ಕಲಬುರಗಿ: ರಾಜ್ಯ ರಸ್ತೆ ಸಾರಿಗೆ ನೌಕರರು ನಡೆಸುತ್ತಿರುವ ಅನಧಿಕೃತ ಮು?ರವನ್ನು ಕೈಬಿಟ್ಟು ಕೆಲಸಕ್ಕೆ ವಾಪಸ್ ಬರಬೇಕು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಸಾರಿಗೆ ನೌಕರರಲ್ಲಿ ಮನವಿ ಮಾಡಿದ್ದಾರೆ.
ರವಿವಾರ ಇಲ್ಲಿನ ಗ್ರಾಂಡ್ ಹೋಟೆಲ್ನಲ್ಲಿ ಕರೆಯಲಾದ ಜಂಟಿ ಸಚಿವರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಕಾರ್ಮಿಕ ಆಯುಕ್ತರಲ್ಲಿ ಮು?ರಕ್ಕೆ ಮಾನ್ಯತೆ ನೀಡುವಂತೆ ಕಾರ್ಮಿಕ ಸಂಘಟನೆ ಮನವಿ ಸಲ್ಲಿಸಿತು. ಈ ಕುರಿತು ಕಾರ್ಮಿಕ ಸಂಘಟನೆಯ ಬೈಲಾವನ್ನು ಪರಿಶೀಲಿಸಲಾಗಿ, ಇದು ಅನಧಿಕೃತ ಮು?ರವಾಗಿದೆ ಎಂದು ಕಾರ್ಮಿಕ ಇಲಾಖೆಯು ಈಗಾಗಲೇ ವ್ಯಾಜ್ಯ ಇತ್ಯರ್ಥಪಡಿಸಿದೆ ಎಂದರು.
ಸಾರಿಗೆ ನೌಕರರ ೯ ಪ್ರಮುಖ ಬೇಡಿಕೆಯಲ್ಲಿ ೮ ಬೇಡಿಕೆಗಳನ್ನು ಈಗಾಗಲೇ ಸರ್ಕಾರ ಈಡೇರಿಸಿದೆ. ವೇತನ ಹೆಚ್ಚಳ ಕುರಿತಂತೆ ಚುನಾವಣೆ ನೀತಿ ಸಂಹಿತೆ ಅಡ್ಡ ಇರುವುದರಿಂದ ಪ್ರಸ್ತುತ ಅದು ಸಾಧ್ಯವಿಲ್ಲ. ಸಾರಿಗೆ ನೌಕರರು ೬ನೇ ವೇತನ ಜಾರಿಗೆ ಮತ್ತು ಸರ್ಕಾರಿ ನೌಕರರನ್ನಾಗಿ ಪರಿಗಣನೆಗೆ ಪಟ್ಟು ಹಿಡಿದಿದ್ದು, ಇದು ಕಾರ್ಯಸಾಧುವಲ್ಲ ಎಂದು ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರು ಈಗಾಗಲೆ ಸ್ಪಷ್ಟಪಡಿಸಿದ್ದಾರೆ. ಸಾರಿಗೆ ನಿಗಮ ಹೊರತುಪಡಿಸಿ ರಾಜ್ಯದಲ್ಲಿ ಇದೇ ಮಾದರಿಯ ಬಹಳಷ್ಟು ನಿಗಮಗಳಿವೆ. ಎಲ್ಲರನ್ನು ಸರಕಾರಿ ನೌಕರರನಾಗಿ ಪರಿಗಣಿಸುವುದು ಅಸಾಧ್ಯ ಎಂದ ಶಿವರಾಮ ಹೆಬ್ಬಾರ್ ಅವರು ನೌಕರರ ಮುಷ್ಕರದಿಂದ ಸಾರಿಗೆ ಸಂಸ್ಥೆಗೆ ೩೮೦೦ ಕೋಟಿ ರೂ. ನಷ್ಠವಿದೆ ಎಂದರು.
ರೈತರು ಆಧುನಿಕ ಕೃಷಿ ಪದ್ಧತಿಯನ್ನು ಅಳವಡಿಸಕೊಳ್ಳಬೇಕು: ಪ್ರೋ: ಶ್ಯಾಮರಾವ್ ಕುಲಕರ್ಣಿ
ಸಿಮೆಂಟ್ ಕಾರ್ಖಾನೆಯಲ್ಲಿ ಕಾರ್ಮಿಕರಿಗೆ ಅನಗತ್ಯ ತೊಂದರೆ ನೀಡಲಾಗುತ್ತಿದೆ ಎಂಬ ದೂರುಗಳು ಬಂದಿದ್ದು, ಈ ಸಂಬಂಧ ಈಗಾಗಲೇ ಅಧಿಕಾರಿಗಳಿಂದ ವರದಿ ತರಿಸಿಕೊಂಡಿದ್ದೇನೆ. ಕಾರ್ಮಿಕ ಸಂಘಟನೆಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಲಾಗುವುದು. ಯಾವುದೇ ರೀತಿಯಲ್ಲಿ ಕಾರ್ಮಿಕರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು. ಕಾರ್ಮಿಕರ ಹಿತ ಕಾಯುವುದೇ ಇಲಾಖೆಯ ಪ್ರಥಮ ಆದ್ಯತೆಯಾಗಿದ್ದು, ಉದ್ದಿಮೆಯೂ ಬೆಳೆಯಬೇಕಿದೆ. ಒಟ್ಟಿನಲ್ಲಿ ಸಮತೋಲನದಿಂದ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.
ಕಳೆದ ಒಂದು ವ?ದ ಅವಧಿಯಲ್ಲಿ ರಾಜ್ಯದಲ್ಲಿ ಕಾರ್ಮಿಕ ಕ್ಷೇತ್ರಗಳಲ್ಲಿಯೇ ೭ ಸುಧಾರಣೆಗಳನ್ನು ತರಲಾಗಿದೆ. ಇಡೀ ದೇಶದಲ್ಲಿ ಮಾದರಿಯಾಗಿ ೨೪ ಗಂಟೆಗಳ ಕಾಲ ಮಹಿಳೆಯರು ಸಹ ಕೆಲಸ ನಿರ್ವಹಿಸಲು ಅವಕಾಶ ನೀಡಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ, ಕೃಷಿ ಸಚಿವ ಬಿ.ಸಿ.ಪಾಟೀಲ, ಮೂಲಸೌಕರ್ಯ, ಹಜ್ ಮತ್ತು ವಕ್ಫ್ ಸಚಿವ ಆನಂದ್ ಸಿಂಗ್ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಅರ್. ನಿರಾಣಿ ಇದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…