ಜನದ್ರೋಹಿ ಪ್ರತಾಪ್‌ ಗೌಡ ಪಾಟೀಲ್ ರನ್ನು ಸೋಲಿಸಿ ಪ್ರಜಾಪ್ರಭುತ್ವ ಉಳಿಸಿ: ಶಿವಕುಮಾರ ಮ್ಯಾಗಳಮನಿ

ಕವಿತಾಳ : ಮಸ್ಕಿ ತಾಲೂಕಿನ ಬಹುದಿನಗಳ ಬೇಡಿಕೆ ಹಾಗೂ ಮಸ್ಕಿ ತಾಲ್ಲೂಕಿನ 58 ಹಳ್ಳಿಗಳ ರೈತಾಪಿ ವರ್ಗದ ಜೀವನಾಡಿಯಾದ NRBC5A ನಾಲಾ ಯೋಜನೆ ಯನ್ನು ಜಾರಿ ಮಾಡುವಲ್ಲಿ ವಿಫಲವಾದ ಹಾಗೂ ರೈತರ ಹೋರಾಟ ವನ್ನು ನಿರ್ಲಕ್ಷ್ಯ ಮಾಡಿದ ಅನರ್ಹ ಮಾಜಿ ಶಾಸಕ ಪ್ರತಾಪಗೌಡ ಪಾಟೀಲರನ್ನು ಸೋಲಿಸಲು ಹಾಗೂ ಪ್ರಜಾಪ್ರಭುತ್ವ ವನ್ನು ಎತ್ತಿ ಹಿಡಿಯಲು ಮತ ಜಾಗೃತಿ ಕಾರ್ಯಕ್ರಮ ವನ್ನು ನಾಲಾ ಹೋರಾಟ ಸಮಿತಿ ಯಿಂದ ಯೋಜನೆ ವ್ಯಾಪ್ತಿಯ ವಟಗಲ್, ಅಮೀನಗಡ, ಪಾಮನಕಲ್ಲೂರು, ಯಕ್ಲಾಸಾಪುರ ಸೇರಿ ಇತರ ಗ್ರಾಮಗಳಲ್ಲಿ ಜಾಥಾ ಮಾಡಲಾಯಿತು.

ಈ ಜಾಗೃತಿ ಜಾಥ ಕಾರ್ಯಕ್ರಮ ವನ್ನು ಉದ್ದೇಶಿಸಿ SFI ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ ಮಾತನಾಡಿ ಕಳೆದ 13 ವರ್ಷಗಳಿಂದ ಆಡಳಿತ ಮಾಡಿದ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ರು ಜನತೆಯ ಆಶೋತ್ತರಗಳನ್ನು ಮತ್ತು ಬೇಡಿಕೆಗಳನ್ನು ಗಾಳಿಗೆ ತೂರಿ ಸ್ವಾರ್ಥಕ್ಕಾಗಿ ಪಕ್ಷ ಬದಲಾಯಿಸಿ ಈಗ ನೈತಿಕತೆಯನ್ನು ಮೀರಿ ಮತ್ತೊಮ್ಮೆ ಚುನಾವಣೆಗೆ ಮುಂದಾಗಿದ್ದಾರೆ.

ಸೋಲಿನ ಹತಾಶೆಗೆ ಒಳಗಾಗಿ ಇಡೀ ರಾಜ್ಯ ಸರ್ಕಾರವನ್ನು ಮಸ್ಕಿಗೆ ಕರೆಯಿಸಿಕೊಂಡು ಗೆಲ್ಲಲು ಶತ ಪ್ರಯತ್ನ ಮಾಡುತ್ತಿದ್ದಾರೆ ಜೊತೆಗೆ ಹಣದ ಹೊಳೆಯನ್ನು ಹರಿಸಿ ಜನತೆಗೆ ಮತ್ತು ಪ್ರಜಾಪ್ರಭುತ್ವ ಕ್ಕೆ ಅಪಮಾನ ಮಾಡಲು ಮುಂದಾಗಿದ್ದಾರೆ ಜನತೆ ಯಾವುದೇ ಅಮೀಷಕ್ಕೆ ಒಳಗಾಗದೆ ವಿರುದ್ಧ ಮತ ಚಲಾವಣೆ ಮಾಡಿ ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಿ ಜನತೆಯ ಶಕ್ತಿಯನ್ನು ಎತ್ತಿ ತೋರಿಸಬೇಕೆಂದು ಹೇಳಿದರು.

ನಂತರ ಹೋರಾಟ ಸಮಿತಿಯ ಕಾರ್ಯದರ್ಶಿ ನಾಗರೆಡ್ಡೆಪ್ಪ ದೇವರಮನಿ ಮಾತನಾಡಿ 13 ವರ್ಷಗಳ ಹೋರಾಟಕ್ಕೆ ಸ್ಪಂದಿಸದೆ ಪ್ರತಾಪಗೌಡ ಪಾಟೀಲ್ ರನ್ನು ಮನೆಗೆ ಕಳುಹಿಸುವ ಸಮಯ ಬಂದಿದೆ ಕಳುಹಿಸಿ ಎಂದರು.

ನಂತರ ಮಾತನಾಡಿದ ಮತ್ತೊಬ್ಬ ಹೋರಾಟ ಗಾರರಾದ ಮಹಾಂತೇಶ್ ಪಾಟೀಲ್ ಮಾತನಾಡಿ ಪ್ರತಾಪಗೌಡ ಹಾಠವೋ ಮಸ್ಕಿ ಬಚಾವೋ ರೀತಿಯಲ್ಲಿ ಈ ಚುನಾವಣೆ ಯನ್ನು ಎದುರಿಸಿ ಮುಟ್ಟಿ ನೋಡಿಕೊಳ್ಳುವಂತೆ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಗೌರಧ್ಯಕ್ಷರಾದ ತಿಮ್ಮನಗೌಡ ಚಿಲ್ಕರಾಗಿ, ಅಧ್ಯಕ್ಷರಾದ ಬಸವರಾಜ ಹಾರ್ವಾಪುರ, ಕಾರ್ಯದರ್ಶಿ ಶಿವನಗೌಡ ವಟಗಲ್, ಮೊಹಮ್ಮದ್ ರಫಿ, ವೆಂಕಟೇಶ, ಅಯ್ಯಣ್ಣ ಸೇರಿದಂತೆ ಅನೇಕರಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

4 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

7 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

11 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

12 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

14 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420