ಸುರಪುರ: ಡಾ. ಬಿ.ಆರ್.ಅಂಬೇಡ್ಕರರ ೧೩೦ನೇ ಜಯಂತಿ ಆಚರಣೆ

ಸುರಪುರ: ನಗರದ ಮಹರ್ಷಿ ವಾಲ್ಮೀಕಿ ಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಸಂವಿದಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಜಯಂತಿ ಅಚರಿಸಲಾಯಿತು.ನಗರಸಭೆ ಅಧ್ಯಕ್ಷೆ ಸುಜಾತಾ ವೇಣುಗೋಪಾಲ ಜೇವರ್ಗಿಯವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸಕ ಶರಣು ಅರಕೇರಿ ಮಾತನಾಡಿ, ಸ್ವಾತಂತ್ರ್ಯ ದೊರಕಿದ ನಂತರ ಇಡಿ ಜಗತ್ತಿಗೆ ಮಾದರಿ ಮತ್ತು ಸರ್ವ ಶ್ರೇಷ್ಠ ಸಂವಿದಾನವನ್ನು ನಮ್ಮ ದೇಶಕ್ಕೆ ನೀಡಿ ಎಲ್ಲಾ ವರ್ಗದ ಜನರಿಗೆ ಮತ್ತಯ ವಿಶೇಷವಾಗಿ ಶೋಷಿತ ಸಮುದಾಯಗಳಿಗೆ ಬದುಕನ್ನು ರೂಪಿಸಲು ನೇರವು ನೀಡಿದ ಮಹಾ ವ್ಯಕ್ತಿ ಡಾ.ಬಿ.ಆರ್. ಅಂಬೇಡ್ಕರ್ ರವರು ಎಂದರು.

ಸುರಪುರ: ವಿವಿಧೆಡೆ ಡಾ. ಬಿ.ಆರ್. ಅಂಬೇಡ್ಕರರ ಜಯಂತಿ ಆಚರಣೆ

ಇದೇ ಸಂದರ್ಭದಲ್ಲಿ ಮತ್ತೋರ್ವ ಉಪನ್ಯಾಸಕರಾಗಿ ಆಗಮಿಸಿದ್ದ ಹಣಮಂತ ಪೋದನಕರ್ ಕಲಬುರ್ಗಿಯವರು ಮಾತನಾಡಿ, ಅಂಬೇಡ್ಕರ್ ಒಂದು ಜಾತಿಗೆ ಸೀಮಿತವಾಗಿಲ್ಲ ಒಂದೇ ಜಾತಿಗೋಸ್ಕರ ಅವರು ಕೆಲಸ ಮಾಡಿಲ್ಲ. ದೇಶದ ಪ್ರತಿಯೊಬ್ಬ ಜನತೆಯ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ್ದಾರೆ.ಆದರೆ ಅಂಬೇಡ್ಕರರ ಕೇವಲ ದಲಿತ ಸಮುದಾಯಕ್ಕಾಗಿ ಮಾತ್ರ ಸಂವಿಧಾನ ಬರೆದಿದ್ದಾರೆ ಎಂಬಂತೆ ಕೆಲವರು ಬಿಂಬಿಸುತ್ತಾರೆ,ಆದರೆ ಸಂವಿಧಾನ ದೇಶದ ಎಲ್ಲರ ಏಳಿಗೆಯನ್ನು ಒಳಗೊಂಡಿದೆ ಎಂದರು.

ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿಯವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.ಇದಕ್ಕೂ ಮುನ್ನ ಬೆಳಿಗ್ಗೆ ನಗರದ ಬಸ್ ನಿಲ್ದಾಣ ಬಳಿಯಲ್ಲಿನ ಡಾ:ಬಿ.ಆರ್.ಅಂಬೇಡ್ಕರರ ಪುತ್ಥಳಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು. ನಂತರ ನಡೆದ ಕಾರ್ಯಕ್ರಮದ ವೇದಿಕೆ ಮೇಲೆ ಗ್ರೇಡ್-೨ ತಹಸೀಲ್ದಾರ ಸೋಫಿಯಾ ಸುಲ್ತಾನ್, ನಗರಸಭೆ ಉಪಾಧ್ಯಕ್ಷ ಮಹೇಶ್ ಪಾಟೀಲ್, ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ,ತಾಲೂಕು ಪಂಚಾಯತಿ ಇಒ ಅಂಬ್ರೇಶ, ಸಮಾಜ ಕಲ್ಯಾಣ ಅಧಿಕಾರಿ ಸತ್ಯನಾರಾಯಣ ದರಬಾರಿ, ಪೌರಾಯುಕ್ತ ಜೀವನ್ ಕುಮಾರ್ ಕಟ್ಟಿಮನಿ, ಬಿಇಒ ಮಹಾದೇವ ರೆಡ್ಡಿ, ದಲಿತ ಸಂಘಟನೆಗಳ ಮುಖಂಡರುಗಳಾದ ಮಾನಪ್ಪ ಕಟ್ಟಿಮನಿ ಮಾಳಪ್ಪ ಕಿರದಹಳ್ಳಿ ರಮೇಶ ಅರಕೇರಿ ತಿಪ್ಪಣ್ಣ ಶೆಳ್ಳಗಿ ಶ್ರೀಮಂತ ಚಲುವಾದಿ ಜೆಟ್ಟೆಪ್ಪ ನಾಗರಾಳ ರಾಜು ಶಖಾಪುರ ಶರಣಪ್ಪ ತಳವಾರಗೇರಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ತಹಸೀಲ್ ಕಚೇರಿಯ ಸಿಬ್ಬಂದಿಗಳು ಸೇರಿದಂತೆ ಅನೇಕರಿದ್ದರು.

ಪಾರ್ಧಿ ಸಮುದಾಯದೊಂದಿಗೆ ಭೀಮ್ ಜಯಂತಿ

ಆರಂಭದಲ್ಲಿ ಶಿಕ್ಷಕ ಮಹಾಂತೇಶ ಗೋನಾಲ ಸ್ವರಚಿತ ಅಂಬೇಡ್ಕರರ ಹಾಡು ಎಲ್ಲರ ಗಮನ ಸೆಳೆಯಿತು,ರಾಜಶೇಖರ ದೇಸಾಯಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

emedialine

Recent Posts

ಅಜ್ಞಾನವೆಂಬ ಕತ್ತಲಿನಿಂದ ಜ್ಞಾನದ ಬೆಳಿಕಿನಡೆಗೆ ಕರೆದೊಯ್ಯುವ ಜ್ಯೋತಿಯೇ ಶಿಕ್ಷಕ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ಶಿಕ್ಷಕರ ದಿನಾಚರಣೆಯ ನಿಮಿತ್ತವಾಗಿ ಬುಧವಾರ ಗೆಳೆಯರ ಬಳಗದ ವತಿಯಿಂದ…

6 hours ago

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಗಮನ ಸೆಳೆದ ಚೇತನ ಬಿ.ಕೋಬಾಳ್ ಸಂಗೀತ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ( ಸಮಾಜ ಕಲ್ಯಾಣ ಇಲಾಖೆ…

15 hours ago

15ರಂದು ಮಾನವ ಸರಪಳಿ: ನಾಳೆ ಪೂರ್ವ ಭಾವಿ ಸಭೆ

ಶಹಾಬಾದ :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ತಾಲೂಕಿನ ಪ್ರೌಢಶಾಲಾ ಮುಖ್ಯ…

16 hours ago

ಸೆಪ್ಟೆಂಬರ್ 17ರಂದು ವಿಮೋಚನಾ ದಿನ ರದ್ದುಪಡಿಸಿ, ಪ್ರಜಾಸತ್ತಾತ್ಮಕ ದಿನ ಆಚರಿಸಿ: ಕೆ ನೀಲಾ

ಕಲಬುರಗಿ: ಹೈದ್ರಾಬಾದ್ ಕರ್ನಾಟಕದಲ್ಲಿ ಸೆಪ್ಟೆಂಬರ್ 17 ರಂದು ಆಚರಿಸಲಾಗುತ್ತಿರುವ ವಿಮೋಚನಾ ದಿನವಲ್ಲ, ಅದು ವಿಲೀನಿಕರಣದ ಅಥವಾ ಪ್ರಜಾಸತ್ತಾತ್ಮಕ ದಿನವಾಗಿದ್ದು, ವಿಮೋಚನಾ…

16 hours ago

ಸಮಿತಿಗಳ ಕಾರ್ಯ ಪರಾಮರ್ಶಿಸಿದ ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ

ಕಲಬುರಗಿ; ಕಲಬುರಗಿಯಲ್ಲಿ ಇದೇ ಸೆ.17 ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದ್ದರಿಂದ ಸಭೆ ಯಶಸ್ಸಿಗೆ ರಚಿಸಲಾಗಿರುವ ವಿವಿಧ ಸಮಿತಿಗಳ…

19 hours ago

SC/STಗೆ ಪಾಲಿಕೆಯಿಂದ ವಿತರಣೆಯಾಗದ ಸಂಸ್ಕೃತಿ ಸಮಾಗ್ರಿ: ಸಚಿನ ಶಿರವಾಳ ಬೇಸರ

ಕಲಬುರಗಿ: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಮುದಾಯದ ಫಲಾನುಭವಿಗಳಿಗೆ ವಿತರಿಸಬೇಕಾಗಿರುವ ಸಾಮಗ್ರಿಗಳಾದ ಕ್ರಿಕೆಟ್ ಸೈಟ್‍ ಗಳಾದ, ಬ್ಯಾಂಡ್ ಸೆಟ್‍ಗಳು ಮತ್ತು…

19 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420