ಅಂಬೇಡ್ಕರ್ ಜಯಂತ್ಯುತ್ಸವ: ಚಿಂತನೆಗೆ ವೇದಿಕೆಯಾಗಲಿ

ಶಹಾಬಾದ : ಎಲ್ಲ ಧರ್ಮ, ಜಾತಿಗಳಿಗೆ ಸಮಾನತೆ, ಸಮಾನ ಅವಕಾಶ ನೀಡಿದ ಸಂವಿಧಾನ ಕರ್ತೃ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತೋತ್ಸವಗಳು ಕಾಟಾಚಾರಕ್ಕೆ ನಡೆಯದೆ ಅವರ ಬದುಕು, ಆದರ್ಶ, ತತ್ವಗಳ ಗಂಭೀರ ಚಿಂತನೆಗಳ ಚರ್ಚೆಗೆ ವೇದಿಕೆಯಾಗಬೇಕು ಎಂದು ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಹೇಳಿದರು.

ಅವರು ಬುಧವಾರ ನಗರಸಭೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಬಡತನದಲ್ಲಿ ಜನಿಸಿ ಹಲವು ನೋವುಗಳ ಮಧ್ಯೆ ತಮ್ಮ ವಿದ್ಯಾಬ್ಯಾಸವನ್ನು ಪಡೆದ ಅಂಬೇಡ್ಕರ್ ಅವರು ಜಗತ್ತಿನ ಹಲವು ದೇಶಗಳ ಸಂವಿಧಾನ ಅಧ್ಯಯನ ಮಾಡಿ ಅಮೇರಿಕಾ, ಇಂಗ್ಯೆಂಡ್, ಐರ್ಲೆಂಡ್ ದೇಶದ ಪ್ರಮುಖ ಅಂಶ ತೆಗೆದುಕೊಂಡು ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವಂತ ಸಂವಿಧಾನ ನಮ್ಮ ದೇಶಕ್ಕೆ ಸಮರ್ಪಣೆ ಮಾಡಿದ ಕೀರ್ತಿ ಇದೆ ಎಂದರು.

ತಹಸೀಲ್ದಾರ ಸುರೇಶ ವರ್ಮಾ ಮಾತನಾಡಿ, ವ್ಯವಸ್ಥಿತ ಸಂವಿಧಾನವನ್ನು ದೇಶಕ್ಕೆ ನೀಡಿದ ಮಹಾನ್ ನಾಯಕ ಅಂಬೇಡ್ಕರ್. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲ ವರ್ಗದ ಜನ, ವಿಶೇಷವಾಗಿ ದಲಿತರು ಸಾಗಬೇಕಿದೆ ಎಂದರು.

ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಉಪಾಧ್ಯಕ್ಷೆ ಸಲೀಮಾಬೇಗಂ, ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೇಕಾರ, ನಗರಸಭೆಯ ವ್ಯವಸ್ಥಾಪಕ ಶಂಕರ ಇಂಜಗನೇರಿ, ನಗರಸಭೆಯ ಸದಸ್ಯರಾದ ಪಾರ್ವತಿ ಪವಾರ, ನಾಗರಾಜ ಕರಣಿಕ್, ಡಾ.ಅಹ್ಮದ್ ಪಟೇಲ್,ಆರೋಗ್ಯ ನಿರೀಕ್ಷಕ ಶಿವರಾಜಕುಮಾರ, ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ, ಕೃಷ್ಣಪ್ಪ ಕರಣಿಕ್, ಬಸವರಾಜ ಮಯೂರ, ರಾಜೇಶ ಯನಗುಂಟಿಕರ್, ಶಿವರಾಜ ಕೋರೆ,ಪ್ರವೀಣ ರಾಜನ್, ಸ್ನೇಹಲ್ ಜಾಯಿ,ಪೂಜಪ್ಪ ಮೇತ್ರೆ, ಗೌತಮ್ ಬಿದನಕರ್, ಶರಣು ಧನ್ನೇಕರ್ ಸೇರಿದಂತೆ ನಗರಸಭೆಯ ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

9 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

12 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

17 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

17 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

19 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420