ಟಿ.ಸಿ. ಟ್ರಾನಫಾರ್ಮಗಳ ದುರಸ್ತಿಯಾಗದೆ ರೈತರ ಗೋಳಾಟ

ಆಳಂದ:ಪ್ರವಾಹ ಬಂದು ರೈತರ ಜೀವನ ದುಸ್ತರವಾಗಿ ಸುಧಾರಿಸಿ ಕೊಳ್ಳುವ ಹೊತ್ತಿನಲ್ಲಿಯೇ ವಿದ್ಯುತ್ ಟಿ.ಸಿ ಟ್ರಾನಫಾರ್ಮಗಳು ದುರಸ್ತಿಯಾಗದೆ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ಕಡಗಂಚಿ ಉಪ-ವಿಭಾಗ ಕಚೇರಿಯಲ್ಲಿ ನಡೆದ ಗ್ರಾಹಕರ ಸಭೆಯಲ್ಲಿ ಅನೇಕ ರೈತರು ತಮ್ಮ ಸಮಸ್ಯೆಗಳನ್ನು ತೋಡಿಕೊಂಡರು.

ಈ ಸಂದರ್ಭದಲ್ಲಿ ನಿಂಬರ್ಗಾ ವಲಯ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಬಸವರಾಜ ಯಳಸಂಗಿ ಮಾತನಾಡಿ, ಕೊಳವೆ ಭಾವಿ ನೀರನ್ನು ಆಶ್ರಯಿಸಿ ಬೇಸಿಗೆ ಬೆಳೆ ಬೆಳೆದಿರುವ ರೈತರು ವಿದ್ಯುತ್ ಸಮಸ್ಯೆಯಿಂದ ನೀರು ಹಾಯಿಸಲು ಸಾಧ್ಯವಾಗದೇ ಬೆಳೆ ಒಣಗುವ ಆತಂಕ ಎದುರಾಗಿದೆ. ಅಲ್ಲದೆ ಟಿ.ಸಿ ಗಳು ಸುಟ್ಟು ಹೋಗಿವೆ, ಜವಳಿ-ಡಿ ಗ್ರಾಮದ ತೋಟದಲ್ಲಿನ ಟಿ.ಸಿ. ಹದಗೆಟ್ಟು, ಸುಮಾರು15 ದಿನಕ್ಕೂ ಮೇಲಾಗಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿಂಬರ್ಗಾ ಕೆಯಿಬಿ ಅಫಿಸ್ ಹಾಗೂ ಜೈ ಗೆ ತಿಳಿಸಲಾಗಿದೆ, ಅಲ್ಲದೆ ಗುಲ್ಬರ್ಗ ಮುಖ್ಯ ಅಧಿಕಾರಿಗಳಿಗೂ ತಿಳಿಸಲಾಗಿದೆ. ಆದರೂ ರೈತರ ಸಮಸ್ಯೆ ಪರಿಹಾರವಾಗಿಲ್ಲ. ಕೂಡಲೇ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ರೈತರಿಗೆ ಟಿ.ಸಿ ಉಪಯೋಗವಾಗುವಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂತೋಷ ಚವ್ಹಾಣ್, ಮುಖ್ಯ ಕಾರ್ಯನಿರ್ವಾಹಕ ಅಭಿಯಂತರರು, ಸುನಿಲ್ ಕುಮಾರ್ ಉಪವಿಭಾಗಾಧಿಕಾರಿ ಕಡಗಂಚಿ, ಸಾತಲಿಂಗಪ್ಪ ಸಹಾಯಕ ಅಭಿಯಂತರರು, ಸಂಜಯ ಮೇಲ್ವಿಚಾರಕರು ನಿಂಬರ್ಗಾ, ಮಲ್ಕಪ್ಪ ಶಾಖಾಧಿಕಾರಿ ನರೋಣ, ಅಮೃತ ಶಾಖಾಧಿಕಾರಿ ನಿಂಬರ್ಗಾ, ನಾಗಪ್ಪ ಗಿರಿ ಶಾಖಾಧಿಕಾರಿ ಕಡಗಂಚಿ,ನಿಂಬರ್ಗಾ ವಲಯ ಕ.ರ.ವೇ ಅಧ್ಯಕ್ಷ ಬಸವರಾಜ ಯಳಸಂಗಿ, ಚಂದ್ರಕಾಂತ ಅವಟೆ,ಭೀಮರಾಯ್ ಸನಗುಂದಿ,ಕಲ್ಯಾಣಿ ದೇವಕರೆ,ಹನಮಂತ ವಗ್ಗೆ, ದತ್ತು ಗೌರವಗೋಳ ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420