಾದ ಸಚಿವರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಡಿ.ಸಿ.ಸಿ. ಬ್ಯಾಂಕಿಗೆ ಅಪೆಕ್ಸ್ ಬ್ಯಾಂಕ್ ಕೂಡ ೨೦೦ ಕೋಟಿ ರೂ. ಸಾಲ ನೀಡಲು ಒಪ್ಪಿಗೆ ಸೂಚಿಸಿದೆ ಎಂದರು.

ಕಲಬುರಗಿ ಡಿ.ಸಿ.ಸಿ ಬ್ಯಾಂಕಿನ ಪ್ರಸ್ತುತ ಆಡಳಿತ ಮಂಡಳಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಇದರ ಪರಿಣಾಮ ೧೮೭ ಕೋಟಿ ರೂ. ಸಾಲ ವಸೂಲಾತಿಯಾಗಿದೆ. ಕಲಬುರಗಿ ಸೇರಿದಂತೆ ರಾಜ್ಯದ ೨೧ ಡಿ.ಸಿ.ಸಿ. ಬ್ಯಾಂಕ್ ಗಳನ್ನು ಪುನಶ್ಚೇತನಕ್ಕೆ ಸರ್ಕಾರದ ಬದ್ಧವಿದೆ ಎಂದರು.

ರಸಗೊಬ್ಬರ ದರ ಹೆಚ್ಚಳ ಹಿನ್ನೆಲೆ: ಕೇಂದ್ರ ರಾಸಾಯನಿಕ ಸಚಿವರ ನೇತೃತ್ವದಲ್ಲಿ ಸಭೆ: ಬಿ.ಸಿ.ಪಾಟೀಲ

ರಾಜ್ಯ ಸರ್ಕಾರವೇ ಡಿ.ಸಿ.ಸಿ ಬ್ಯಾಂಕಿಗೆ ೩೦೦ ಕೋಟಿ ರೂ. ಹೆಚ್ಚುವರಿ ಸಾಲ ನೀಡುವ ಮೂಲಕ ಬ್ಯಾಂಕಿಗೆ ಆರ್ಥಿಕ ಬಲ ನೀಡಬೇಕು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು ಬ್ಯಾಂಕ್ ಬೇಡಿಕೆ ಅನುಗುಣವಾಗಿ ಹಂತ ಹಂತವಾಗಿ ರಾಜ್ಯ ಸರ್ಕಾರದಿಂದ ಹಣ ನೀಡಲಾಗುವುದು ಎಂದರು.

೩೦ ಲಕ್ಷ ರೈತರಿಗೆ ಸಾಲ ನೀಡುವ ಗುರಿ: ಪ್ರಸಕ್ತ ಮುಂಗಾರು ಹಂಗಾಮಿಗೆ ರಾಜ್ಯದ ೩೦ ಲಕ್ಷ ರೈತರಿಗೆ ಸುಮಾರು ೨೦ ಸಾವಿರ ಕೋಟಿ ರೂ. ಡಿ.ಸಿ.ಸಿ. ಬ್ಯಾಂಕುಗಳಿಂದ ಸಾಲ ನೀಡುವ ಗುರಿ ಹೊಂದಿದೆ ಎಂದು ಸಹಕಾರ ಸಚಿವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಮೂಲಸೌಕರ್ಯ, ಹಜ್ ಮತ್ತು ವಕ್ಫ್ ಸಚಿವ ಆನಂದ್ ಸಿಂಗ್ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಅರ್. ನಿರಾಣಿ ಇದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

1 hour ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago