ಬಿಸಿ ಬಿಸಿ ಸುದ್ದಿ

ಅಂಬೇಡ್ಕರ್ ಅರಿವಿನ ಪ್ರತೀಕ: ಕಾಶೀನಾಥ್

ವಾಡಿ: ಸಮಾಜದ ಕೆಲ ವರ್ಗಗಳ ಮೇಲೆ ಶಾಸ್ತ್ರಗಳು ಹೇರಲ್ಪಟ್ಟ ನಿರ್ಭಂಧನೆಗಲಳು ಭಾರತೀಯ ಸಮಾಜದ ಬದುಕನ್ನೇ ನುಂಗಿ ಹಾಕಿತ್ತು. ಸಾವಿರಾರು ವರ್ಷಗಳಿಂದ ಜಾರಿಯಲ್ಲಿದ್ದ ಈ ಅಮಾನವೀಯ ಕಟ್ಟಳೆಗಳನ್ನು ಪ್ರಶ್ನಿಸಲಾಗದೆ ಗುಲಾಮಗಿರಿಯನ್ನು ಸಹಿಸಿಕೊಂಡ ಜನಾಂಗಕ್ಕೆ ಬಾಬಾಸಾಹೇಬ್ ಅಂಬೇಡ್ಕರ್ ಅವರು ಅರಿವು ನೀಡಿ ಮೈ ಕೊಡವಿ ಎದ್ದುನಿಲ್ಲುವಂತೆ ಮಾಡಿದ್ದು ಬಹುದೊಡ್ಡ ಸಾಮಾಜಿಕ ಕ್ರಾಂತಿ ಎಂದು ಯುವ ಸಾಹಿತಿ ಕಾಶೀನಾಥ್ ಹಿಂದಿನ್ಕೇರಿ ಅಭಿಪ್ರಾಯಪಟ್ಟರು.

ಸಮೀಪದ ಇಂಗಳಗಿ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ಹಮ್ಮಿಕೊಂಡಿದ್ದ ಡಾ. ಅಂಬೇಡ್ಕರ್ ಅವರ 130 ನೇ ಜನ್ಮದಿನಾಚರಣೆ ಉದ್ದೇಶಿಸಿ ಅವರು ಮಾತನಾಡುತ್ತ, ಅಂಬೇಡ್ಕರ್ ಈ ದೇಶ ಕಂಡ ಮಹಾನ್ ದಾರ್ಶನಿಕರು. ಅವರ ಸಂಪೂರ್ಣ ವ್ಯಕ್ತಿತ್ವ ಅರಿಯದೇ ಕೇವಲ ಜನಾಂಗವೊಂದರ ನಾಯಕ ಎನ್ನುವಂತೆ ಬಿಂಬಿಸುತ್ತಿರುವುದು ವಿಷಾದಕರ ಎಂದರು.

ಇತ್ತೀಚೆಗೆ ಪಿಹೆಚ್ ಡಿ ಪದವಿ ಪಡೆದ ಗ್ರಾಮದ ಮೊದಲ ಡಾಕ್ಟರೇಟ್ ಪದವೀಧರ ಸಾಯಬಣ್ಣ ಗುಡುಬಾ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಗುಡುಬಾ ಶಿಕ್ಷಣದ ಮಹತ್ವವೇ ಗೊತ್ತಿಲ್ಲದ ನನಗೆ ಮಾರ್ಗದರ್ಶನ ಮಾಡಿ ಶಾಲೆಯಿಂದ ವಿಶ್ವವಿದ್ಯಾಲಯದ ವರೆಗೆ ತಲುಪುವಂತೆ ಮಾಡಿದ ಶಿಕ್ಷಣ ಪ್ರೇಮಿ ಸುಭಾಶ್ಚಂದ್ರ ಯಾಮೇರ್ ಅವರ ಸಾಮಾಜಿಕ ಕಳಕಳಿ ಮಾದರಿಯಾಗಿದೆ. ಅಂಬೇಡ್ಕರ್ ಅವರ ಅರಿವಿನ ಬೆಳಕಲ್ಲಿ ನಮ್ಮ ಬದುಕು ಕಟ್ಟಿಕೊಳ್ಳಬೇಕಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರೂ ಆಗಿರುವ ಸುಭಾಶ್ಚಂದ್ರ ಯಾಮೇರ್ ಮಾತನಾಡಿ ಜಡಗೊಂಡಿದ್ದ ಭಾರತೀಯ ಸಮಾಜಕ್ಕೆ ಚೈತನ್ಯ ತುಂಬಿರುವ ಅಂಬೇಡ್ಕರ್ ಆಧುನಿಕ ಭಾರತದ ಶಿಲ್ಪಿಗಳಾಗಿದ್ದಾರೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯ ಕಾಶೀನಾಥ್ ಚನ್ನಗುಂಡ ಮಾತನಾಡಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಸವರಾಜ ಸ್ಥಾವರಮಠ, ಸದಸ್ಯರಾದ ಅಣ್ಣಾರಾವ ಪಾಟೀಲ, ಶರಣು ರಾವೂರ್, ಮಲ್ಲು ಸಾಹುಕಾರ್ ವಡಗಾಂವ್, ಮಲ್ಲು ಸೀಮಿ, ಮಲ್ಲಪ್ಪ ನಾಟೇಕರ್, ವೆಂಕಟಗಿರಿ ಕಟ್ಟಿಮನಿ, ದಾದಾರಾವ್ ಬೋವಿ, ಕರ್ನಾಟಕ ಪ್ರಾಂತ ರೈತ ಸಂಘದ ಶೇಕಮ್ಮ ಕುರಿ, ಗ್ರಾಮಾಭಿವೃದ್ಧಿ ಅಧಿಕಾರಿ ರೇಷ್ಮಾ ಕೊತ್ವಾಲ್, ಮಾಳಿಂಗರಾಯ ಹಿಂದಿನಕೇರಿ, ನಬಿ ಪಠಾಣ್, ಶ್ರೀಶೈಲ ನಾಟೇಕರ್, ಗ್ರಾಮ ಪಂಚಾಯಿತಿ ಸಿಬ್ಬಂದಿ. ಹಾಗೂ ನರೇಗ ಕಾಯಕ ಬಂಧುಗಳು ಮತ್ತಿತರರು ಭಾಗವಹಿಸಿದ್ದರು. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶ್ರೀಶೈಲ ಕೊಟ್ಟರಕಿ ನಿರೂಪಿಸಿದರು. ಸದಸ್ಯ ಖದೀರ್ ಪಟೇಲ್ ಸ್ವಾಗತಿಸಿದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

9 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

9 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

11 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

11 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

11 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

12 hours ago