ಶಹಾಬಾದ: ಸೋಲು ಗೆಲುವುಗಳು ಮುಖ್ಯವಲ್ಲ ನಾವು ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ಭೀಮ ಬೆಳಕು ಕಾಂಗ್ರೆಸ್ ಯುವ ಮುಖಂಡ ಸ್ನೇಹಲ್ ಜಾಯಿ ಹೇಳಿದರು.
ಅವರು ಹಳೆಶಹಾಬಾದನಲ್ಲಿ ಭೀಮ ಬೆಳಕು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ನಿಮಿತ್ತವಾಗಿ ಆಯೋಜಿಸಲಾದ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು. ಭೀಮ ಬೆಳಕು ಸಮಾಜ ಸೇವಾ ಟ್ರಸ್ಟ್ ಕ್ರೀಡೆ, ಕಲೆ, ಸಂಸ್ಕೃತಿಯನ್ನ ಉಳಿಸಬೇಕು ಎನ್ನುವ ಉದ್ದೇಶದಿಂದ
ವಾಲಿಬಾಲ್ ಪಂದ್ಯಾವಳಿಯನ್ನ ಅದ್ಧೂರಿಯಾಗಿ ಆಯೋಜಿಸಿಕೊಂಡು ಬರುತ್ತಿದ್ದಾರೆ. ಕ್ರೀಡೆಯಲ್ಲಿ ಭಾಗವಹಿಸುವಂತಹ ಸಂದರ್ಭದಲ್ಲಿ ಕ್ರೀಡಾಪಟುಗಳು ಕ್ರೀಡಾ ಮನೋಭಾವನೆಯಿಂದ ಆಡಬೇಕು ಸೋಲು ಗೆಲುವುಗಳು ಮುಖ್ಯವಲ್ಲ ನಾವು ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ಒಂದು ಕ್ರೀಡೆ ನಡೆಸುವುದು ಬಹಳ ಸುಲಭ, ಆದರೆ ಅವರ ಒಂದು ಸಂಘಟನೆಯ ಪದಾಧಿಕಾರಿಗಳನ್ನ, ಸದಸ್ಯರನ್ನ ಒಗ್ಗೂಡಿಸಿಕೊಂಡು ಕಾರ್ಯಕ್ರಮ ಆಯೋಜನೆ ಮಾಡುವುದು ಬಹಳ ಕ? ಸಾಧ್ಯ ಎಂದರು.
ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ ಹಂಪಣ್ಣ ಪೋತನಕರ್ ಮಾತನಾಡಿ, ಕ್ರೀಡೆಯು ದೈಹಿಕ, ಮಾನಸಿಕ, ಹಾಗೂ ಆರೋಗ್ಯಕ್ಕೆ ತುಂಬಾ ಸಹಕಾರಿಯಾಗುತ್ತದೆ ಎಂದರಲ್ಲದೆ ಕ್ರೀಡಾಪಟುಗಳು ಹೆಚ್ಚಾಗಿ ಕ್ರೀಡೆಯಲ್ಲಿ ತೊಡಗಿಕೊಂಡು ಉನ್ನತ ಮಟ್ಟಕ್ಕೆ ಬೆಳೆದು ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಿ. ಕ್ರೀಡೆಯು ಹಲವಾರು ಖಾಯಿಲೆಗಳನ್ನು ವಾಸಿ ಮಾಡುವಂತಹ ಶಕ್ತಿಯನ್ನು ಹೊಂದಿದ್ದು ಜತೆಗೆ ಮಾನಸಿಕ ಶಕ್ತಿಯು ಕೂಡ ಬೆಳೆಸಿಕೊಳ್ಳಬಹುದು ಎಂದು ಹೇಳಿದರು.
ಕ್ರೀಡಾ ಸಂಯೋಜಕ ಪ್ರೇಮ ಸಾಗರ,ಮೋಹನ ಪೋತನಕರ್,ರಾಹುಲ ಪೋತನಕರ್, ಸುನೀಲ ಮೆಂಗನ, ಪ್ರವೀಣ ಪೋತನಕರ್, ಸಾತವಿಕ್ ಪಂಚಿ,ಕೌಶಿಕ ಜಾಯಿ, ವಿಶ್ವ ಜಾಯಿ,ರವಿ ಮೆಂಗನ,ಅಝಿಲ ಮೆಂಗನ, ಬಸ್ಸು, ಪವನ ಪೋತನಕರ್, ನಾಗೇಶ ಮೆಂಗನ, ಕಾರ್ತಿಕ ಜಾಯಿ ಇತರರು ಇದ್ದರು.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…