ಮಹಾಮಾರಿ ಕೋವಿಡ್ ಎಚ್ಚರಿಕೆ ಪಾಲಿಸಿ: ಲಕ್ಷ್ಮಣ ದಸ್ತಿ

0
61

ಕಲಬುರಗಿ: ಜಗತ್ತನ್ನೇ ತಳ್ಳಣಗೊಳಿಸಿರುವ ಮಹಾಮಾರಿ ಕೊರೊನಾ ಸೋಂಕಿನಿಂದ ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಬೀದರ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ದೇಶಮುಖ ಅವರ ಪತ್ನಿ  ನಿರ್ಮಲಾ ಅಶೋಕ ದೇಶಮುಖ ಅವರು ನಿಧನರಾಗಿದ್ದು ಅವರ ನಿಧನಕ್ಕೆ ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ವತಿಯಿಂದ ಶೋಕಾಚರಣೆ ಮಾಡಲಾಯಿತು.

ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ, ಲಿಂಗರಾಜ ಸಿರಗಾಪೂರ, ಸಿದ್ರಾಮ, ಮಂಜುನಾಥ ಸಿರಗಾಪೂರ, ಭೀಮಶಾ, ಕಾವೇರಿ ಘಾಟೆ ಉಪಸ್ಥಿತರಿದ್ದರು.

Contact Your\'s Advertisement; 9902492681

ಮಹಾಮಾರಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ,ಜನರು ತಮ್ಮ ಕುಟುಂಬದ ಬಗ್ಗೆ ಕಾಳಜಿ ವಹಿಸಬೇಕು.ಅದರಲ್ಲೂ ವಿಶೇಷವಾಗಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡ ಹೋರಾಟಗಾರರು ಸೇರಿದಂತೆ ಎಲ್ಲಾ ಕ್ಷೇತ್ರದ ಗಣ್ಯರು, ಕಾರ್ಯಕರ್ತರು ಎಚ್ಚರಿಕೆಯಿಂದ ಇರಬೇಕು.

ಸಾಮಾಜಿಕ ಅಂತರ ಕಾಪಾಡಿಕೊಂಡು ವ್ಯವಹಾರ ಮಾಡಬೇಕು. ಹೊರಗೆ ಹೋಗುವಾಗ ಮಾಸ್ಕ್ ಧರಿಸಬೇಕು ಎಂದು ಲಕ್ಷ್ಮಣ ದಸ್ತಿ ಅವರು ಮನವಿ ಮಾಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here