ಮಾಸ್ಕ ಧರಿಸದವರಿಗೆ ನಗರಸಭೆ ದಂಡ:ಮಾಸ್ಕ್ ಧರಿಸುವಂತೆ ಅರಿವು ಅಭಿಯಾನ

0
15

ಸುರಪುರ; ನಗರಸಭೆಯ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ನೇತೃತ್ವದಲ್ಲಿ ನಗರದಾದ್ಯಂತ ಸಂಚರಿಸಿ ಎಲ್ಲಾ ಅಂಗಡಿ ಮುಂಗಟ್ಟುಗಳಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಹಾಗು ಮಾಸ್ಕ್ ಕಡ್ಡಾಯವಾಗಿ ಧರಿಸುವಂತೆ ಅರಿವು ಮೂಡಿಸುವ ಅಭಿಯಾನ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ,ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ವೇಗವಾಗಿ ಹರಡುತ್ತಿದ್ದು ಜನರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡುವುದು ಕಡ್ಡಾಯವಾಗಿದೆ.ಈಗಾಗಲೆ ಸರಕಾರವು ನಿಯಮಗಳನ್ನು ಜಾರಿಗೊಳಿಸಿದ್ದು ಯಾವುದೇ ವ್ಯಾಪಾರಿಗಳು ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಧರಿಸದವರಿಗೆ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.

Contact Your\'s Advertisement; 9902492681

ನಗರದ ವಿವಿಧ ಅಂಗಡಿಗಳಲ್ಲಿನ ವ್ಯಾಪಾಯಿಗಳು ಮತ್ತು ಕೆಲ ಸಾರ್ವಜನಿಕರಿಗು ಮಾಸ್ಕ ಧರಿಸದ ಕಾರಣ ದಂಡ ವಿಧಿಸಿ ಎಚ್ಚರಿಕೆ ನೀಡಿದರು.ಮೊದಲ ದಿನದ ಅಭಿಯಾನದಲ್ಲಿ ಮಾಸ್ಕ್ ಧರಿಸದವರಿಗೆ ವಿಧಿಸಿದ ದಂಡದ ಮೊತ್ತ ೫೭೦೦ ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಪೌರಾಯುಕ್ತರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ನಗರಸಭೆ ವ್ಯವಸ್ಥಾಪಕ ಯಲ್ಲಪ್ಪ ನಾಯಕ ಸಿಬ್ಬಂದಿಗಳಾದ ಓಂಕಾರೆಪ್ಪ ಪೂಜಾರಿ ಲಕ್ಷ್ಮಣ ಕಟ್ಟಿಮನಿ ಶಿವಪುತ್ರ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here